ಗುರುವಾರ, ಜೂನ್ 27, 2024

ಜೂ.28, 29 ರಂದು ವಿಎಸ್‍ಕೆ ವಿವಿಯಲ್ಲಿ ರಾಜ್ಯಮಟ್ಟದ ವಾಲಿಬಾಲ್ ತೀರ್ಪುಗಾರರ ಪರೀಕ್ಷೆ ಹಾಗೂ ಕಾರ್ಯಾಗಾರ

ಬಳ್ಳಾರಿ,ಜೂ.27(ಕರ್ನಾಟಕ ವಾರ್ತೆ): ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗ, ಕರ್ನಾಟಕ ವಾಲಿಬಾಲ್ ಸಂಸ್ಥೆ ಬೆಂಗಳೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಸಹಯೋಗದೊಂದಿಗೆ ರಾಜ್ಯಮಟ್ಟದ ವಾಲಿಬಾಲ್ ತೀರ್ಪುಗಾರರ ಪರೀಕ್ಷೆ ಹಾಗೂ ಹೊಸ ನಿಯಮಗಳ ಕುರಿತು ಕಾರ್ಯಗಾರವನ್ನು ಜೂ.28 ಮತ್ತು 29 ರಂದು ವಿವಿಯ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳ ಕ್ರೀಡಾಪಟುಗಳು ಮತ್ತು ವೃತ್ತಿಪರರು ಭಾಗವಹಿಸಿ ಕಾರ್ಯಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಶ್ವವಿದ್ಯಾಲಯದ ಆಡಳಿತ ವರ್ಗದ ಕುಲಸಚಿವ ಎಸ್.ಎನ್.ರುದ್ರೇಶ ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ