ಮಂಗಳವಾರ, ಜುಲೈ 15, 2025

ನೂತನ ಸಂಶೋಧನೆಗಳಿಗೆ ಐಯುಎಸಿ ಕೇಂದ್ರ: ಪ್ರೊ.ಎಂ.ಟಿ.ಲಗಾರೆ

ಬಳ್ಳಾರಿ,ಜು.15(ಕರ್ನಾಟಕ ವಾರ್ತೆ): ಸುರಕ್ಷತೆ ಭದ್ರತೆ ಮತ್ತು ಪರಿಸರಕ್ಕೆ ಧಕ್ಕೆಯಾಗದಂತೆ ಅತ್ಯುನ್ನತ ಮಾನದಂಡಗಳನ್ನು ಕಾಯ್ದುಕೊಂಡು ಕೌಶಲ್ಯಗಳನ್ನು ಹೆಚ್ಚಿಸಲು ಐಯುಎಸಿ (ಅಂತರ್ ವಿಶ್ವವಿದ್ಯಾಲಯ ವೇಗವರ್ಧಕ ಕೇಂದ್ರ) ಯು ನಿರಂತರವಾಗಿ ವಿನೂತನ ಸಂಶೋಧನಾ ಮಾರ್ಗಗಳಿಗೆ ಶ್ರಮಿಸುತ್ತಿದೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಭೌತಶಾಸ್ತç ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಎಂ.ಟಿ ಲಗಾರೆ ಅವರು ಹೇಳಿದರು. ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಭೌತಶಾಸ್ತç ಅಧ್ಯಯನ ವಿಭಾಗ ಹಾಗೂ ಅಂತರ್ ವಿಶ್ವವಿದ್ಯಾಲಯ ವೇಗವರ್ಧಕ ಕೇಂದ್ರ ನವದೆಹಲಿ ಇವರ ಸಂಯುಕ್ತಾಶ್ರಯದಲ್ಲಿ ವಿವಿಯ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ “ಐಯುಎಸಿ ಪರಿಚಯ ಕಾರ್ಯಕ್ರಮ”ದಲ್ಲಿ ಭಾಗವಹಿಸಿ ಮಾತನಾಡಿದರು. ಐಯುಎಸಿ ನಲ್ಲಿರುವ ಪೆಲ್ಲೆಟ್ರಾನ್ ವೇಗವರ್ಧಕ ಪ್ರಯೋಗಾಲಯವು 1991 ರಿಂದ ಕಾರ್ಯನಿರ್ವಹಿಸುತ್ತಿದೆ. ನಂತರದ ವರ್ಷಗಳಲ್ಲಿ ಇದು ಭಾರತ ಮತ್ತು ವಿದೇಶಗಳಿಂದ 400 ಕ್ಕೂ ಹೆಚ್ಚು ಬಳಕೆದಾರರಿಗೆ ಅಯಾನು ಕಿರಣಗಳನ್ನು ಒದಗಿಸುತ್ತಿದೆ. ವೇಗವರ್ಧಕ ಭೌತಶಾಸ್ತçವು ಕಣ ವೇಗವರ್ಧಕಗಳ ವಿನ್ಯಾಸ, ನಿರ್ಮಾಣ ಮತ್ತು ಕಾರ್ಯಾಚರಣೆಯ ಮೇಲೆ ಕೇಂದ್ರೀಕರಿಸಿದ ಭೌತಶಾಸ್ತçದ ವಿಶೇಷ ಕ್ಷೇತ್ರವಾಗಿದ್ದು, ಇದರ ಜೊತೆಯಲ್ಲೆ ಪರಮಾಣು ಭೌತಶಾಸ್ತçವು ಪರಮಾಣು ನ್ಯೂಕ್ಲಿಯರ್ಸ್ಗಳ ಒಟ್ಟಿಗೆ ಹಿಡಿದಿಟ್ಟುಕೊಳ್ಳುವ ಮೂಲಭೂತ ಶಕ್ತಿಗಳು ಮತ್ತು ಅವುಗಳಿಗೆ ಒಳಗಾಗುವ ಪ್ರತಿಕ್ರಿಯೆಗಳು, ವಿಕಿರಣಶೀಲ ಕೊಳೆತ, ವಿದಳನ ಮತ್ತು ಸಮ್ಮಿಳನಗಳನ್ನು ನೀಡುತ್ತವೆ. ಇವುಗಳ ಹೆಚ್ಚಿನ ಅಧ್ಯಯನಕ್ಕೆ ಹಾಗೂ ಸಂಶೋಧನೆಗೆ ಐಯುಎಸಿ ಕೇಂದ್ರವು ವೇದಿಕೆಯಾಗಿದೆ ಎಂದು ತಿಳಿಸಿದರು. ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಕುಲಪತಿಗಳಾದ ಪ್ರೊ.ಎಂ.ಮುನಿರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಜ್ಞಾನದ ಎಲ್ಲ ಕ್ಷೇತ್ರವು ಭೌತಶಾಸ್ತçದ ಮೇಲೆ ಅವಲಂಬನೆಯಾಗಿದೆ. ಕಲ್ಯಾಣ-ಕರ್ನಾಟಕ ಭಾಗದಲ್ಲಿ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಸಂಶೋಧನಾ ಕೇಂದ್ರವನ್ನು ವಿವಿಯಲ್ಲಿ ನಿರ್ಮಿಸಲಾಗುವುದಾಗಿ ಹೇಳಿದರು. ಯುವ ಸಂಶೋಧಕರು ಐಯುಎಸಿ ಕೇಂದ್ರದ ಪ್ರಯೋಜನ ಪಡೆಯಬೇಕೆಂದು ಹೇಳಿದರು. ನವದೆಹಲಿಯ ಐಯುಎಸಿ ವಿಜ್ಞಾನಿ ಹಾಗೂ ಪ್ರೋಗ್ರಾಂ ಲೀಡರ್ ಡಾ. ಫೌರನ ಸಿಂಗ್ ಮಾತನಾಡಿ, ವೇಗವರ್ಧಕ ಮಾಸ್ ಸ್ಪೆಕ್ಟ್ರೋಮೆಟ್ರಿ ಮತ್ತು ಭೂಕಾಲಗಣನ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಮೊದಲನೆ ಕೇಂದ್ರವಾಗಿ ಐಯುಎಸಿ ಕಾರ್ಯನಿರ್ವವಹಿಸುತ್ತಿದೆ. ಈ ಕೇಂದ್ರದ ಪ್ರಯೋಜನ ಪಡೆಯಲು ಯುವ ಸಂಶೋಧಕರು ಹೊಸ ಸಂಶೋಧನೆಗಳೊAದಿಗೆ ಬರಬೇಕು ಎಂದು ಕರೆ ನೀಡಿದರು. ಮತ್ತೋರ್ವ ಐಯುಎಸಿ ಕೇಂದ್ರದ ವಿಜ್ಞಾನಿ ಹಾಗೂ ಕೇಂದ್ರದ ಸಂಚಾಲಕರಾದ ರಾಜೀವ್ ಮೆಹ್ತಾ ಮಾತನಾಡಿ, ಅಂತರ್-ವಿಶ್ವವಿದ್ಯಾಲಯ ವೇಗವರ್ಧಕ ಕೇಂದ್ರವು ಅತ್ಯಾಧುನಿಕ ಸಂಶೋಧನೆ ನಡೆಸಲು ಅಗತ್ಯವಿರುವ ಆಧುನಿಕ ಉಪಕರಣಗಳೊಂದಿಗೆ ವಿಜ್ಞಾನ ಸಮುದಾಯಕ್ಕೆ ಅನುಕೂಲವಾಗುವಂತೆ ನಿರ್ಮಿತವಾಗಿದೆ. ಅಲ್ಲದೇ, ಕೇಂದ್ರವು 400 ಅಂಗ ಸಂಸ್ಥೆಗಳನ್ನು, 1200 ಸಂಶೋಧನಾ ವಿದ್ಯಾರ್ಥಿಗಳನ್ನು ಹೊಂದಿದೆ ಎಂದರು. ಮೈಸೂರು ವಿಶ್ವವಿದ್ಯಾಲಯದ ಭೌತಶಾಸ್ತç ವಿಭಾಗದ ಮುಖ್ಯಸ್ಥರಾದ ಪ್ರೊ. ಎ ಪಿ ಜ್ಞಾನಪ್ರಕಾಶ ಮಾತನಾಡಿ, ಉನ್ನತ ಮಟ್ಟದ ಸೌಲಭ್ಯಗಳನ್ನು ಒಂದೇ ಸೂರಿನಡಿ ಒದಗಿಸುವ ಗುರಿಯನ್ನು ಐಯುಎಸಿ ಹೊಂದಿದೆ. ವಿಶ್ರೀಕೃವಿವಿಯಲ್ಲಿನ ಭೌತಶಾಸ್ತç ವಿಭಾಗವು ಹಲವು ವೈವಿಧ್ಯತೆಗಳೊಂದಿಗೆ ಕೂಡಿದ್ದು, ರಾಜ್ಯದಲ್ಲಿನ ಉಳಿದ ವಿವಿಗಳಿಗಿಂತ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ವಿವಿಧ ರಾಜ್ಯಗಳ 100ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದಕ್ಕೂ ಮುನ್ನ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿವಿಯ ಮೌಲ್ಯಮಾಪನ ಕುಲಸಚಿವರಾದ ಪ್ರೊ ಎನ್.ಎಂ.ಸಾಲಿ, ವಿವಿಯ ಭೌತಶಾಸ್ತç ವಿಭಾಗದ ಪ್ರಾಧ್ಯಾಪಕ ಪ್ರೊ.ತೀಪ್ಪೆರುದ್ರಪ್ಪ ಜೆ, ಡಾ.ಕೊಟ್ರೇಶ್ ಎಂ.ಜಿ ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು ಹಾಗೂ ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ