ಸೋಮವಾರ, ಫೆಬ್ರವರಿ 24, 2025

ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಫೆ.24(ಕರ್ನಾಟಕ ವಾರ್ತೆ): ಸಂಡೂರು ತಾಲ್ಲೂಕಿನ ತೋರಣಗಲ್ಲಿ ರಸ್ತೆಯ ಬನ್ನಿಹಟ್ಟಿಯ ಹೊಲದ ಹತ್ತಿರದ ರಸ್ತೆಯಲ್ಲಿ ಫೆ.18 ರಂದು ದ್ವಿಚಕ್ರ ವಾಹನವೊಂದು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿರುವ ಸುಮಾರು 60-65 ವರ್ಷದ ಅನಾಮಧೇಯ ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದು, ವ್ಯಕ್ತಿಯನ್ನು ಬಿಮ್ಸ್ನಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ತೋರಣಗಲ್ಲು ಪೊಲೀಸ್ ಠಾಣೆಯು ಪ್ರಕಟಣೆ ಹೊರಡಿಸಿದೆ. ಚಹರೆ: ಸುಮಾರು 5.8 ಅಡಿ ಎತ್ತರ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ, ಕೋಲು-ಮುಖ ಹೊಂದಿದ್ದು, ನೀಲಿ ಬಣ್ಣದ ಶರ್ಟ್ ಮತ್ತು ತಿಳಿ ನೀಲಿ ಬಣ್ಣದ ಬರ್ಮೂಡ ಧರಿಸಿರುತ್ತಾನೆ. ಮೃತ ಅನಾಮಧೇಯ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ದೂ.08395-258100, ಮೊ.9480803012 ಗೆ ಸಂಪರ್ಕಿಸಬಹುದು. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ