ಗುರುವಾರ, ನವೆಂಬರ್ 14, 2024
ಯುವಕ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ನ.14(ಕರ್ನಾಟಕ ವಾರ್ತೆ):
ನಗರದ ರೂಪನಗುಡಿ ರಸ್ತೆಯ ಹುಲಿಗೆಮ್ಮ ಗುಡಿ ಹತ್ತಿರದ ರಾಜ್ಯೋತ್ಸವ ನಗರದ ನಿವಾಸಿಯಾದ 22 ವರ್ಷದ ಸಾಯಿ ಕಿರಣ್ ಎಂಬ ಯುವಕ 2023 ಜ.05 ರಂದು ಕಾಣೆಯಾಗಿರುವ ಕುರಿತು ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪತ್ತೆಗೆ ಸಹಕರಿಸಬೇಕು ಎಂದು ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ಚಹರೆ ಗುರುತು: ಅಂದಾಜು 5.5 ಅಡಿ ಎತ್ತರ, ಕೆಂಪು ಮೈಬಣ್ಣ, ಸದೃಢ ಮೈಕಟ್ಟು, ಕಪ್ಪು ಕೂದಲು ಹೊಂದಿರುತ್ತಾನೆ.
ಕಾಣೆಯಾದ ಸಂದರ್ಭದಲ್ಲಿ ಯುವಕನು ಕ್ರೀಮ್ ಬಣ್ಣದ ಅಂಗಿ, ಬಿಳಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, ಬ್ರೂಸ್ಪೇಟೆ ಪೊಲೀಸ್ ಠಾಣೆ ದೂ.08392-272022, ಪಿಐ ಮೊ.09480803045 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ