ಮಂಗಳವಾರ, ಏಪ್ರಿಲ್ 23, 2024

ವ್ಯಕ್ತಿ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಏ.23(ಕರ್ನಾಟಕ ವಾರ್ತೆ): ನಗರದ ತಾಳೂರು ರಸ್ತೆಯ ನಿವಾಸಿ ಬಿ.ಅರವಿಂದ ಎನ್ನುವ 29 ವರ್ಷದ ವ್ಯಕ್ತಿ ಏ.17 ರಂದು ಕಾಣೆಯಾಗಿರುವ ಕುರಿತು ಬ್ರೂಸ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ. ಚಹರೆ ಗುರುತು: ಎತ್ತರ 06 ಅಡಿ, ಕೋಲು ಮುಖ, ಗೋದಿ ಮೈಬ್ಬಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತೆಲುಗು ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಹಸಿರು ಬಣ್ಣದ ಆಫ್ ಟಿ-ಶರ್ಟ್, ನೀಲಿ ಬಣ್ಣದ ಬರ್ಮೋಡಾ ಧರಿಸಿರುತ್ತಾನೆ. ಈ ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರೂಸ್‍ಪೇಟೆ ಪೊಲೀಸ್ ಠಾಣೆ ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ:08392258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ