ಶುಕ್ರವಾರ, ಅಕ್ಟೋಬರ್ 31, 2025

ಸಿರುಗುಪ್ಪ: ಬೀಜದ ಕಿಟ್ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ,ಅ.31(ಕರ್ನಾಟಕ ವಾರ್ತೆ): ಸಿರುಗುಪ್ಪ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕೆ.ಕೆ.ಆರ್.ಡಿ.ಬಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದವರಿಗೆ ತರಕಾರಿ ಬೀಜದ ಕಿಟ್ ವಿತರಣೆ ಮಾಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ಭೌತಿಕ 200 ಫಲಾನುಭವಿಗಳಿಗೆ ಆರ್ಥಿಕ ರೂ.10 ಲಕ್ಷ ಮತ್ತು ಪರಿಶಿಷ್ಟ ಪಂಗಡದ ಭೌತಿಕ 800 ಫಲಾನುಭವಿಗಳಿಗೆ ಆರ್ಥಿಕ ರೂ.40 ಲಕ್ಷ ಇದೆ. ಆಸಕ್ತ ರೈತರು ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಖಾತೆಯ ಪುಸ್ತಕ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ಗಳೊಂದಿಗೆ ನವೆಂಬರ್ 15 ರೊಳಗಾಗಿ ಆಯಾ ಹೋಬಳಿಯ ಅಧಿಕಾರಿಗಳಿಗೆ ಅಥವಾ ಸಿರುಗುಪ್ಪ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಸಿರುಗುಪ್ಪ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮಹೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ