ಶುಕ್ರವಾರ, ಫೆಬ್ರವರಿ 28, 2025
ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ್ ಭಾರತ್ ಮಿಷನ್ ಅರಿವು ಕಾರ್ಯಕ್ರಮ
ಬಳ್ಳಾರಿ.ಫೆ.28(ಕರ್ನಾಟಕ ವಾರ್ತೆ):
ಜಲಜೀವನ್ ಮಿಷನ್ ಹಾಗೂ ಸ್ವಚ್ಛ್ ಭಾರತ್ ಮಿಷನ್ ಯೋಜನೆಗಳ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸಲು ಸುರಭಿ ಸಂಸ್ಥೆಯ ಮೂಲಕ ವಿವಿಧ ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆ ಕಾರ್ಯಕ್ರಮವನ್ನು ಶುಕ್ರವಾರ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿಗಳಾದ ವಾಗೇಶ್ ಶಿವಾಚಾರ್ಯ ಅವರು ವಹಿಸಿಕೊಂಡಿದ್ದರು.
ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ರಾಜ್ಯ ಗ್ರಾಮೀಣಾ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಂಪನ್ಮೂಲ ವ್ಯಕ್ತಿ ಡಾ.ಅಚಿತ್ ರಾವ್, ಮೈಸೂರಿನ ಎಸ್ಐಆರ್ಡಿ ಕೃಷ್ಣ ಕುಮಾರ್ ಅವರು ಸೇರಿದಂತೆ ಸಹಾಯಕ ಲೆಕ್ಕಾಧಿಕಾರಿಗಳು, ಪ್ರಭಾರೆ ಸಹಾಯಕ ನಿರ್ದೇಶಕರು(ಪಂ.ರಾಜ್), ಗಿWSಅ/ಗ್ರಾಮ ಪಂಚಾಯತಿ ಅಧ್ಯಕ್ಷರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತಿ ಇತರೇ ಅಧಿಕಾರಿ/ಸಿಬ್ಬಂದಿಗಳು ಉಪಸ್ಥಿತರಿದ್ದರು.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ