ಶುಕ್ರವಾರ, ಜೂನ್ 28, 2024

ಯುವಕ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ ಜೂ.28(ಕರ್ನಾಟಕ ವಾರ್ತೆ): ನಗರದ ಅಗ್ನಿ ಶಾಮಕ ದಳ ಠಾಣೆಯಲ್ಲಿ 8 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ರಾಘವೇಂದ್ರ ಎನ್ನುವ 28 ವರ್ಷದ ಯುವಕ ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಕೌಲ್‍ಬಜಾರ್ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ಸಬ್ ಇನ್ಸ್‍ಪೆಕ್ಟರ್ ಅವರು ಮನವಿ ಮಾಡಿದ್ದಾರೆ. ಕಾಣೆಯಾದ ಯುವಕನ ಚಹರೆ: ಎತ್ತರ ಅಂದಾಜು 5.11 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಬರ್ಮೋಡ ಹಾಗೂ ಸಿಮೆಂಟ್ ಬಣ್ಣದ ಟೀ ಶರ್ಟ್ ಧರಿಸಿರುತ್ತಾನೆ. ಯುವಕನು ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ. ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಯುವಕನ ಬಗ್ಗೆ ಮಾಹಿತಿ ಸಿಕಲ್ಲಿ ಕೌಲ್‍ಬಜಾರ್ ಪೊಲೀಸ್ ಠಾಣೆಯ ದೂ:08392-240731, ಬಳ್ಳಾರಿ ಕಂಟ್ರೋಲ್ ರೂಂ ದೂ:08392-258100, ಕೌಲ್ ಬಜಾರ್ ಠಾಣೆಯ ಪಿಐ ಮೊ:9480803047, ಅಥವಾ ಪಿಎಸ್‍ಐ ಮೊ:9480203085 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ