ಶುಕ್ರವಾರ, ಆಗಸ್ಟ್ 16, 2024

ಸಂಡೂರು; ಆ.17 ರಂದು ವಿದ್ಯುತ್ ಕುಂದು ಕೊರತೆ ಸಭೆ

ಬಳ್ಳಾರಿ,ಆ.16(ಕರ್ನಾಟಕ ವಾರ್ತೆ): ಸಂಡೂರು ಜೆಸ್ಕಾಂನ ಉಪ ವಿಭಾಗದ ಕಾರ್ಯ ಮತ್ತು ಪಾಲನೆ ಕಚೇರಿಯಲ್ಲಿ ಆಗಸ್ಟ್ 17 ರಂದು ಮಧ್ಯಾಹ್ನ 3 ಗಂಟೆಗೆ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ. ಸಂಡೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಂಡು ವಿದ್ಯುತ್ ಸಂಬAಧಿತ ಸಮಸ್ಯೆಗಳನ್ನು ಹಾಗೂ ಇನ್ನಿತರ ಕೊರತೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಸಂಡೂರು ಜೆಸ್ಕಾಂ ಉಪ-ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ