ಶನಿವಾರ, ಆಗಸ್ಟ್ 30, 2025
ಸೆ.02 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳುತ್ತಿರುವುದರಿಂದ ಸೆ.02 ರಂದು ಬೆಳಿಗ್ಗೆ 08 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಎಫ್-23 ಮತ್ತು ಎಫ್-24 ರ ವ್ಯಾಪ್ತಿಯ ನಗರದ ಹೆಚ್.ಆರ್.ಗವಿಯಪ್ಪ ವೃತ್ತ, ತೇರು ಬೀದಿ, ಜೈನ್ ಮಾರ್ಕೆಟ್, ಕಾಳಮ್ಮ ರಸ್ತೆ, ಲಾರಿ ಟರ್ಮಿನಲ್, ರಂಗ ಮಂದಿರ, ಹೊಸ ಬಸ್ ನಿಲ್ದಾಣ, ಬಂಡಿಮೊಟ್, ಗೊಲ್ಲರಹಟ್ಟಿ, ಮಾರುತಿ ಕಾಲೋನಿ, ಬೆಂಗಳೂರು ರಸ್ತೆ, ಬಾಪೂಜಿ ನಗರ, ಕುರಿ ಕಮೇಲ, ಕಮೇಲ ರಸ್ತೆ, ಮೃತ್ಯುಂಜಯ ನಗರ, ಬೆಂಕಿ ಮಾರೆಮ್ಮ ಗುಡಿ ಹತ್ತಿರ, ಬಾಲಾಂಜನೇಯ ಗುಡಿ ರಸ್ತೆ, ಪಿ.ಕೆ.ಸ್ಟಿçÃಟ್, ಬ್ರೂಸ್ಪೇಟೆ ಪೊಲೀಸ್ ಠಾಣೆ ಮತ್ತು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ