ಶುಕ್ರವಾರ, ಅಕ್ಟೋಬರ್ 3, 2025
ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ | ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಹೆಸರು ನೋಂದಾಯಿಸಿಕೊಳ್ಳುವAತೆ ಕಲಬುರಗಿ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ಕರೆ
ಬಳ್ಳಾರಿ,ಅ.03(ಕರ್ನಾಟಕ ವಾರ್ತೆ):
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿ ಕಾರ್ಯ ಆರಂಭಗೊAಡಿದ್ದು, ಅರ್ಹ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವAತೆ ನಿರ್ದೇಶನ ನೀಡಬೇಕು ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ ಮತದಾರರ ನೋಂದಣಿ ಅಧಿಕಾರಿಯೂ ಆದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ಅವರು ಹೇಳಿದರು.
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿ ಕುರಿತಂತೆ ಕಲಬುರಗಿ ವಿಭಾಗದ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಡಿಸಿ ಮತ್ತು ರಾಜಕೀಯ ಪಕ್ಷದ ಮುಖಂಡರೊAದಿಗೆ ಶುಕ್ರವಾರ ವರ್ಚುವಲ್ ಮೂಲಕ ಸಭೆ ನಡೆಸಿ ಅವರು ಮಾತನಾಡಿದರು.
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯರ ಪದಾವಧಿಯು 11.11.2026 ರಂದು ಮುಕ್ತಾಯಗೊಳ್ಳಲಿದೆ. ಅರ್ಹತಾ ದಿನಾಂಕ 01.11.2025 ಕ್ಕೆ ಅನ್ವಯಿಸುವಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ಧಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದೆ. ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 19 ಮತ್ತು ಅನುಬಂಧ-2 ರಲ್ಲಿ ಸೂಕ್ತ ಮಾಹಿತಿ ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಈಗಾಗಲೇ ವಿತರಿಸಲಾಗಿದೆ ಎಂದರು.
*ವೇಳಾಪಟ್ಟಿ:*
06.11.2025 (ಗುರುವಾರ): ಅರ್ಜಿ ನಮೂನೆ 19 ರಲ್ಲಿ ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನ.
25.11.2025 (ಮಂಗಳವಾರ): ಕರಡು ಮತದಾರರ ಪಟ್ಟಿ ಪ್ರಕಟಿಸುವ ದಿನ.
25.11.2025 (ಮಂಗಳವಾರ) ರಿಂದ 10.12.2025 (ಬುಧವಾರ): ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ನಿಗಧಿಪಡಿಸಿದ ಅವಧಿ.
30.12.2025 (ಮಂಗಳವಾರ): ಅಂತಿಮ ಮತದಾರರ ಪಟ್ಟಿ ಪ್ರಕಟಿಸುವ ದಿನ.
*ಸ್ವೀಪ್ ಚಟುವಟಿಕೆ ಕೈಗೊಳ್ಳಿ:*
ಅರ್ಹ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾನ ಪ್ರಕ್ರಿಯೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳು ವಿಭಾಗದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ವ್ಯಾಪಕವಾಗಿ ಪ್ರಚಾರ ಹಾಗೂ ಕ್ರಿಯಾತ್ಮಕವಾಗಿ ನೋಂದಣಿ ಮಾಡುವಲ್ಲಿ ಜಿಲ್ಲಾವಾರು, ತಾಲ್ಲೂಕುವಾರು ಸ್ವೀಪ್ ಸಮಿತಿ ರಚಿಸಲಾಗಿದ್ದು, ಹೆಚ್ಚಾಗಿ ಸ್ವೀಪ್ ಚಟುವಟಿಕೆ ಆಯೋಜಿಸಬೇಕು ಎಂದು ನಿರ್ದೇಶನ ನೀಡಿದರು.
*ಹೆಸರು ನೋಂದಾಯಿಸಲು ಅರ್ಹತೆ:*
1ನೇ ನವೆಂಬರ್ 2025 ಕ್ಕೆ ಮೊದಲ 6 ವರ್ಷಗಳ ಅವಧಿಯಲ್ಲಿ ಸೆಕೆಂಡರಿ ದರ್ಜೆಯಲ್ಲಿ ಪ್ರೌಢಶಾಲೆಗಿಂತ ಕಡಿಮೆ ಇಲ್ಲದ ನಿರ್ದಿಷ್ಟಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಟ್ಟು ಕನಿಷ್ಠ 3 ವರ್ಷ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹರು ಎಂದು ತಿಳಿಸಿದರು.
ಬಲ್ಕ (ಗುಚ್ಚಗಳಲ್ಲಿ) ಅರ್ಜಿಗಳನ್ನು ಸಲ್ಲಿಸುವಂತಿಲ್ಲ. ಅರ್ಜಿಯಲ್ಲಿ ತಪ್ಪು ಮಾಹಿತಿ ಭರ್ತಿ ಮಾಡುವಂತಿಲ್ಲ. ತಪ್ಪೆಂದು ತಿಳಿದರೆ ಅಂತಹವರನ್ನು ಪ್ರಜಾಪ್ರಾತಿನಿಧ್ಯ ಅಧಿನಿಯಮ 1950 ರ 31 ನೇ ಪ್ರಕರಣದ ಮೇರೆಗೆ ಶಿಕ್ಷೆಗೆ ಅರ್ಹರಾಗುತ್ತಾರೆ ಎಂದರು.
*ಮತದಾನ ಕೇಂದ್ರ:*
ಚುನಾವಣಾ ಆಯೋಗದ ನಿರ್ದೇಶನದನ್ವಯ 16 ಕಿ.ಮೀ ವ್ಯಾಪ್ತಿಗೊಳಪಡುವ ಹಾಗೂ ಕನಿಷ್ಠ 30 ಮತದಾರರು ಹೊಂದಿದ್ದಲ್ಲಿ ಅಂತಹ ಸ್ಥಳದಲ್ಲಿ ಮತದಾನ ಕೇಂದ್ರ ಸ್ಥಾಪಿಸಲು ಅವಕಾಶವಿದೆ. ಅದರಂತೆ ಕ್ರಮವಹಿಸಲಾಗುವುದು. ಈ ಕುರಿತಂತೆ ಮಾಹಿತಿ ಸಂಪರ್ಕಕ್ಕಾಗಿ ಆಯಾ ಜಿಲ್ಲೆಗಳ ಜಿಲ್ಲಾ ನಗರಾಭಿವೃದ್ಧಿ ಕೋಶ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗುವುದು ಎಂದು ಹೇಳಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ಪಿ.ಪ್ರಮೋದ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಸೇರಿದಂತೆ ಡಿಡಿಪಿಯು, ಡಿಡಿಪಿಐ, ಬಿಇಓ ಅಧಿಕಾರಿಗಳು, ಜಿಲ್ಲಾ ಚುನಾವಣಾ ಕಚೇರಿಯ ಸಿಬ್ಬಂದಿ ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ವರ್ಚುವಲ್ ಮೂಲಕ ಹಾಜರಿದ್ದರು.
-----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)





ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ