ಮಂಗಳವಾರ, ಡಿಸೆಂಬರ್ 31, 2024
ಮಹಿಳೆಯರು ಸೃಜನಾತ್ಮಕ ಕೌಶಲ್ಯ ಬೆಳೆಸಿಕೊಳ್ಳಬೇಕು: ಗಿರೀಶ್.ವಿ ಕುಲಕರ್ಣಿ
ಬಳ್ಳಾರಿ,ಡಿ.31(ಕರ್ನಾಟಕ ವಾರ್ತೆ):
ಮಹಿಳಾ ಸಬಲೀಕರಣ ಸಮಾಜದಲ್ಲಿ ಬಹುಮುಖ್ಯವಾಗಿದ್ದು, ಮಹಿಳೆಯರು ವಿವಿಧ ರೀತಿಯ ಸ್ವ-ಉದ್ಯೋಗ ಮಾಡಲು ಸೃಜನಾತ್ಮಕ ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದು ಕೆನರಾ ಬ್ಯಾಂಕ್ನ ಲೀಡ್ ಡಿಸ್ಟಿçÃಕ್ ಮ್ಯಾನೇಜರ್ ಗಿರೀಶ ವಿ ಕುಲಕರ್ಣಿ ಅವರು ಹೇಳಿದರು.
ಕೆನರಾ ಬ್ಯಾಂಕ್ ವತಿಯಿಂದ ಉಚಿತ ಹೊಲಿಗೆ ಯಂತ್ರ ತರಬೇತಿ ಹೊಂದಿದ ಮಹಿಳೆಯರಿಗೆ ಸಂಸ್ಥೆಯ ಆವರಣದಲ್ಲಿ ಮಂಗಳವಾರ ಟೂಲ್ಕಿಟ್ ವಿತರಿಸಿ ಅವರು ಮಾತನಾಡಿದರು.
ಮಹಿಳೆಯರು ಮನೆಯಲ್ಲಿ ಕುಳಿತು ಟೈಲರಿಂಗ್ ಮಾಡುವುದರಿಂದ ಸ್ವಾವಲಂಬಿ ಜೀವನ ರೂಪಿಸಿಕೊಳ್ಳುತ್ತಾರೆ ಹಾಗೂ ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಈ ಹೋಲಿಗೆ ತರಬೇತಿ ಸಹಕಾರಿಯಾಗಲಿದೆ ಎಂದರು.
ಕೆನರಾ ಬ್ಯಾಂಕ್ನ ವಿಭಾಗೀಯ ಪ್ರಬಂಧಕರಾದ ಮಾಲತಿ ಅವರು ಮಾತನಾಡಿ, ಮಹಿಳೆಯರು ಮನೆಯಲ್ಲಿ ಟೈಲರಿಂಗ್ ಮಾಡಿಕೊಂಡು ಆರ್ಥಿಕವಾಗಿ ಕುಟುಂಬ ನಿರ್ವಹಣೆಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.
ನಿರ್ದೇಶಕರಾದ ರಾಜೆಸಾಬ್.ಎಚ್ ಎರಿಮನಿ ಮಾತನಾಡಿ, ಸಂಸ್ಥೆಯ ತರಬೇತಿಯಲ್ಲಿ ಕೌಶಲ್ಯದ ಜೊತೆಗೆ ಆತ್ಮವಿಶ್ವಾಸ, ವ್ಯಕ್ತಿತ್ವ ವಿಕಸನದ ಮಾಹಿತಿ ನೀಡಲಾಗುತ್ತಿದ್ದು, ತಮ್ಮ ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ನ ಎನ್ಆರ್ಎಲ್ಎಂ ಘಟಕದ ರಾಜೇಂದ್ರ ವಿಜಯ ಕುಮಾರ ಸೇರಿದಂತೆ ಜಡೆಪ್ಪ, ದಿನೇಶ, ಸಿದ್ದಲಿಂಗಮ್ಮ, ಮಂಜುಳಾ, ಸಂತೋಷ ಕುಮಾರ್, ಕಿರಣ ಕುಮಾರ ಹಾಗೂ ಶಿಭಿರಾರ್ಥಿಗಳು ಇದ್ದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ