ಶುಕ್ರವಾರ, ಫೆಬ್ರವರಿ 28, 2025

ಮಾ.01 ರಂದು ವಿವಿಧ ಮಹನೀಯರ ಜಯಂತಿಯ ಪೂರ್ವಭಾವಿ ಸಭೆ

ಬಳ್ಳಾರಿ,ಫೆ.28(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಮಾ.12 ರಂದು ರೇಣುಕಾರ್ಚಾಯ, ಮಾ.14 ರಂದು ಯೋಗಿನಾರೇಯಣ ಯತೀಂದ್ರ ಜಯಂತಿ ಹಾಗೂ ಮಾ.28 ರಂದು ಅಗ್ನಿಬನ್ನಿರಾಯ ಜಯಂತಿ ಆಚರಣೆ ಕುರಿತು ಮಾ.01 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ. ಮಾ.01 ರಂದು ಮದ್ಯಾಹ್ನ 01 ಗಂಟೆಗೆ ರೇಣುಕಾರ್ಚಾಯ ಜಯಂತಿ, 01.15 ಗಂಟೆಗೆ ಯೋಗಿನಾರೇಯಣ ಯತೀಂದ್ರ ಜಯಂತಿ, 01.30 ಗಂಟೆಗೆ ಅಗ್ನಿಬನ್ನಿರಾಯ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಯಲಿದೆ. ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಅಧ್ಯಕ್ಷತೆ ವಹಿಸುವರು. ಸಭೆಗೆ ಸಮುದಾಯದ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು ಎಂದು ಕನ್ನಡ ಮತ್ತು ಸಂಸ್ಕçತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ