ಶುಕ್ರವಾರ, ಜೂನ್ 14, 2024
ಜೂ.15 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ
ಬಳ್ಳಾರಿ,ಜೂ.14(ಕರ್ನಾಟಕ ವಾರ್ತೆ):
ನಗರ ಜೆಸ್ಕಾಂ ಉಪ ವಿಭಾಗದ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಹಾಗೂ ಉಪ ವಿಭಾಗ-1 ಮತ್ತು ಉಪ ವಿಭಾಗ-2ರ ಸ್ಟ್ಯಾಂಡರ್ಡ್ ಆಫ್ ಫರ್ಪಾಮೆನ್ಸ್ ಬಗೆಗಿನ ಜಾಗೃತಿ ಸಭೆಯನ್ನು ಜೂ.15 ರಂದು ಬೆಳಿಗ್ಗೆ 11 ಗಂಟೆಗೆ ನಗರ ಜೆಸ್ಕಾಂ ಉಪವಿಭಾಗದಲ್ಲಿ ಏರ್ಪಡಿಸಲಾಗಿದೆ ಎಂದು ಜೆಸ್ಕಾಂನ ನಗರ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ತಿಳಿಸಿದ್ದಾರೆ.
ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ವಿದ್ಯುತ್ ಸಮಸ್ಯೆ ಕುರಿತ ಕುಂದು ಕೊರತೆಗಳಿದ್ದಲ್ಲಿ ಸಭೆಗೆ ಭಾಗವಹಿಸಿ ಬಗೆಹರಿಸಿಕೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ