ಮಂಗಳವಾರ, ಜುಲೈ 1, 2025

ಕುರೇಕುಪ್ಪ ಪುರಸಭೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಳ್ಳಾರಿ,ಜು.01(ಕರ್ನಾಟಕ ವಾರ್ತೆ): ಕುರೇಕುಪ್ಪ ಪುರಸಭೆ ಕಾರ್ಯಾಲಯ ವತಿಯಿಂದ 2025-26 ನೇ ಸಾಲಿನ ಎಸ್‌ಎಫ್‌ಸಿ ಅನುದಾನದ ಮುಕ್ತ ನಿಧಿ ಯೋಜನೆಯಡಿ ಶೇ.24.10 ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಬ್ಯಾಂಕ್‌ನಿAದ ಪಡೆಯುವ ಸಾಲಕ್ಕೆ ಬ್ಯಾಕ್ ಎಂಡ್ ಸಬ್ಸಿಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಜುಲೈ 07 ರ ವರೆಗೆ ವಿಸ್ತರಿಸಲಾಗಿದೆ. ಸೂಚನೆ: ಅನುದಾನ ಅಗತ್ಯ ಅನುಗುಣವಾಗಿ ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕುರೇಕುಪ್ಪ ಪುರಸಭೆ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಪುರಸಭೆಯ ಮುಖ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ