ಗುರುವಾರ, ಫೆಬ್ರವರಿ 27, 2025

ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಫೆ.27(ಕರ್ನಾಟಕ ವಾರ್ತೆ): ನಗರದ ಮೃತ್ಯುಂಜಯನಗರÀ ರೈಲ್ವೆ ಗೇಟ್ ಬ್ರಿಡ್ಜ್ ಹತ್ತಿರ ಹಣ್ಣಿನ ಅಂಗಡಿ ಪಕ್ಕದಲ್ಲಿ ಅಂದಾಜು 40 ರಿಂದ 45 ವರ್ಷದ ಅನಾಮಧೇಯ ವ್ಯಕ್ತಿಯು ಯಾವುದೋ ಖಾಯಿಲೆಯಿಂದ ಮಲಗಿದ್ದ ಸ್ಥಳದಲ್ಲಿಯೇ ಫೆ.25 ರಂದು ಮೃತಪಟ್ಟಿದ್ದು, ಈ ಕುರಿತು ಬಳ್ಳಾರಿ ಎ.ಪಿ.ಎಂ.ಸಿ ಯಾರ್ಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಅವರು ಮನವಿ ಮಾಡಿದ್ದಾರೆ. ಮೃತನ ಚಹರೆ: ಎತ್ತರ 5.6 ಅಡಿ, ದುಂಡು ಮುಖ, ಕಪ್ಪು ಮೈಬಣ್ಣ,. ಸಾಧಾರಣ ತೆಳ್ಳನೆ ಮೈಕಟ್ಟು ಹೊಂದಿದ್ದು, ಕಪ್ಪು ಮಿಶ್ರಿತ ಮತ್ತು ಬಿಳಿ ಕೂದಲು, ಕಪ್ಪು ಮೀಸೆ ಮತ್ತು ಬಿಳಿ ಗಡ್ಡ ಇರುತ್ತದೆ. ಮೃತ ದೇಹದ ಮೈಮೇಲೆ ಒಂದು ಮಾಸಿದ ಕಪ್ಪು, ನೀಲಿ ಮತ್ತು ಬಿಳಿ ಬಣ್ಣದ ಟೀ ಶರ್ಟ್ ಮತ್ತು ನಸಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಮೃತನ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಎ.ಪಿ.ಎಂ.ಸಿ ಯಾರ್ಡ ಪೋಲಿಸ್ ಠಾಣೆ ದೂರವಾಣಿ ಸಂಖ್ಯೆ; 08392-250033, 9480803096 ಅಥವಾ ಪೋಲಿಸ್ ಕಂಟ್ರೋಲ್ ರೂಂ, ಬಳ್ಳಾರಿ ದೂರವಾಣಿ ಸಂಖ್ಯೆ; 08392258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ