ಶುಕ್ರವಾರ, ಸೆಪ್ಟೆಂಬರ್ 27, 2024

ಸೆ.28 ರಂದು ‘ಸ್ವಚ್ಛತಾ ದಿನಾಚರಣೆ’ ಕಾರ್ಯಕ್ರಮ

ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ಬಳ್ಳಾರಿ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ‘ಅ.02 ಗಾಂಧಿ ಜಯಂತಿ ಹಾಗೂ ಸ್ವಚ್ಛತಾ-ಹಿ-ಸೇವಾ ಅಭಿಯಾನ 2024’ರ ಅಂಗವಾಗಿ ‘ಸ್ವಭಾವ ಸ್ವಚ್ಛತಾ-ಸಂಸ್ಕಾರ ಸ್ವಚ್ಛತಾ’ ಎನ್ನುವ ಘೋಷವಾಕ್ಯದೊಂದಿಗೆ ಸೆ.28 ರಂದು ಬೆಳಿಗ್ಗೆ 07.30 ಗಂಟೆಗೆ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯದಲ್ಲಿ ಸ್ವಚ್ಛತಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ