ಸೋಮವಾರ, ಅಕ್ಟೋಬರ್ 28, 2024

ಯುವಕ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಅ.28(ಕರ್ನಾಟಕ ವಾರ್ತೆ): ತೋರಣಗಲ್ಲು ಪೊಲೀಸ್ ಠಾಣೆ ವ್ಯಾಪ್ತಿಯ ತೋರಣಗಲ್ಲು ರೈಲ್ವೇ ಸ್ಟೇಷನ್ ನಿವಾಸಿಯಾದ ರಾಮಕೃಷ್ಣ ಕನ್ನೆಟಿ ಎನ್ನುವ 28 ವರ್ಷದ ಯುವಕ ಅ.14 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲೆಯಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಯುವಕನ ಚಹರೆ ವಿವರ: ಎತ್ತರ 5.8 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಕಪ್ಪು ಮತ್ತು ಬಿಳಿ ಬಣ್ಣದ ತುಂಬು ತೋಳಿನ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ತೆಲುಗು, ಹಿಂದಿ ಭಾಷೆ ಮಾತನಾಡುತ್ತಾನೆ. ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ತೋರಣಗಲ್ಲು ಪೊಲೀಸ್ ಠಾಣೆಯ ದೂ.083935-250100, ಮೊ.9480803062 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ