ಸೋಮವಾರ, ಜುಲೈ 29, 2024

ಜು.30 ರಂದು ಮಾನವ ಕಳ್ಳ ಸಾಗಾಣಿಕೆ ದಿನಾಚರಣೆ

ಬಳ್ಳಾರಿ,ಜು.29(ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜು.30 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್‌ನ ಹೊಸ ನಜೀರ್‌ಸಾಬ್ ಸಭಾಂಗಣದಲ್ಲಿ ‘ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ’ ಅಂಗವಾಗಿ ಪ್ರತಿಜ್ಞಾ ವಿಧಿ ಕೈಗೊಳ್ಳುವ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್ ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ