ಶನಿವಾರ, ಮಾರ್ಚ್ 1, 2025
ಕೃಷಿ ಭಾಗ್ಯಯೋಜನೆಯಡಿ ಅರ್ಜಿ ಆಹ್ವಾನ
ಬಳ್ಳಾರಿ,ಮಾ.01(ಕರ್ನಾಟಕ ವಾರ್ತೆ):
ಕೃಷಿ ಇಲಾಖೆಯಿಂದ 2024-25 ನೇ ಸಾಲಿನ ಕೃಷಿಭಾಗ್ಯ ಯೋಜನೆಯಡಿ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಒಣ ಭೂಮಿ ರೈತರ ಆದಾಯ ಮಳೆಯ ಮೇಲೆ ಅವಲಂಭಿತವಾಗಿರುವುದರಿAದ ನಿರೀಕ್ಷಿತ ಆದಾಯ ಸಿಗುವುದು ಕಷ್ಟಸಾಧ್ಯವಾಗಿದ್ದು, ರೈತರು ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಹಾಗೂ ವಿವಿಧ ಘಟಕಗಳನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದ್ದು, ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.
ಕಡಿಮೆ ಮಳೆ ಬೀಳುವ ಬಹುತೇಕ ಪ್ರದೇಶಗಳಲ್ಲಿ ರೈತರು ಸುಮಾರು 500 ರಿಂದ 1000 ಅಡಿಯವರೆಗೆ ಕೊಳವೆ ಬಾವಿ ಕೊರೆಯಲು ಆರ್ಥಿಕವಾಗಿ ಹೆಚ್ಚು ವೆಚ್ಚ ಮಾಡುತ್ತಿದ್ದಾರೆ. ಈ ಕೊಳವೆ ಬಾವಿ ವಿಫಲವಾದರೆ ಅಥವಾ ಕೆಲ ವರ್ಷಗಳ ನಂತರ ಬತ್ತಿಹೋದ ಸಂದರ್ಭದಲ್ಲಿ ರೈತರು ಕಷ್ಟದಲ್ಲಿ ಸಿಲುಕುತ್ತಿದ್ದಾರೆ. ಆದ್ದರಿಂದ ರೈತರು ಕೊಳವೆ ಬಾವಿಯ ಬದಲಾಗಿ ಕೃಷಿ ಭಾಗ್ಯ ಯೋಜನೆಯ ಕೃಷಿ ಹೊಂಡ ಹಾಗೂ ಇನ್ನಿತರೆ ಘಟಕಗಳಲ್ಲಿ ಹೂಡಿಕೆಯನ್ನು ಮಾಡಿ ಸುಸ್ಥಿರ ಕೃಷಿಗಾಗಿ ಬಳಸಬಹುದಾಗಿದೆ.
ಕಳೆದ ವರ್ಷ ಕೃಷಿ ಭಾಗ್ಯ ಯೋಜನೆಯು ಕೇವಲ ಮಳೆಯಾಶ್ರಿತ ಪ್ರದೇಶಕ್ಕೆ ಸೀಮಿತವಾಗಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಅಚ್ಚುಕಟ್ಟು ಪ್ರದೇಶಕಕ್ಕೂ ವಿಸ್ತರಿಸಲಾಗಿದ್ದು, ಅಚ್ಚುಕಟ್ಟು ಪ್ರದೇಶದ ರೈತರು ಕೃಷಿ ಭಾಗ್ಯ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಕೆಂಪು ಮಣ್ಣಿನಲ್ಲಿ ರೈತರು ಖಡ್ಡಾಯವಾಗಿ ಟಾರ್ಪಲ್ ಹೊದಿಕೆ ಹಾಗೂ ತಂತಿಬೇಲಿಯನ್ನು (ಈeಟಿಛಿiಟಿg ಕೆಂಪು ಮತ್ತು ಕಪ್ಪು ಭೂಮಿ) ಎಲ್ಲಾ ಕೃಷಿ ಹೊಂಡಗಳಿಗೆ ಖಡ್ಡಾಯವಾಗಿ ಸಹಾಯಧನದಡಿ ಅಳವಡಿಸಿಕೊಳ್ಳಬೇಕಾಗುತ್ತದೆ. ಅದಲ್ಲದೇ ಕೃಷಿ ಹೊಂಡ ಮಾಡಿಸಿಕೊಂಡ ಎಲ್ಲಾ ಫಲಾನುಭವಿಗಳಿಗೆ ಕ್ಷೇತ್ರ ಬದು, ಡಿಸೇಲ್ ಇಂಜನ್ ಹಾಗೂ ತುಂತುರು ನೀರಾವರಿ ಘಟಕಗಳಿಗೆ ಕೂಡ ಸಹಾಯಧನ ಲಭ್ಯವಿರುತ್ತದೆ.
ಒಟ್ಟಾರೆ ಸದರಿ ಯೋಜನೆಯಡಿ ಆರು ಘಟಕಗಳಾದ ಕೃಷಿ ಹೊಂಡ, ತಂತಿಬೇಲಿ, ಟಾರ್ಪಲ್ ಹೊದಿಕೆ, ಕ್ಷೇತ್ರ ಬದು, ಡಿಸೇಲ್ ಇಂಜನ್ ಹಾಗೂ ತುಂತುರು ನೀರಾವರಿಗೆ ಸಹಾಯಧನದ ಲಭ್ಯವಿದ್ದು, ಎಲ್ಲಾ ರೈತಭಾಂದವರು ಈ ಯೋಜನೆಯ ಉಪಯೋಗ ಪಡೆದುಕೊಳ್ಳಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಆಸಕ್ತ ರೈತ ಬಾಂಧವರು ಸಂಬAಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ