ಶುಕ್ರವಾರ, ಮೇ 17, 2024

ಸಿರುಗುಪ್ಪ: ಮೇ 18 ರಂದು ವಿದ್ಯುತ್ ಗ್ರಾಹಕರ ಕೊರತೆ ಸಭೆ

ಬಳ್ಳಾರಿ,ಮೇ 17(ಕರ್ನಾಟಕ ವಾರ್ತೆ): ಸಿರುಗುಪ್ಪ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್‍ಗೆ ಸಂಬಂಧಿಸಿದಂತೆ ಕುಂದುಕೊರತೆ ನಿವಾರಿಸಲು ಮೇ 18 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಿರುಗುಪ್ಪ ಉಪವಿಭಾಗ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ ಏರ್ಪಡಿಸಲಾಗಿದೆ. ವಿದ್ಯುತ್‍ಗೆ ಸಂಬಂಧಿಸಿದಂತೆ ಸಮಸ್ಯೆ ಇರುವ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಸಿರುಗುಪ್ಪ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ