ಬುಧವಾರ, ಆಗಸ್ಟ್ 20, 2025

ಆ.21 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಆ.20(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣಾ ಕೇಂದ್ರದ ಬ್ಯಾಂಕ್-2 ಫೀಡರ್ ಎಫ್-76 ರಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳುತ್ತಿರುವುದರಿಂದ ಆ.21 ರಂದು ಬೆಳಿಗ್ಗೆ 08 ರಿಂದ ಸಂಜೆ 05 ಗಂಟೆಯವರೆಗೆ ನಗರದ ಮೋರ್ ಗಲ್ಲಿ, ವಟ್ಟಪ್ಪಗೆರೆ, ಕುಣಿತಾಣ ಮಸೀದಿ, ದಾನಪ್ಪ ರಸ್ತೆ, ಅರಣ್ಯ ಕ್ವಾಟರ್ಸ್, ಜಾಗೃತಿ ನಗರ, ರೇಷ್ಮೆ ಇಲಾಖೆ, ಟೀಚರ್ಸ್ ಕಾಲೋನಿ, ಈದ್ಗಾ ಮೈದಾನ, ರಾಮಾಂಜನೇಯ ನಗರ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ