ಶನಿವಾರ, ಏಪ್ರಿಲ್ 27, 2024

ಚಿಟಿಗಿನಹಾಳ್ ಗ್ರಾಮದ ನರೇಗಾ ಕೂಲಿಕಾರರಿಗೆ ಸ್ವೀಪ್ ಜಾಗೃತಿ ಕಾರ್ಯಕ್ರಮ | ಪ್ರಜಾಪ್ರಭುತ್ವ ಹಬ್ಬದಲ್ಲಿ ಎಲ್ಲರೂ ಪಾಲ್ಗೊಳ್ಳಿ: ಬಸವರಾಜ

ಬಳ್ಳಾರಿ,ಏ.27(ಕರ್ನಾಟಕ ವಾರ್ತೆ): ಲೋಕಸಭಾ ಚುನಾವಣೆಯ ಪ್ರಜಾಪ್ರಭುತ್ವ ಹಬ್ಬದಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಂಡು ತಪ್ಪದೇ ಮತದಾನ ಮಾಡಬೇಕು ಎಂದು ಹೆಚ್.ವೀರಾಪುರ ಗ್ರಾಪಂ ಕಾರ್ಯದರ್ಶಿ ಬಸವರಾಜ ಅವರು ಹೇಳಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಶನಿವಾರ ಮತದಾನ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಲು ಕುರುಗೋಡು ತಾಲ್ಲೂಕಿನ ಹೆಚ್.ವೀರಾಪುರ ಗ್ರಾಪಂ ನ ಚಿಟಿಗಿನಹಾಳ್ ಗ್ರಾಮದಲ್ಲಿ ನರೇಗಾ ಕಾಮಗಾರಿ ಸ್ಥಳದಲ್ಲಿ ಸ್ವೀಪ್ ಜಾಗೃತಿ ಹಾಗೂ ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತ್ರಿ ಅಭಿಯಾನದಲ್ಲಿ ಅವರು ಮಾತನಾಡಿದರು. ಮೇ 7 ರಂದು ಜರುಗುವ ಚುನಾವಣೆಯಲ್ಲಿ ತಪ್ಪದೇ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುವುದರ ಮೂಲಕ ಸುಭದ್ರ ದೇಶವನ್ನಾಗಿ ನಿರ್ಮಿಸೋಣ. ಮತದಾನ ದಿನದಂದು ನಾವು ಸಮಯ ವ್ಯರ್ಥ ಮಾಡದೆ ಚುನಾವಣೆ ಆಯೋಗ ನಿಗದಿಪಡಿಸಿದ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಮತ ಚಲಾಯಿಸಬೇಕು. ಗ್ರಾಮದಲ್ಲಿ ಅತಿಹೆಚ್ಚು ಮತದಾನವಾಗುವಂತೆ ನರೇಗಾ ಕೂಲಿಕಾರರು ಕೈಜೋಡಿಸಬೇಕು ಎಂದರು. ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತ್ರಿ ಅಭಿಯಾನ ಆರಂಭವಾಗಿದ್ದು, ನರೇಗಾ ಕೆಲಸಕ್ಕೆ ಕಲ್ಲೂರ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು. ವೈಯಕ್ತಿಕ ಕಾಮಗಾರಿಗಳನ್ನು ಮಾಡಿಕೊಳ್ಳುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ವೇಳೆ ಐಇಸಿ ಸಂಯೋಜಕ ಚಂದ್ರಶೇಖರ್, ಬಿಎಫ್‍ಟಿ ಮಾರೇಶ್, ಗ್ರಾಮ ಕಾಯಕಮಿತ್ರರಾದ ಅಮೃತ ಸೇರಿದಂತೆ ಗ್ರಾಪಂ ಸಿಬ್ಬಂದಿ ಕೂಲಿಕಾರರು ಹಾಜರಿದ್ದರು. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ