ಗುರುವಾರ, ಮೇ 30, 2024

ವ್ಯಕ್ತಿ ಕಾಣೆ; ಪ್ರಕರಣ ದಾಖಲು

ಬಳ್ಳಾರಿ,ಮೇ 30(ಕರ್ನಾಟಕ ವಾರ್ತೆ): ಸಿರುಗುಪ್ಪ ತಾಲ್ಲೂಕಿನ ಹಾಗಲೂರು ಗ್ರಾಮದ ಭೀರಪ್ಪ ಗುಡಿ ಹತ್ತಿರದ 2ನೇ ವಾರ್ಡ್‍ನ ನಿವಾಸಿಯಾದ ವೆಂಕಟೇಶಲು ಎನ್ನುವ 57 ವರ್ಷದ ವ್ಯಕ್ತಿ ಮೇ 29 ರಂದು ಕಾಣೆಯಾಗಿರುವ ಕುರಿತು ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಬ್ ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ. ಚಹರೆ ಗುರುತು: ಅಂದಾಜು 5.2 ಅಡಿ, ಕೋಲುಮುಖ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಗುಲಾಬಿ ಬಣ್ಣದ ತುಂಬು ತೋಳಿನ ಅಂಗಿ ಮತ್ತು ಬಿಳಿ ಪಂಚೆ, ಕಪ್ಪು, ಬಿಳಿ ಮತ್ತು ಕೆಂಪು ಬಣ್ಣದ ಟರ್ಕಿ ಟವಲ್ ಧರಿಸಿರುತ್ತಾನೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ. ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಸಿರಿಗೇರಿ ಪೊಲೀಸ್ ಠಾಣೆಯ ದೂ.08396-24446, 9480803056 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ