ಗುರುವಾರ, ಸೆಪ್ಟೆಂಬರ್ 26, 2024
ಕರಾಮುವಿ: ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಲಿಬ್.ಐ.ಎಸ್ಸಿ., ಬಿ.ಎಸ್.ಡಬ್ಲೂö್ಯ,. ಎಂ.ಎ., ಎಂ.ಕಾA., ಎಂ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲೂö್ಯ., ಎಂ.ಲಿಬ್.ಐ.ಎಸ್ಸಿ., ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಶಿಕ್ಷಣಕ್ರಮಗಳಿಗೆ ಬಳ್ಳಾರಿಯ ಪ್ರಾದೇಶಿಕ ಕೇಂದ್ರದಲ್ಲಿ ಆನ್ಲೈನ್ ಮೂಲಕ ಪ್ರವೇಶಾತಿ ನೀಡಲಾಗುತ್ತಿದೆ.
ವಿಶ್ವವಿದ್ಯಾನಿಲಯದ ಅಂತರ್ಜಾಲ ತಿತಿತಿ.ಞsoumಥಿsuಡಿu.ಚಿಛಿ.iಟಿ ನಲ್ಲಿ ಲಭ್ಯವಿರುವ ಪ್ರಾಸ್ಪೆಕ್ಟಸ್ನಲ್ಲಿ ಎಲ್ಲಾ ವಿವರಗಳನ್ನು ನೀಡಿದ್ದು, ವಿದ್ಯಾರ್ಥಿಗಳು ಅದರನ್ವಯ ಅರ್ಹ ಶಿಕ್ಷಣಕ್ರಮಗಳಿಗೆ ವೆಬ್ಸೈಟ್ನಲ್ಲಿ ಲಭ್ಯವಿರುವ ಆನ್ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಪ್ರವೇಶಾತಿ ಮಾಡಿಕೊಳ್ಳಬಹುದಾಗಿದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ / ಎಕ್ಸ್ಸರ್ವೀಸ್ಮನ್ ವಿದ್ಯಾರ್ಥಿಗಳು, ಆಟೋ/ಕ್ಯಾಬ್ ಡ್ರೆöÊರ್ಸ್ ಮತ್ತು ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇ.10 ರಷ್ಟು ವಿಶೇಷ ರಿಯಾಯಿತಿ ಇದೆ.
ಕೋವಿಡ್ನಿಂದಾಗಿ ಮೃತರಾದ ಪೋಷಕರ ಮಕ್ಕಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ ಹಾಗೂ ತೃತಿಯ ಲಿಂಗಗಳಿಗೆ ಪೂರ್ಣಶುಲ್ಕ ವಿನಾಯಿತಿ ಇದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು.
ಅಕ್ಟೋಬರ್ 31 ರಂದು ಪ್ರವೇಶಾತಿ ಮಾಡಿಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ತೊಂದರೆಯಾದಲ್ಲಿ ಆನ್-ಲೈನ್ ಸಹಾಯವಾಣಿ 8800335638/8690544544 ಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕರಾಮುವಿ ಪ್ರಾದೇಶಿಕ ಕೇಂದ್ರವು, ಜಿಲ್ಲಾ ಕ್ರೀಡಾಂಗಣದ ಹತ್ತಿರ, ಪ್ರಾದೇಶಿಕ ವಿಜ್ಞಾನ ಕೇಂದ್ರದ ಹಿಂಭಾಗ, ನಲ್ಲಚೆರವು ಪ್ರದೇಶ, ಬಳ್ಳಾರಿ ಅಥವಾ ಮೊ.7892597159 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ನಿರ್ದೇಶಕ ಡಾ.ಹೆಚ್.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ