ಮಂಗಳವಾರ, ಏಪ್ರಿಲ್ 16, 2024

ಏ.21 ರಂದು ಭಗವಾನ್ ಮಹಾವೀರ ಜಯಂತಿ

ಬಳ್ಳಾರಿ ಏ.16(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಸಂಸ್ಕøತಿ ಇಲಾಖೆ ವತಿಯಿಂದ ಏ.21 ರಂದು ಬೆಳಿಗ್ಗೆ 9 ಗಂಟೆಗೆ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ನಗರದ ಅನಂತಪುರ ರಸ್ತೆಯ ಸಾಂಸ್ಕøತಿಕ ಸಮುಚ್ಚಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಅವರು ತಿಳಿಸಿದ್ದಾರೆ. ಲೋಕಸಭಾ ಚುನಾವಣೆ-2024 ಪ್ರಯುಕ್ತ ನೀತಿ ಸಂಹಿತೆ ಜಾರಿಯಿರುವ ಹಿನ್ನಲೆಯಲ್ಲಿ ಭಗವಾನ್ ಮಹಾವೀರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳ ಮತ್ತು ಸಾಂಕೇತಿಕವಾಗಿ ಜಯಂತಿ ಆಚರಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ