ಗುರುವಾರ, ಮಾರ್ಚ್ 21, 2024
ಬಾಲಕ ನಾಪತ್ತೆ: ಪತ್ತೆಗೆ ಮನವಿ
ಬಳ್ಳಾರಿ,ಮಾ.21(ಕರ್ನಾಟಕ ವಾರ್ತೆ):
ಸಿರುಗುಪ್ಪ ಪಟ್ಟಣದ ಬೈಪಾಸ್ ರಸ್ತೆಯ 26 ನೇ ವಾರ್ಡ್ನ ನಿವಾಸಿ ಬಿ.ವೆಂಕಟೇಶ ಎನ್ನುವ 16 ವರ್ಷದ ಬಾಲಕ ಫೆ.01 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಿರುಗುಪ್ಪ ಪೊಲೀಸ್ ಠಾಣೆಯ ಪಿಎಸ್ಐ ಅವರು ತಿಳಿಸಿದ್ದಾರೆ.
ಚಹರೆ ಗುರುತು: ಎತ್ತರ 4.5 ಅಡಿ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ.
ಕಾಣೆಯಾದ ಸಂದರ್ಭದಲ್ಲಿ ಕೆಂಪು ಬಣ್ಣದ ಟಿ-ಶರ್ಟ್, ನೀಲಿ ಬಣ್ಣದ ಬರ್ಮುಡ ಧರಿಸಿರುತ್ತಾನೆ.
ಮೇಲ್ಕಂಡ ಚಹರೆಯುಳ್ಳ ಬಾಲಕನ ಬಗ್ಗೆ ಸುಳಿವು ಸಿಕ್ಕಲ್ಲಿ ಸಿರುಗುಪ್ಪ ಪೊಲೀಸ್ ಠಾಣೆಯ ಪಿಎಸ್ಐ ದೂ.08396-220333, ಸಿರುಗುಪ್ಪ ಸಿಪಿಐ ಮೊ.08396-220003, ಸಿರುಗುಪ್ಪ ಉಪ-ವಿಭಾಗ ಡಿಎಸ್ಪಿ ದೂ.083962-276000 ಹಾಗೂ ಬಳ್ಳಾರಿ ಎಸ್ಪಿ ಅವರ ದೂ.08392-258400 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ