ಬುಧವಾರ, ಸೆಪ್ಟೆಂಬರ್ 25, 2024

ಸೆ.26 ರಂದು ಕಾರ್ಮಿಕ ಕಾಯ್ದೆಗಳ ಕುರಿತ ತಾಲ್ಲೂಕು ಮಟ್ಟದ ಕಾರ್ಯಾಗಾರ

ಬಳ್ಳಾರಿ,ಸೆ.25(ಕರ್ನಾಟಕ ವಾರ್ತೆ): ಜಿಲ್ಲಾ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳು ಹಾಗೂ ಜಾರಿಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರು, ಉದ್ಯೋಗದಾತರು, ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಭಾಗವಾಗಿ ತಾಲೂಕು ಮಟ್ಟದ ಕಾರ್ಯಾಗಾರವನ್ನು ಸೆ.26 ರಂದು ಬೆಳಿಗ್ಗೆ 10.30 ಗಂಟೆಗೆ ಸಂಡೂರು ತಾಲೂಕಿನ ತೋರಣಗಲ್ಲಿನ ವಿದ್ಯಾನಗರ ಟೌನ್‌ಶಿಪ್‌ನ ಜೆಮ್ಯಾಕ್ಸ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು ಕಾರ್ಯಗಾರದಲ್ಲಿ ಭಾಗವಹಿಸಿ ಯಶ್ವಿಸಿಗೊಳಿಸಬೇಕು ಎಂದು ಬಳ್ಳಾರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಜಿ.ಖೈನೂರ್ ಅವರು ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ