ಬಳ್ಳಾರಿ,ಜೂ.19(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ-3 ರ ವ್ಯಾಪ್ತಿಯ ಬರುವ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಸಂಬAಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಜೂ.21 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ವರೆಗೆ ಮುಂಡರಿಗಿ ಪ್ರದೇಶದ ಎಲ್ಲಪ್ಪ ತಾತಾ ಮಠದ ಆವರಣದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದ್ದು, ಸಾರ್ವಜನಿಕರು ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ