ಬುಧವಾರ, ಅಕ್ಟೋಬರ್ 23, 2024
ಕಿತ್ತೂರು ರಾಣಿ ಚೆನ್ನಮ್ಮ ಸ್ಪೂರ್ತಿಧಾಯಕ ಮಹಿಳೆ: ಮೇಯರ್ ಮುಲ್ಲಂಗಿ ನಂದೀಶ್
ಬಳ್ಳಾರಿ,ಅ.23(ಕರ್ನಾಟಕ ವಾರ್ತೆ):
ಬ್ರಿಟಿಷರ ವಿರುದ್ಧ ಹೋರಾಡಿದ ಕೆಚ್ಚೆದೆಯ ಸ್ವಾತಂತ್ರö್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರು ಸ್ಪೂರ್ತಿಧಾಯಕ ಮಹಿಳೆಯಾಗಿದ್ದು, ಅನೇಕ ವೀರ ಮಹಿಳೆಯರಿಗೆ ಪ್ರೇರಣೆಯಾಗಿದ್ದಾರೆ ಎಂದು ಮಹಾನಗರ ಪಾಲಿಕೆಯ ಮೇಯರ್ ನಂದೀಶ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಬುಧವಾರ ಆಯೋಜಿಸಿದ್ದ ಸ್ವಾತಂತ್ರö್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶ್ರೇಷ್ಠ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರು ತಮ್ಮ ಏಳನೇ ವಯಸ್ಸಿನಲ್ಲಿಯೇ ಕುದುರೆ ಸವಾರಿ, ಬಿಲ್ಲು ವರಸೆ, ಕತ್ತಿ ವರಸೆಯಲ್ಲಿ ನಿಪುಣೆ ಹೊಂದಿದ್ದವರು. ಚಿಕ್ಕಂದಿನಿAದಲೇ ವೀರತ್ವವನ್ನು ಮೈಗೂಡಿಸಿಕೊಂಡಿದ್ದವರು. ಚೆನ್ನಮ್ಮ ಅವರ ಧೈರ್ಯ, ಶೌರ್ಯವೂ ವಿಶ್ವಕ್ಕೆ ಮಾದರಿಯಾಗಿದೆ. ಅವರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರೂ ಪಾಲಿಸೋಣ ಎಂದು ಕರೆ ನೀಡಿದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಬಿ ಸಿದ್ಧಲಿಂಗಪ್ಪ ಅವರು ವಿಶೇಷ ಉಪನ್ಯಾಸ ಮಾತನಾಡಿ, ಕಿತ್ತೂರು ಸಂಸ್ಥಾನವು ಭಾರತದಲ್ಲಿ ಮೊಟ್ಟ ಮೊದಲು ಸ್ವಾತಂತ್ರö್ಯದ ಕಹಳೆ ಮೊಳಗಿಸಿದ್ದು, ಇಲ್ಲಿನ ಮಣ್ಣು ವೀರಾ ಸೇನಾನಿಗಳ ರಕ್ತದಿಂದ ಪಾವಿತ್ರö್ಯತೆಗೊಂಡಿದೆ ಎಂದರು.
ಕಿತ್ತೂರು ರಾಣಿ ಚೆನ್ನಮ್ಮ ಅವರು 1778 ರ ಸೆಪ್ಟಂಬರ್ 14 ರಲ್ಲಿ ಜನಿಸಿದ್ದಾರೆ. 1824 ರ ಅಕ್ಡೋಬರ್ 23 ರಂದು ಬ್ರಿಟಿಷರ ವಿರುದ್ಧ ಹೋರಾಡಿ ವೈರಿಗಳನ್ನು ಮೆಟ್ಟಿನಿಂತು ವಿಜಯೋತ್ಸವ ಮೆರೆದ ಸಂಭ್ರಮದ ಕ್ಷಣವೇ ಈ ದಿನ ವೀರೋತ್ಸವದ ಸುದಿನವಾಗಿದೆ ಎಂದು ತಿಳಿಸಿದರು.
ಇತಿಹಾಸದ ಧೃವತಾರೆ ಕಿತ್ತೂರು ರಾಣಿ ಚೆನ್ನಮ್ಮ ಅವರು ತನ್ನ ಸಾಮ್ರಾಜ್ಯದ ರಕ್ಷಣೆಗಾಗಿ ಸಮರ್ಪಣಾ ಮನೋಭಾವ ಹೊಂದಿದ್ದರು. ಅವರ ದೇಶಪ್ರೇಮ, ಆತ್ಮವಿಶ್ವಾಸ ಕುರಿತು ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡುವ ಕೆಲಸವಾಗಬೇಕು ಎಂದು ವಿವರಿಸುತ್ತಾ, ಕಿತ್ತೂರು ರಾಣಿ ಚೆನ್ನಮ್ಮ ಅವರ ಜೀವನ ಸ್ವಾರಸ್ಯವನ್ನು ವಿವರಿಸಿದರು.
ಇದೇ ವೇಳೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಗಣ್ಯರೆಲ್ಲರೂ ಪುಷ್ಪನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಂಪ್ಲಿಯ ಶೈಲಾ ದೇವರಮನೆ ಅವರು ದೇಶಭಕ್ತಿ ಗೀತೆಗಳು ಪ್ರಸ್ತುತ ಪಡಿಸಿದರು.
ಸ್ವಾತಂತ್ರö್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಯು ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರದೊಂದಿಗೆ ವಿವಿಧ ಕಲಾ ವಾದ್ಯಗಳ ಮೂಲಕ ನಗರದ ಹೆಚ್.ಆರ್.ಗವಿಯಪ್ಪ ವೃತ್ತದಿಂದ ಆರಂಭಗೊAಡು ಬಸವೇಶ್ವರ ಪುತ್ಥಳಿ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರಲ್ಲಿನ ವೇದಿಕೆ ಕಾರ್ಯಕ್ರಮದವರೆಗೆ ತಲುಪಿ ಸಂಪನ್ನಗೊAಡಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬಿ.ನಾಗರಾಜ, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಅಧ್ಯಕ್ಷ ಜಿ.ನೀಲಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿವೃತ್ತ ಉಪನಿರ್ದೇಶಕ ಡಿ.ಕೊಟ್ರಪ್ಪ, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಎನ್.ಎಂ ರಾಜೇಶ್ವರಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಾಗವೇಣಿ, ಬ್ರೂಸ್ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ಸಿಂಧೂರು.ಎA., ಪಾಲಿಕೆಯ ಸದಸ್ಯರಾದ ಸುರೇಖಾ ಮಲ್ಲನಗೌಡ, ಈರಮ್ಮ ಸುರೇಂದ್ರ ಸೇರಿದಂತೆ ಸಮಾಜದ ಮುಖಂಡರು, ಸಾರ್ವಜನಿಕರು ಹಾಗೂ ಇತರರು ಉಪಸ್ಥತಿತರಿದ್ದರು.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)





ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ