ಶುಕ್ರವಾರ, ನವೆಂಬರ್ 29, 2024
ವ್ಯಕ್ತಿ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ನ.29(ಕರ್ನಾಟಕ ವಾರ್ತೆ):
ನಗರದ ಉಮಾಶಂಕರ್ ಕಾಲೋನಿಯ 1ನೇ ಕ್ರಾಸ್ನ ಹುಲಿಗೆಮ್ಮ ಗುಡಿ ಹತ್ತಿರದ ನಿವಾಸಿ ಗಂಗಾಧರ ಎನ್ನುವ 34 ವರ್ಷದ ವ್ಯಕ್ತಿಯು ನ.22 ರಂದು ಕಾಣೆಯಾಗಿರುವ ಕುರಿತು ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ ಗುರುತು: ಅಂದಾಜು 5.6 ಅಡಿ ಎತ್ತರ, ಅಗಲಮುಖ, ಗೋಧಿ ಮೈಬಣ್ಣ, ಕಪ್ಪು ತಲೆ ಕೂದಲು, ದುಂಡನೇಯ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಕಟುನೀಲಿ ಬಣ್ಣದ ತುಂಬುತೋಳಿನ ಅಂಗಿ, ಬ್ರೌನ್ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ವ್ಯಕ್ತಿಯು ಕನ್ನಡ, ಹಿಂದಿ, ತೆಲುಗು, ಭಾಷೆ ಮಾತನಾಡುತ್ತಾನೆ. ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್ಪೇಟೆ ಪೊಲೀಸ್ ಠಾಣೆಯ ದೂ.08392-272022, ಪಿಐ 9480803045, 9480803091 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ