ಶುಕ್ರವಾರ, ಏಪ್ರಿಲ್ 4, 2025

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಏ.04(ಕರ್ನಾಟಕ ವಾರ್ತೆ): ಕುರುಗೋಡು ಪಟ್ಟಣ ಇಂದಿರಾ ನಗರದ 14 ನೇ ವಾರ್ಡ್ ನಿವಾಸಿಯಾದ ವಡ್ಡರ ವೀರೆಶ್ ಎನ್ನುವ 36 ವಷÀðದ ವ್ಯಕ್ತಿಯು ಜ.17 ರಂದು ಕಾಣೆಯಾಗಿದ್ದು, ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಬ್‌ಇನ್ಸ್ಪೆಕ್ಟರ್ ತಿಳಿಸಿದ್ದಾರೆ. ಚಹರೆ ಗುರುತು: ಅಂದಾಜು 5 ಅಡಿ ಎತ್ತರ, ದುಂಡು ಮುಖ, ಗೋದಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಕೆಂಪು ಬಣ್ಣದ ಚೆಕ್ಸ್ ಅಂಗಿ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾನೆ. ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕುರುಗೋಡು ಪೊಲೀಸ್ ಠಾಣೆಯ ದೂ.08393-263433 ಅಥವಾ ಪಿ.ಎಸ್.ಐ ಮೊ.9480803051, ಸಿ.ಪಿ.ಐ ಮೊ.9480803039, ಬಳ್ಳಾರಿ ಎಸ್.ಪಿ ರವರ ಕಚೇರಿ ದೂ.08392-258400,258300 ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ