ಶುಕ್ರವಾರ, ಮೇ 16, 2025
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ,ಮೇ 16(ಕರ್ನಾಟಕ ವಾರ್ತೆ):
ಸಿರುಗುಪ್ಪ ತಾಲ್ಲೂಕಿನ ತೆಕ್ಕಲಕೋಟೆಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ 2025-26ನೇ ಸಾಲಿನ 01 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.
ಆಸಕ್ತ ಅರ್ಹ ವಿದ್ಯಾರ್ಥಿಗಳು ಮೇ 15 ರಿಂದ ಮೇ 31 ರ ವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿಗಳನ್ನು ಸಿರುಗುಪ್ಪ ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ಮತ್ತು ತೆಕ್ಕಲಕೋಟೆಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಿರುಗುಪ್ಪ ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ದೂ.08396-222003 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ