ಸೋಮವಾರ, ಅಕ್ಟೋಬರ್ 28, 2024
ಯುವಕ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಅ.28(ಕರ್ನಾಟಕ ವಾರ್ತೆ):
ತೋರಣಗಲ್ಲು ಪೊಲೀಸ್ ಠಾಣೆ ವ್ಯಾಪ್ತಿಯ ತೋರಣಗಲ್ಲು ರೈಲ್ವೇ ಸ್ಟೇಷನ್ ನಿವಾಸಿಯಾದ ರಾಮಕೃಷ್ಣ ಕನ್ನೆಟಿ ಎನ್ನುವ 28 ವರ್ಷದ ಯುವಕ ಅ.14 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲೆಯಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಯುವಕನ ಚಹರೆ ವಿವರ: ಎತ್ತರ 5.8 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಕಪ್ಪು ಮತ್ತು ಬಿಳಿ ಬಣ್ಣದ ತುಂಬು ತೋಳಿನ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ತೆಲುಗು, ಹಿಂದಿ ಭಾಷೆ ಮಾತನಾಡುತ್ತಾನೆ.
ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ತೋರಣಗಲ್ಲು ಪೊಲೀಸ್ ಠಾಣೆಯ ದೂ.083935-250100, ಮೊ.9480803062 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ