ಶನಿವಾರ, ಜೂನ್ 21, 2025

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಜೂ.21(ಕರ್ನಾಟಕ ವಾರ್ತೆ): ಸಂಡೂರು ತಾಲ್ಲೂಕಿನ ಸ್ವಾಮಿಹಳ್ಳಿ ಗ್ರಾಮದ ಕೆ.ತಿಪ್ಪೇರುದ್ರ ಗೌಡ ಎನ್ನುವ 32 ವರ್ಷದ ವ್ಯಕ್ತಿಯು ಜೂ.12 ರಂದು ಕಾಣೆಯಾಗಿರುವ ಕುರಿತು ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. *ಚಹರೆ ಗುರುತು:* ಅಂದಾಜು 5.6 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ಕಪ್ಪು-ಕೆಂಪು ಮಿಶ್ರಿತ ಗುಂಗುರು ತಲೆ ಕೂದಲು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ಬಾದಾಮಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಚೋರನೂರು ಪೊಲೀಸ್ ಠಾಣೆಯ ದೂ.08395-295100, ಪಿಎಸ್‌ಐ ಮೊ.9480803063, ಸಂಡೂರು ಸಿಪಿಐ ಮೊ.9480803036, ತೋರಣಗಲ್ಲು ಡಿಎಸ್‌ಪಿ ಮೊ.9480803010 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ