ಮಂಗಳವಾರ, ಸೆಪ್ಟೆಂಬರ್ 16, 2025

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಸೆ.16(ಕರ್ನಾಟಕ ವಾರ್ತೆ): ಕುರುಗೋಡು ತಾಲ್ಲೂಕಿನ ಕಲ್ಲುಕಂಭ ಗ್ರಾಮದ ನಿವಾಸಿ ಶಿವಾನಂದ ಎನ್ನುವ 31 ವರ್ಷದ ವ್ಯಕ್ತಿಯು ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದು, ಸೆ.08 ರಂದು ಹೊರಗಡೆ ಹೋಗಿಬರುತ್ತೇನೆ ಎಂದು ಹೇಳಿಹೋದವ ಮರಳಿ ಬಾರದೇ ಕಾಣೆಯಾಗಿದ್ದು, ಈ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ತೆಗೆ ಸಹಕರಿಸಬೇಕು ಎಂದು ಪಿಎಸ್‌ಐ ಮನವಿ ಮಾಡಿದ್ದಾರೆ. ಚಹರೆ: ಅಂದಾಜು 5.9 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದು, ಬಲಕೈಯಲ್ಲಿ ಎಸ್.ವಿ ಎಂದು ಇಂಗ್ಲೀಷ್‌ನಲ್ಲಿ ಅಚ್ಚೆ ಮತ್ತು ಎಡಕೈನಲ್ಲಿ ಕಾವೇರಿ ಎಂದು ಕನ್ನಡದಲ್ಲಿ ಅಚ್ಚೆ ಹಾಕಿಸಿಕೊಂಡಿರುತ್ತಾನೆ. ಬಲಗಣ್ಣು ಉಬ್ಬಿನ ಹತ್ತಿರ ಹಳೆ ಗಾಯದ ಗುರುತು ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ತುಂಬುತೋಳಿನ ಚೆಕ್ಸ್ ಅಂಗಿ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಹಾಗೂ ಅಲ್ಪ ಹಿಂದಿ ಭಾಷೆ ಮಾತನಾಡುತ್ತಾನೆ. ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ