ಶುಕ್ರವಾರ, ಮಾರ್ಚ್ 28, 2025
ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಮಾ.28(ಕರ್ನಾಟಕ ವಾರ್ತೆ):
ತಾಲ್ಲೂಕಿನ ಚೆಳ್ಳಗುರ್ಕಿ ಗ್ರಾಮದ ರೂಪನಗುಡಿ ರಸ್ತೆಯ ರ್ರಿತಾತ ಜೀವ ಸಮಾಧಿ ಮಠದ ತೇರುಗಡ್ಡೆ ನಿಲ್ಲುವ ಶೆಡ್ ನ ಬಳಿ ಸುಮಾರು 65-70 ವರ್ಷದ ಅನಾಮಧೇಯ ವ್ಯಕ್ತಿಯು ವಯೋಸಹಜ ಖಾಯಿಲೆಯಿಂದ ಮಾ.27 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪಿ.ಡಿ.ಹಳ್ಳಿ ಪೋಲಿಸ್ ಠಾಣೆಯ ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ.
ಚಹರೆ: ಅಂದಾಜು 5.5 ಅಡಿ ಎತ್ತರ, ತೆಳ್ಳನೆ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ದುಂಡು ಮುಖ, ಬಿಳಿ ಕೂದಲು, ಮತ್ತು ಕೆಂಪು ಬಣ್ಣದ ಕರಿ ಗೀರಿಯುಳ್ಳ ಚೆಕ್ಸ್ ಶರ್ಟ್, ಬಿಳಿ ಬಣ್ಣದ ಪ್ಯಾಂಟ್, ಗ್ರೇ ಕಲರ್ ಒಳಉಡುಪು ಧರಿಸಿರುತ್ತಾನೆ.
ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 102 ಬಳ್ಳಾರಿ ಎಸ್.ಪಿ ಅವರ ಕಚೇರಿ ದೂ.08392-258400, ಸಿರುಗುಪ್ಪ ಡಿ.ಎಸ್.ಪಿ ದೂ.08392-276000, ಪಿ.ಡಿ.ಹಳ್ಳಿ ವೃತ್ತ ಸಿ.ಪಿ.ಐ ಮೊ.08392-276461, ಪಿ.ಡಿ.ಹಳ್ಳಿ ಪೊಲೀಸ್ ಠಾಣೆ ದೂ.08392-265010 ಮತ್ತು ಪಿಎಸ್ಐ ಮೊ.9480803052 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ