ಶುಕ್ರವಾರ, ಮೇ 31, 2024
ಈಶಾನ್ಯ ಕರ್ನಾಟಕ ಪದವೀಧರರ ಕ್ಷೇತ್ರ ಚುನಾವಣೆ; ಮತದಾರರ ಸಹಾಯವಾಣಿ ಕೇಂದ್ರ ಸ್ಥಾಪನೆ
ಬಳ್ಳಾರಿ,ಮೇ 30(ಕರ್ನಾಟಕ ವಾರ್ತೆ):
ಈಶಾನ್ಯ ಕರ್ನಾಟಕ ಪದವೀಧರರ ಕ್ಷೇತ್ರ ಚುನಾವಣೆಗೆ ಜೂನ್ 03 ರಂದು ಮತದಾನ ನಡೆಯಲಿದ್ದು, ಚುನಾವಣೆಗೆ ಸಂಬಂಧ ಮತದಾರರು ತಮ್ಮ ಮತದಾನ ಕೇಂದ್ರ, ಮತದಾರರ ಪಟ್ಟಿಯ ಭಾಗದ ಸಂಖ್ಯೆ ಮತ್ತು ಕ್ರಮ ಸಂಖ್ಯೆಯ ವಿವರಗಳನ್ನು ತಿಳಿದುಕೊಳ್ಳಲು ಜಿಲ್ಲಾ ಮತ್ತು ತಾಲ್ಲೂಕುವಾರು ಮತದಾರರ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ ಎಂದು ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಜಿಲ್ಲೆ, ತಾಲ್ಲೂಕುವಾರು ಸಹಾಯವಾಣಿ ಸಂಖ್ಯೆ:
ಜಿಲ್ಲಾಧಿಕಾರಿಗಳ ಕಚೇರಿ- ದೂ.08392-277100, ಬಳ್ಳಾರಿ ತಹಶೀಲ್ದಾರರ ಕಚೇರಿ- ದೂ.08392-297472, ಸಂಡೂರು ತಹಶೀಲ್ದಾರರ ಕಚೇರಿ- ದೂ.08395-260241, ಸಿರುಗುಪ್ಪ ತಹಶೀಲ್ದಾರರ ಕಚೇರಿ- ದೂ.08396-220238, ಕುರುಗೋಡು ತಹಶೀಲ್ದಾರರ ಕಚೇರಿ- ದೂ.08393-200014, ಕಂಪ್ಲಿ ತಹಶೀಲ್ದಾರರ ಕಚೇರಿ- ದೂ.08394-295554 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
—————
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ