ಗುರುವಾರ, ಸೆಪ್ಟೆಂಬರ್ 12, 2024

ಪ್ರಜಾಸತ್ತಾತ್ಮಕ ತತ್ವಗಳು ಪುಟಿದೇಳಲಿ

ಬಳ್ಳಾರಿ,ಸೆ.12(ಕರ್ನಾಟಕ ವಾರ್ತೆ): ಜನರಿಂದ, ಜನರಿಗಾಗಿ, ಜನರಿಗೋಸ್ಕರವಾಗಿ ಇರುವುದೇ ಪ್ರಜಾಪ್ರಭುತ್ವ ವ್ಯವಸ್ಥೆ. ಇಂತಹ ಪ್ರಜಾಸತ್ತಾತ್ಮಕ ರಾಷ್ಟçದಲ್ಲಿ ಆಗಾಗ ಸಂವಿಧಾನ, ಪ್ರಜಾಪ್ರಭುತ್ವವನ್ನು ಪ್ರಶ್ನಿಸುವ ಧ್ವನಿಗಳು ಕೇಳಿ ಬರುತ್ತವೆ. ಇವೆಲ್ಲ ಅಜ್ಞಾನಗಳನ್ನು ಹೋಗಲಾಡಿಸುವುದಕ್ಕಾಗಿಯೇ ಪ್ರಜಾಪ್ರಭುತ್ವ ದಿನದ ಆಚರಣೆ. ಇಂತಹ ದಿನಾಚರಣೆಗೆ ಈಗ 17 ವರ್ಷ. ಇಂತಹ ಹೊತ್ತಲ್ಲಿ ಎಲ್ಲ ಸಮುದಾಯಗಳಲ್ಲಿ ಪ್ರಜಾಸತ್ತಾತ್ಮಕ ತತ್ವಗಳು ಪುಟಿದೇಳುವ ಅವಶ್ಯಕತೆ ಇದೆ. ಸ್ವಾತಂತ್ರö್ಯವನ್ನು ಸ್ವೇಚ್ಛಚಾರವಾಗಿ ಬಳಸಿಕೊಳ್ಳುವ, ಮಾನವೀಯ ಮೌಲ್ಯಗಳನ್ನೇ ಮರೆಯುತ್ತಿರುವ ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ದಿನಾಚರಣೆ ಮಹತ್ವಪೂರ್ಣ ಸಂದೇಶವಾಗಿದೆ. ಪ್ರತಿ ವರ್ಷವೂ ಒಂದೊAದು ಧ್ಯೇಯ ವಾಕ್ಯದಡಿ ಪ್ರಜಾಪ್ರಭತ್ವ ದಿನ ಆಚರಿಸಲಾಗುತ್ತಿದೆ. ಎಲ್ಲ ಜನರು ಒಂದುಗೂಡಿ ಪ್ರಜಾಪ್ರಭುತ್ವ ದಿನಕ್ಕಾಗಿ ಕೈ ಜೋಡಿಸಬೇಕಿದೆ. ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಪ್ರಪಂಚದಾದ್ಯAತ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತದೆ. 2007 ರಲ್ಲಿ ಅಂತಾರಾಷ್ಟಿçÃಯ ಮಟ್ಟದಲ್ಲಿ ಪ್ರಜಾಪ್ರಭುತ್ವ ದಿನ ಆಚರಣೆ ನಿರ್ಧಾರ ಅಂಗೀಕರಿಸಲಾಯಿತು. ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಸರ್ಕಾರಗಳನ್ನು ಉತ್ತೇಜಿಸುವ ಉದ್ದೇಶದಿಂದ ಇದು ಆಚರಣೆಗೆ ಬಂತು. 2008 ರಲ್ಲಿ ಈ ದಿನವನ್ನು ಮೊದಲ ಬಾರಿಗೆ ಆಚರಿಸಿದಾಗಿನಿಂದ, ನೂರಾರು ಸಂಸದೀಯ ಕಾರ್ಯಕ್ರಮಗಳನ್ನು ವಿಶ್ವಾದ್ಯಂತ ನಡೆಸಲಾಗಿದೆ. ಇವುಗಳಲ್ಲಿ ಫೋಟೋ ಸ್ಪರ್ಧೆಗಳು, ಮಕ್ಕಳಿಗಾಗಿ ಕಾರ್ಯಾಗಾರಗಳು, ನೇರ ದೂರದರ್ಶನದ ಚರ್ಚೆಗಳು, ರೇಡಿಯೋ ಫೋನ್-ಇನ್‌ಗಳು ಮತ್ತು ನಾಗರಿಕ ಸಮಾಜ ಸಂಸ್ಥೆಗಳೊAದಿಗೆ ಸಭೆಗಳು ನಡೆದಿವೆ. ಅಂತರರಾಷ್ಟಿçÃಯ ದಿನವು ಪ್ರಪಂಚದಾದ್ಯAತದ ಪ್ರಜಾಪ್ರಭುತ್ವದ ಸ್ಥಿತಿಯನ್ನು ಪರಿಶೀಲಿಸಲು ಒಂದು ಅವಕಾಶವಾಗಿದೆ. ಪ್ರತಿ ವರ್ಷವೂ ಒಂದು ನಿರ್ದಿಷ್ಟ ವಿಷಯವನ್ನು ಎತ್ತಿ ತೋರಿಸುತ್ತದೆ. ಹಿಂದಿನ ವಿಷಯಗಳು ಬಲವಾದ ಪ್ರಜಾಪ್ರಭುತ್ವಗಳನ್ನು ಒಳಗೊಂಡಿವೆ, ಸುಸ್ಥಿರ ಅಭಿವೃದ್ಧಿಗಾಗಿ 2030 ರ ಅಜೆಂಡಾಕ್ಕೆ ಪ್ರಜಾಪ್ರಭುತ್ವದ ಪ್ರಾಮುಖ್ಯತೆ, ನಾಗರಿಕರ ಧ್ವನಿಗಳನ್ನು ಬಲಪಡಿಸುವುದು, ಸಂವಾದ ಮತ್ತು ಒಳಗೊಳ್ಳುವಿಕೆ, ಹೊಣೆಗಾರಿಕೆ ಮತ್ತು ರಾಜಕೀಯ ಸಹಿಷ್ಣುತೆ ಸೇರಿದೆ. ಈ ಬಾರಿ ರಾಜ್ಯದಲ್ಲಿ ಬೃಹತ್ ಮಾನವ ಸರಪಳಿ ಜಾಥಾ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸುವುದಕ್ಕೆ ಸರಕಾರ ಮುಂದಾಗಿದೆ. ಸರ್ಕಾರದ ಈ ಧ್ಯೇಯಕ್ಕೆ ಎಲ್ಲರೂ ಭಾಗಿಯಾಗಬೇಕಿದೆ. ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಗೆ ನಮ್ಮ ಬೆಂಬಲವು ಪ್ರಜಾಪ್ರಭುತ್ವಕ್ಕೆ ಎಲ್ಲಾ ನಾಗರಿಕರ ಭಾಗವಹಿಸುವಿಕೆ ಅಗತ್ಯವಿರುತ್ತದೆ. ನ್ಯಾಯ, ಶಾಂತಿ, ಅಭಿವೃದ್ಧಿ ಮತ್ತು ಮಾನವ ಹಕ್ಕುಗಳನ್ನು ತಲುಪಿಸಲು ರಾಜ್ಯದ ಸಾಮರ್ಥ್ಯ ಮತ್ತು ಆದೇಶವನ್ನು ಪಾಲಿಸಲು ಇದು ಒಂದು ಅವಕಾಶವಾಗಿದೆ. ಇದೇ ಸೆಪ್ಟೆಂಬರ್ 15 ರಂದು ವಿಶ್ವಸಂಸ್ಥೆಯ ಘೋಷಿತ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನವನ್ನು ಬೀದರ್‌ನಿಂದ ಚಾಮರಾಜನಗರದವರೆಗೆ ವಿಶ್ವದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸುವ ಮೂಲಕ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪ್ರಜಾಸತ್ತಾತ್ಮಕ ತತ್ವಗಳು ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ಪ್ರಜಾಪ್ರಭುತ್ವದ ಕಡೆಗೆ ಕರ್ನಾಟಕದ ನಿರಂತರ ಬದ್ಧತೆಗೆ ಪ್ರದರ್ಶಿಸಲು ಬೀದರ್‌ನಿಂದ ಚಾಮರಾಜನಗರದ ವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಕೆಲಸವನ್ನು ಘನವೆತ್ತ ನಮ್ಮ ಸರ್ಕಾರ ಮಾಡಲಿದೆ. ಕರ್ನಾಟಕದ ಎಲ್ಲಾ 31 ಜಿಲ್ಲೆಗಳನ್ನು ಸಂಪರ್ಕಿಸುವ, ಸುಮಾರು 2,500 ಕಿ.ಮೀ. ಮಾನವ ಸರಪಳಿ ನಿರ್ಮಿಸಲಾಗುತ್ತಿದ್ದು, ಇದು ವಿಶ್ವದಲ್ಲಿಯೇ ಅತಿ ಉದ್ದದ ಮಾನವ ಸರಪಳಿಯಾಗಿದೆ. ಪ್ರತಿ ಕಿಲೋಮೀಟರ್‌ಗೆ ಸರಾಸರಿ 1,000 ಕ್ಕೂ ಹೆಚ್ಚು ಜನರು ಭಾಗವಹಿಸುತ್ತಾರೆ. ಸುಮಾರು 25 ಲಕ್ಷ ಜನರು ಇದರಲ್ಲಿ ಭಾಗವಹಿಸುತ್ತಾರೆ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ನಮ್ಮ ಕೆಲಸವು ಪ್ರಜಾಪ್ರಭುತ್ವವನ್ನು ನಿರ್ಮಿಸುವ ನಮ್ಮ ಪ್ರಯತ್ನಗಳ ಭಾಗವಾಗಿದೆ. *ಬನ್ನಿ ಬಳ್ಳಾರಿಯಲ್ಲೂ ಭಾಗವಹಿಸಿ:* ಬಳ್ಳಾರಿಯಲ್ಲೂ ಈ ದಿನವನ್ನು ಸಂಭ್ರಮದಿAದ ಆಚರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ. 32000 ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳನ್ನೊಳಗೊಂಡAತೆ ವಿಜಯನಗರ ಜಿಲ್ಲೆಯ ಗಡಿಭಾಗದ ಭುವನಹಳ್ಳಿ- ಸಂಡೂರು ತಾಲ್ಲೂಕಿನ ಕುರೆಕುಪ್ಪ-ವಡ್ಡು-ಬನ್ನಿಹಟ್ಟಿ-ಲಿಂಗದಹಳ್ಳಿ-ಉಬ್ಬಳಗAಡಿ-ಯು.ರಾಜಾಪುರ-ಯು.ಮಲ್ಲಾಪುರ ಸಂತೇಗುಡ್ಡ-ಮೇಲಿನಕಣಿವೆ (ಚಿತ್ರದುರ್ಗ ಜಿಲ್ಲೆಯ ಗಡಿ ಭಾಗ) ವರೆಗೆ ಸುಮಾರು 45 ಕಿಮೀ ಉದ್ದದ ಮಾನವ ಸರಪಳಿಯನ್ನು ನಿರ್ಮಿಸಿ ಅತ್ಯಂತ ಉತ್ಸಾಹದಿಂದ ಪ್ರಜಾಪ್ರಭುತ್ವದ ಘನತೆಯನ್ನು ಎತ್ತಿ ಹಿಡಿಯುವ ಗೌರವಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ. ಎಲ್ಲರೂ ಬನ್ನಿ ಭಾಗವಹಿಸಿ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಿ, ಸಂಭ್ರಮಿಸಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ