ಶುಕ್ರವಾರ, ಜನವರಿ 24, 2025

ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರ ಪ್ರವಾಸ ಕಾರ್ಯಕ್ರಮ

ಬಳ್ಳಾರಿ,ಜ.24(ಕರ್ನಾಟಕ ವಾರ್ತೆ): ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಜ.25 ಮತ್ತು 26 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ಜ.25 ರಂದು ಬೆಳಿಗ್ಗೆ 06.30 ಗಂಟೆಗೆ ಬೆಂಗಳೂರಿನಿAದ ಹೊರಟು ಬೆಳಿಗ್ಗೆ 11.30 ಗಂಟೆಗೆ ಬಳ್ಳಾರಿಗೆ ಆಗಮಿಸುವರು. ಬಳಿಕ ಮಧ್ಯಾಹ್ನ 02 ಗಂಟೆಗೆ ಪಕ್ಷದ ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 02.30 ಕ್ಕೆ ಬಳ್ಳಾರಿ ಜಿಲ್ಲೆಯ ಇಂದಿರಾ ಕ್ಯಾಂಟೀನ್ ಹಾಗೂ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡುವರು. ನಂತರ ಮಧ್ಯಾಹ್ನ 03 ಗಂಟೆಗೆ ಜಿಲ್ಲಾಡಳಿತನ ಭವನದ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬAಧಿಸಿದAತೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬಳಿಕ ವಾಸ್ತವ್ಯ ಮಾಡುವರು. ಜ.26 ರಂದು ಬೆಳಿಗ್ಗೆ 08 ಗಂಟೆಗೆ ಡಾ.ರಾಜ್‌ಕುಮಾರ್ ಉದ್ಯಾನವನದ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಗೌರವ ಸಮರ್ಪಣೆ ಮಾಡುವರು. ಬೆಳಿಗ್ಗೆ 08.10 ಕ್ಕೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತ(ಮೋತಿ ಸರ್ಕಲ್)ದ 150 ಅಡಿ ಎತ್ತರದ ರಾಷ್ಟç ಧ್ವಜ ನೆರವೇರಿಸುವರು. ನಂತರ 08.30 ಕ್ಕೆ ಬಳ್ಳಾರಿ ವೈದ್ಯಕೀಯ ಕಾಲೇಜು ಮುಂಭಾಗದ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಗೌರವ ಸಮರ್ಪಣೆ ಮಾಡುವರು. ಬಳಿಕ ಬೆಳಿಗ್ಗೆ 09 ಗಂಟೆಗೆ ಬಿಮ್ಸ್ ಮೈದಾನದ ಆವರಣದಲ್ಲಿ ಜಿಲ್ಲಾಡಳಿತ ವತಿಯಿಂದ ಏರ್ಪಡಿಸಿರುವ 76 ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟç ಧ್ವಜಾರೋಹಣಾ ಮತ್ತು ರಾಷ್ಟçಗೀತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 02 ಗಂಟೆಗೆ ಬಳ್ಳಾರಿಯಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಕೆ.ಮುರಳಿಧರ ಅವರು ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ