ಬುಧವಾರ, ಸೆಪ್ಟೆಂಬರ್ 25, 2024
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಮುದಾಯದವರು ತಮ್ಮ ಅಹವಾಲುಗಳಿದ್ದಲ್ಲಿ ಸಲ್ಲಿಸಿ
ಬಳ್ಳಾರಿ,ಸೆ.25(ಕರ್ನಾಟಕ ವಾರ್ತೆ):
ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಂಘದ ಮುಖ್ಯಸ್ಥರು, ಸದಸ್ಯರು, ದಲಿತ ಮುಖಂಡರು ಹಾಗೂ ಸಮುದಾಯದ ಜನರು ತಮ್ಮ ಸಮಸ್ಯೆಗಳ ಕುರಿತು ಅಹವಾಲು/ ಮನವಿ ಪತ್ರಗಳಿದ್ದಲ್ಲಿ ಸೆ.26 ರಂದು ಸಂಜೆ 5.00 ಗಂಟೆಯೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ.ನರೇAದ್ರಸ್ವಾಮಿ ಹಾಗೂ 18 ಗೌರವಾನ್ವಿತ ಶಾಸಕರು ಹಾಗೂ ಸದಸ್ಯರುಗಳನ್ನೊಳಗೊಂಡ ಸಮಿತಿಯು ಸೆ.27 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಜಿಲ್ಲೆಯಲ್ಲಿ ಇರುವ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯದವರ ಅಭಿವೃದ್ಧಿಗಾಗಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆಗಳ/ ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಸೆ.27 ರಂದು ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಪಂಚಾಯತ್ನ ನಜೀರ್ ಸಭಾಂಗಣದಲ್ಲಿ ನಡೆಸಲಿದ್ದಾರೆ.
ಹಾಗಾಗಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಂಘದ ಮುಖ್ಯಸ್ಥರು, ಸದಸ್ಯರು, ದಲಿತ ಮುಖಂಡರು ಹಾಗೂ ಸಮುದಾಯದ ಜನರು ತಮ್ಮ ಸಮಸ್ಯೆಗಳ ಕುರಿತು ಅಹವಾಲು/ಮನವಿ ಪತ್ರಗಳನ್ನು ಸಲ್ಲಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ