ಸೋಮವಾರ, ನವೆಂಬರ್ 10, 2025
ಬಿಐಟಿಎಂ: ಒಂದು ದಿನದ ಕಾರ್ಯಾಗಾರ
ಬಳ್ಳಾರಿ,ನ.10(ಕರ್ನಾಟಕ ವಾರ್ತೆ):
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಆರ್ಎಎಂಪಿ ಯೋಜನೆಯಡಿ ನಗರದ ಅಲ್ಲೀಪುರದ ಬಳ್ಳಾರಿ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ ಮೆಂಟ್ (ಬಿಐಟಿಎಂ) ಕಾಲೇಜು ಸಭಾಂಗಣದಲ್ಲಿ ಇಂಕ್ಯುಬೇಶನ್ ಯೋಜನೆ ಕುರಿತು ಸೋಮವಾರ ಒಂದು ದಿನದ ಜಾಗೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಬಳ್ಳಾರಿ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ ಮೆಂಟ್ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಘವೇಂದ್ರ ಜೋಷಿ ಅವರು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಬಿಐಟಿಎಂ ಕಾಲೇಜು ವತಿಯಿಂದ ಒಟ್ಟು 12 ಇಂಕ್ಯೂಬೇಶನ್ ಚಟುವಟಿಕೆಗಳ ಕುರಿತು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಗರಿಷ್ಠ ರೂ.03 ಲಕ್ಷದಂತೆ ಪ್ರೋತ್ಸಾಹಧನ ಪಡೆದಿದೆ ಎಂದು ಹೇಳಿದರು.
ಯುವ ಪೀಳಿಗೆಯು ಹೊಸ ವಿಷಯಗಳ ಮೇಲೆ ಅನ್ವೇಷಣೆ ಮಾಡುವ ಆಸಕ್ತಿ ಬೆಳೆಸಿಕೊಳ್ಳಬೇಕು. ಇಂತಹ ಕಾರ್ಯಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಗಾರದಲ್ಲಿ ವಿದ್ಯಾರ್ಥಿಗಳಿಗೆ ಇಂಕ್ಯುಬೇಶನ್ ಸೌಲಭ್ಯಗಳು, ಯಶಸ್ಸಿನ ಕಥೆಗಳ ಬಗ್ಗೆ ಅರಿವು ಮೂಡಿಸಲಾಯಿತು ಹಾಗೂ ಉದ್ಯಮಿಗಳು ತಮ್ಮ ಅನುಭವ ಮತ್ತು ಅನಿಸಿಕೆ ಹಂಚಿಕೊAಡರು.
ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ್.ಬಿ., ಎಐಎಂಎಲ್ ಹೆಚ್ಓಡಿ ಡಾ.ಬಿ.ಎಂ.ವಿದ್ಯಾವತಿ, ಇನೊವೇಷನ್ ಸೆಂಟರ್ ಹೆಚ್ ಬ್ರೀಕ್ಸ್ ಡಾ.ಮಲ್ಲಿಕಾರ್ಜುನ.ಎ., ಪ್ರಾಧ್ಯಾಪಕಿ ಡಾ.ರೇಣುಕ ಸಾಗರ್, ಸಹಾಯಕ ಪ್ರಾಧ್ಯಾಪಕ ಜಯ ಪ್ರಕಾಶ್, ರಾಯಲ್ಗ್ ಇಂಡಸ್ಟಿçÃಸ್ನ ಸಂಸ್ಥಾಪಕ ಹಾಗೂ ನಿರ್ದೇಶಕ ರಾಯಮಂಡ್ ಇರುದಯರಾಜ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಇತರರು ಭಾಗವಹಿಸಿದ್ದರು.
------------
ಅಂತರಾಷ್ಟಿçÃಯ ದತ್ತು ಮಾಸಾಚರಣೆ ಜಾಗೃತಿ ಕಾರ್ಯಕ್ರಮದಲ್ಲಿ ನ್ಯಾ.ರಾಜೇಶ್ ಎನ್.ಹೊಸಮನೆ ಹೇಳಿಕೆ | ಅಕ್ರಮ ದತ್ತು ಪ್ರಕ್ರಿಯೆಯಲ್ಲಿ ಭಾಗವಹಿಸುವುದು ಅಪರಾಧ
ಬಳ್ಳಾರಿ,ನ.10(ಕರ್ನಾಟಕ ವಾರ್ತೆ):
ಅಕ್ರಮ ದತ್ತು ಕಾರ್ಯದಲ್ಲಿ ಭಾಗವಹಿಸುವುದು ಅಪರಾಧವಾಗಿದ್ದು, ಭಾಗವಹಿಸಿರುವುದು ದೃಢವಾದಲ್ಲಿ ಕನಿಷ್ಠ 5 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಲು ಕಾನೂನಿನಡಿ ಅವಕಾಶವಿದೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಎಂದು ತಿಳಿಸಿದರು.
ಅಂತರಾಷ್ಟಿçÃಯ ದತ್ತು ಮಾಸಾಚರಣೆ ಅಭಿಯಾನದಡಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ವಿಶೇಷ ದತ್ತು ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ‘ವಿಶೇಷ ಚೇತನ ಮಕ್ಕಳ ದತ್ತು ಪ್ರಕ್ರಿಯೆ’ ಎಂಬ ಘೋಷವಾಕ್ಯದಡಿ ನಗರದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅಜಾದ್ ವಸತಿ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಾನವನ ಜೀವ ಅತೀ ಅಮೂಲ್ಯವಾಗಿದ್ದು, ಯಾವುದೇ ಕಾರಣದಿಂದಾಗಿ ಪೋಷಕರು ನವಜಾತ ಶಿಶುಗಳನ್ನು ಬಿಟ್ಟುಹೋಗಿರುವುದು ಕಂಡುಬAದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಇಲಾಖೆಯ ಗಮನಕ್ಕೆ ತರಬೇಕು. ಅಂತಹ ಮಕ್ಕಳನ್ನು ರಕ್ಷಣೆ ಮಾಡಿ ಆರೈಕೆ ಮಾಡಿ, ಒಳ್ಳೆಯ ಕುಟುಂಬ ಮತ್ತು ಪೋಷಕರಿಗೆ ಮಕ್ಕಳನ್ನು ದತ್ತು ನೀಡುವ ಮೂಲಕ ಅಂತಹ ಮಕ್ಕಳಿಗೆ ಒಳ್ಳೆಯ ಜೀವನ ನೀಡಲು ಸಾಧ್ಯ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಕೋರಿದರು.
ಕಾನೂನಿನ ನೆರವು ಅಗತ್ಯವುಳ್ಳ ಬಡ ಮತ್ತು ನಿರ್ಗತಿಕ ಕುಟುಂಬಗಳು ಉಚಿತವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಾನೂನು ಸೇವೆ ಪಡೆದುಕೊಳ್ಳಬಹುದು ಎಂದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭಧ್ರದೇವಿ ಅವರು ಮಾತನಾಡಿ, ಮಕ್ಕಳ ರಕ್ಷಣೆ ಮತ್ತು ಪೋಷಣೆ ನಮ್ಮೆಲ್ಲರ ಹೊಣೆಯಾಗಿದೆ. ಮಕ್ಕಳನ್ನು ಬಾಲ್ಯವಿವಾಹ, ಬಾಲಕಾರ್ಮಿಕ, ಭಿಕ್ಷಾಟನೆ, ಲೈಂಗಿಕ ಕಿರುಕುಳ ಮತ್ತು ಇನ್ನಿತರೆ ಸಂಕಷ್ಟಕ್ಕೆ ಒಳಗಾದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಒಂದುವೇಳೆ ಅಂತಹ ಸಮಸ್ಯೆಗಳು ಎದುರಿಸುತ್ತಿದ್ದರೆ, ಇಲ್ಲವೇ ಕಂಡುಬAದಲ್ಲಿ ನಿರ್ಭಯವಾಗಿ ಮಕ್ಕಳ ಸಹಾಯವಾಣಿ ಸಂಖ್ಯೆ 1098, 112 ಗೆ ಕರೆ ಮಾಡಬೇಕು. ಮಾಹಿತಿ ನೀಡಿದವರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದರು.
ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಮಕ್ಕಳ ಸುರಕ್ಷತೆ ಕುರಿತು ಅರಿವು ಮೂಡಿಸುವುದು ಅಗತ್ಯ. ಪ್ರತಿ ಶಾಲೆಯಲ್ಲಿ ದೂರು ಪೆಟ್ಟಿಗೆಯನ್ನು ನಿರ್ವಹಿಸಿ ದೂರುಗಳನ್ನು ಪ್ರತಿ ತಿಂಗಳು ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.
ಮಕ್ಕಳ ವಿಶೇಷ ಪೊಲೀಸ್ ಘಟಕದ ಸಿಬ್ಬಂದಿ ಲಲಿತಮ್ಮ ಅವರು ಮಾತನಾಡಿ, ಹೆಣ್ಣು ಮಕ್ಕಳು ಅಂತರ್ಜಾಲದಲ್ಲಿ ತಮ್ಮ ವೈಯಕ್ತಿಕ ಮಾಹಿತಿ ಮತ್ತು ಫೋಟೋಗಳನ್ನು ಹಂಚಿಕೊಳ್ಳಬಾರದು. ಸೈಬರ್ ಕ್ರೆöÊಮ್ ಕುರಿತು ಅರಿವು ಪ್ರತಿಯೊಬ್ಬರೂ ಹೊಂದಬೇಕು ಎಂದು ಹೇಳಿದರು.
ನಂತರ ಮಕ್ಕಳ ವಿಶೇಷ ಪೊಲೀಸ್ ಘಟಕದ ಸೇವೆಗಳು, ಕಾರ್ಯವೈಖರಿ, ಪ್ರತಿ ಪೊಲೀಸ್ ಠಾಣೆಯಿಂದ ತೆರೆದ ಮನೆ ಕಾರ್ಯಕ್ರಮಗಳ ಕುರಿತು ತಿಳಿಸಿದರು.
ವಸತಿ ಶಾಲೆಯ ಪ್ರಾಂಶುಪಾಲ ಕೆ.ಎಂ.ಮೂಕಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ಮಕ್ಕಳ ಸಹಾಯವಾಣಿ ಸಂಖ್ಯೆ-1098, ಪೊಲೀಸ್ ಸೇವೆ-112, ಸೈಬರ್ ಕ್ರೆöÊಮ್ -1930 ಮತ್ತು ಉಚಿತ ರಾಷ್ಟಿçÃಯ ಕಾನೂನು ಸೇವೆಗಳ ಸಂಖ್ಯೆ -15100 ಗಳನ್ನು ನೆನಪಿಟ್ಟುಕೊಂಡು ಅಗತ್ಯ ಸಂದರ್ಭಗಳಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಮಕ್ಕಳ ರಕ್ಷಣಾಧಿಕಾರಿ (ಆಸಾಂಸ್ಥಿಕ ಸೇವೆ) ಚನ್ನಬಸಪ್ಪ ಪಾಟೀಲ್ ಅವರು ದತ್ತು ಕುರಿತ ಪ್ರತಿಜ್ಞಾವಿಧಿ ಭೋದಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ನಾಗಯ್ಯ ಹಿರೇಮಠ, ಕಾನೂನು ಪರಿವೀಕ್ಷಣಾಧಿಕಾರಿ ಈಶ್ವರ್ ರಾವ್, ಮಕ್ಕಳ ಸಹಾಯವಾಣಿ ಸಂಯೋಜಕ ಕೆ. ಆನಂದ, ಮಿಷನ್ ಶಕ್ತಿ ಸಂಯೋಜಕಿ ಶಹಜಹಾನ್, ದತ್ತು ಸಂಸ್ಥೆಯ ಸಿಬ್ಬಂದಿ ಗಣೇಶ್ ಸೇರಿದಂತೆ ವಸತಿ ಶಾಲೆಯ ಶಿಕ್ಷಕರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಹಾಗೂ ವಸತಿ ನಿಯಲದ 300ಕ್ಕೂ ಹೆಚ್ಚು ಮಕ್ಕಳು ಉಪಸ್ಥಿತರಿದ್ದರು.
--------------
ಆರೋಗ್ಯಕರ ಜೀವನ ಶೈಲಿಯಿಂದ ಕ್ಯಾನ್ಸರ್ ರೋಗ ತಡೆಗಟ್ಟಬಹುದು: ಡಿಹೆಚ್ಓ ಡಾ.ಯಲ್ಲಾ ರಮೇಶ್ ಬಾಬು
ಬಳ್ಳಾರಿ,ನ.10(ಕರ್ನಾಟಕ ವಾರ್ತೆ):
ಆರೋಗ್ಯಕರ ಜೀವನ ಶೈಲಿಯಿಂದ ಕ್ಯಾನ್ಸರ್ ರೋಗವನ್ನು ತಡೆಗಟ್ಟಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.
2014 ರಲ್ಲಿ ಪ್ರಾರಂಭಿಸಲಾದ ರಾಷ್ಟಿçÃಯ ಕ್ಯಾನ್ಸರ್ ಜಾಗೃತಿ ದಿನವನ್ನು ಪ್ರತಿ ವರ್ಷ ನವೆಂಬರ್ 7 ರಂದು ಆಚರಿಸಲಾಗುತ್ತದೆ. ಕ್ಯಾನ್ಸರ್ ತಡೆಗಟ್ಟುವಿಕೆ, ಕ್ಯಾನ್ಸರ್ನ ವಿವಿಧ ರೂಪಗಳು, ಅಪಾಯಕಾರಿ ಅಂಶಗಳು ಮತ್ತು ತಡೆಗಟ್ಟುವಿಕೆ, ಕ್ಯಾನ್ಸರ್ ಲಕ್ಷಣಗಳನ್ನು ಮೊದಲೇ ಪತ್ತೆ ಹಚ್ಚುವುದು ಮತ್ತು ಚಿಕಿತ್ಸೆಯ ಮಹತ್ವದ ಬಗ್ಗೆ ಜನರಿಗೆ ಮಾಹಿತಿಯನ್ನು ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
*ಮುಂಜಾಗ್ರತೆ ವಹಿಸಬೇಕಾದ ಕ್ರಮ:*
ಧೂಮಪಾನ ಮತ್ತು ತಂಬಾಕು ಸೇವನೆಯು ಬಾಯಿ ಕ್ಯಾನ್ಸರ್ ಮತ್ತು ಶಾಸ್ವಕೋಶ ಕ್ಯಾನ್ಸರ್ಗಳಿಗೆ ಪ್ರಮುಖ ಕಾರಣವಾಗಿದ್ದು, ಅತಿಯಾದ ಮದ್ಯಪಾನ ಯಕೃತ್ತು, ಸ್ತನ ಮತ್ತು ಜೀರ್ಣಾಂಗಗಳ ಕ್ಯಾನ್ಸರ್ ಉಂಟಾಗಬಹುದು. ಹಾಗಾಗಿ ಅವುಗಳಿಂದ ದೂರವಿರಬೇಕು ಎಂದಿದ್ದಾರೆ.
ಆರೋಗ್ಯಕರ ಆಹಾರ, ಹಣ್ಣುಗಳು, ತರಕಾರಿಗಳು, ಧಾನ್ಯಗಳಿಂದ ಸಮೃದ್ಧವಾಗಿರುವ ಸಮತೋಲಿತ ಆಹಾರ ಸೇವಿಸಬೇಕು. ಸಂಸ್ಕರಿಸಿದ ಆಹಾರ ಕಡಿಮೆ ಮಾಡಬೇಕು. ನಿಯಮಿತ ದೈಹಿಕ ಚಟುವಟಿಕೆ ಮಾಡುವುದರಿಂದ ಕ್ಯಾನ್ಸರ್ ಅಪಾಯ ತಡೆಗಟ್ಟಬಹುದಾಗಿದೆ.
ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು. ಚರ್ಮದ ಕ್ಯಾನ್ಸರ್ಗೆ ತಡೆಗಟ್ಟಲು ಹಾನಿಕಾರಕ ಯುವಿ ಕಿರಣಗಳಿಂದ ಚರ್ಮವನ್ನು ರಕ್ಷಿಸಿಕೊಳ್ಳಬೇಕು. ನಿಯಮಿತ ಮಮೊಗ್ರಾಮ್ಗಳು, ಪ್ಯಾಪ್ ಸ್ಮೀಯರ್ಗಳು ಮತ್ತು ಕೊಲೊನೋಸ್ಕೋಪಿಗಳಂತಹ ಸ್ಕಿçÃನಿಂಗ್ ಗಳನ್ನು ಆಗಾಗ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಪ್ರಸ್ತುತ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತಿ ಸೋಮವಾರ ಹಾಗೂ ಗುರುವಾರ ದಿನಗಳಂದು ಹುಬ್ಬಳ್ಳಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಿಂದ ಕ್ಯಾನ್ಸರ್ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ ಮತ್ತು ಕಿಮೋಥೆರಫಿ ಚಿಕಿತ್ಸೆ ನೀಡಲಾಗುತ್ತದೆ. ಜಿಲ್ಲಾ ಆಸ್ಪತ್ರೆಯಲ್ಲಿ ಕೀಮೋಥೆರಫಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ವಾರ್ಡ್ನ ಸೌಲಭ್ಯವಿದೆ.
ಪ್ರಸ್ತುತ ವರ್ಷ ಏಪ್ರೀಲ್ ನಿಂದ ಅಕ್ಟೋಬರ್ ತಿಂಗಳವರೆಗೆ ತಪಾಸಣೆಯಾದ ಒಟ್ಟು ಕ್ಯಾನ್ಸರ್ ಪ್ರಕರಣಗಳು-96, ಕೀಮೋಥೆರಫಿ ಚಿಕಿತ್ಸೆಯಲ್ಲಿರುವ ಒಟ್ಟು ಪ್ರಕರಣ-45, ಬಾಯಿ ಕ್ಯಾನ್ಸರ್-14, ಗರ್ಭಕಂಠದ ಕ್ಯಾನ್ಸರ್-16, ಯಕೃತ್ ಕ್ಯಾನ್ಸರ್-2, ಅಂಡಾಶಯ ಕ್ಯಾನ್ಸರ್-4, ಶಾಸ್ವಕೋಶ ಕ್ಯಾನ್ಸರ್-1, ಸ್ತನ ಕ್ಯಾನ್ಸರ್-8 ಪ್ರಕರಣಗಳು ಕಂಡುಬAದಿವೆ ಎಂದು ಡಿಹೆಚ್ಓ ಮಾಹಿತಿ ನೀಡಿದ್ದಾರೆ.
ತಾಲ್ಲೂಕು ಮಟ್ಟದಲ್ಲಿ ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಸಾರ್ವಜನಿಕರಿಗೆ ವಿವಿಧ ಹಂತಗಳಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಬಗ್ಗೆ ಅರಿವು ಮೂಡಿಸಲಾಗುತ್ತಿದ್ದು, ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ಕ್ಯಾನ್ಸರ್ ಜಾಗೃತಿ ಹಾಗೂ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಸಾರ್ವಜನಿಕರು ಇದರ ಕುರಿತು ಮಾಹಿತಿ ಪಡೆದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ನ.10(ಕರ್ನಾಟಕ ವಾರ್ತೆ):
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನ ಕಾರ್ಯಕ್ರಮಗಳಡಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿಯ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ www.sw.kar.nic.in ಅಥವಾ https://ssp.postmatric.karnataka.gov.in/homepage.aspx ಲಿಂಕ್ ನಲ್ಲಿ ಅರ್ಜಿ ಸಲ್ಲಿಸಬಹುದು.
*ಸೂಚನೆಗಳು*:
ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡಿ ಪ್ರಥಮ ಬಾರಿಗೆ, ಪ್ರಥಮ ಪ್ರಯತ್ನದಲ್ಲಿ ಪಾಸಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸಿ ವಿದ್ಯಾಥಿವೇತನ ಪಡೆದ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿಗೆ ಅರ್ಜಿ ಸಲ್ಲಿಸಬಹುದು.
ಕಳೆದ ಸಾಲಿನಲ್ಲಿ ವಿವಿಧ ಕಾರಣಗಳಿಂದ ವಿದ್ಯಾರ್ಥಿ ವೇತನ ಮಂಜೂರಾಗದ ಹಾಗೂ ರಿಜೆಕ್ಟ್ ಆಗಿರುವ ವಿದ್ಯಾರ್ಥಿಗಳು ಮಾತ್ರ ಪ್ರಸಕ್ತ ಸಾಲಿನಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗಳಿಗೆ ಎನ್ಪಿಸಿಐ ಆಧಾರ್ ಸೀಡಿಂಗ್ ಮಾಡಿಸಿರಬೇಕು. ತೊಂದರೆಯಿದ್ದಲ್ಲಿ ಅಂಚೆ ಕಚೇರಿಯಲ್ಲಿ ಖಾತೆಯನ್ನು ತೆರೆಯಬೇಕು. ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಪ್ರತಿ ಶೈಕ್ಷಣಿಕ ಸಾಲಿಗೆ ಆನ್ಲೈನ್ ಅರ್ಜಿ ಸಲ್ಲಿಸಬಹುದು.
ಪ್ರಸಕ್ತ ಸಾಲಿನಿಂದ ಪ್ರತಿ ಶಾಲಾ ಮುಖ್ಯೋಪಾಧ್ಯಾಯರು, ಹಾಗೂ ಕಾಲೇಜು ಪ್ರಾಂಶುಪಾಲರು ಗಳಿಗೆ ಸಬಲೀಕರಣ ಅಧಿಕಾರಿ ಅಥವಾ ಸಂಸ್ಥೆಯ ನೋಡಲ್ ಅಧಿಕಾರಿಯನ್ನು ನಿಯೋಜಿಸಿದ್ದು, ತಾಲ್ಲೂಕು ಲಾಗಿನ್ನಲ್ಲಿ ಸೇರ್ಪಡೆ ಮಾಡಿಕೊಳ್ಳಲು ಕ್ರಮವಹಿಸಬೇಕು. ನಂತರ ಸೇರ್ಪಡೆಯಾದ ಅಧಿಕಾರಿಗಳ ಇ-ಕೆವೈಸಿ ವಿವರಗಳನ್ನು ಅಪ್ಡೇಟ್ ಮಾಡಿ ಅನುಮೋದಿಸುತ್ತಾರೆ.
ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊದಲು ಬಯೋಮೇಟ್ರಿಕ್ ಇ-ಧೃಢಿಕರಣ/ಎನ್ಎಸ್ಪಿ ಒಟಿಆರ್ ನೊಂದಣಿಯನ್ನು ಮಾಡಿಸಿದ ನಂತರ ಎಸ್ಎಸ್ಪಿ ಯಲ್ಲಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಮೊದಲನೇ ರೈಲ್ವೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ(ಗ್ರೇಡ್-1) ಕಚೇರಿ ಅಥವಾ ದೂ.08392-244738, ಮೊ.9480843073 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ನ.13 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ನ.10(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳುತ್ತಿರುವುರಿಂದÀ 11 ಕೆ.ವಿ. ಫೀಡರನಲ್ಲಿ ನ.13 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ಎಫ್-9 ವ್ಯಾಪ್ತಿಯ ನೆಹರು ಕಾಲೋನಿ, ಎಸ್.ಎನ್.ಪೇಟೆ 1ನೇ, 2ನೇ, 4ನೇ, 5ನೇ ಮತ್ತು 6ನೇ ಅಡ್ಡರಸ್ತೆ, ಶಂಕರ್ ಕಾಲೋನಿ, ಡಿಎಆರ್ ಗ್ರೌಂಡ್, ಕೂಲ್ ಕಾರ್ನರ್, ಡಬಲ್ ರಸ್ತೆ, ಕೋಲಾಚಲಂ ಕಾಂಪೌAಡ್, ಗಡಿಗಿ ಚೆನ್ನಪ್ಪ ವೃತ್ತ, ಗಾಂಧಿ ಭವನ, ಸಿಎಂಸಿ, ಅಂಬಲಿ ಬಾಗ್, ಹಳೆಯ ತಾಲ್ಲೂಕು ಕಚೇರಿ, ಹಳೆಯ ಜಿಲ್ಲಾಧಿಕಾರಿಗಳ ಕಚೇರಿ, ರೈಲ್ವೇ ಸ್ಟೇಷನ್ ರೋಡ್ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಡಿ.13 ರಂದು ರಾಷ್ಟಿçÃಯ ಲೋಕ್ ಅದಾಲತ್
ಬಳ್ಳಾರಿ,ನ.10(ಕರ್ನಾಟಕ ವಾರ್ತೆ):
ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಡಿಸೆಂಬರ್ 13 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟಿçÃಯ ಲೋಕ್ ಅದಾಲತ್ ನಡೆಸಲಾಗುವುದು.
ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲಿ ರಾಷ್ಟಿçÃಯ ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ.
*ಸೂಚನೆ:*
ಪ್ರತಿದಿನ ಎಲ್ಲಾ ನ್ಯಾಯಾಲಯಗಳಲ್ಲಿ ಮೆಗಾ-ಲೋಕ್ ಅದಾಲತ್ ಗೆ ಸಂಬAಧಿಸಿದAತೆ ಪೂರ್ವಭಾವಿ ಬೈಠಕ್ ಗಳು ನಡೆಯುತ್ತಲಿರುತ್ತವೆ.
ಹೆಚ್ಚಿನ ಮಾಹಿತಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ದೂ.08392-278077 ಹಾಗೂ ಎನ್ಎಎಲ್ಎಸ್ಎ ಸಹಾಯವಾಣಿ ಸಂಖ್ಯೆ 15100 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.
ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ ಅವರು ತಿಳಿಸಿದ್ದಾರೆ.
---------------
ನ.14 ರಂದು ನೀರಾವರಿ ಸಲಹಾ ಸಮಿತಿ ಸಭೆ
ಬಳ್ಳಾರಿ,ನ.10(ಕರ್ನಾಟಕ ವಾರ್ತೆ):
ಪ್ರಸ್ತಕ ಸಾಲಿಗೆ ತುಂಗಭದ್ರಾ ಜಲಾಶಯದ ಹಿಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ತುಂಗಾಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳಿಗೆ ಒದಗಿಸುವ ಕುರಿತು ಚರ್ಚಿಸಲು ನ.14 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ವಿಧಾನಸೌಧದ 3 ನೇ ಮಹಡಿಯ ಕೊಠಡಿ ಸಂಖ್ಯೆ 334 ರ ಸಮ್ಮೇಳನ ಸಭಾಂಗಣದಲ್ಲಿ 125 ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ.
ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಇಲಾಖೆ ಹಾಗೂ ಬೆಂಗಳೂರು ನಗರಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆದ ಶಿವರಾಜ ಎಸ್.ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಭೆಗೆ ಸಂಬAಧಿಸಿದ ಸಚಿವರು, ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರು, ರೈತ ಮುಖಂಡರು ಭಾಗವಹಿಸಿ ತಮ್ಮ ಸಲಹೆ ಸೂಚನೆ ನೀಡಬಹುದು ಎಂದು ತುಂಗಾಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಆದ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
-------------
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬಳ್ಳಾರಿ,ನ.10(ಕರ್ನಾಟಕ ವಾರ್ತೆ):
ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿವಾರು ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ತಾತ್ಕಾಲಿಕ ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಸಂಡೂರು ತಾಲ್ಲೂಕಿನ ಗೊಲ್ಲಲಿಂಗಮ್ಮನ ಹಳ್ಳಿ ಗ್ರಾಪಂ- 01, ಕಂಪ್ಲಿ ತಾಲ್ಲೂಕಿನ ನಂ.10 ಮುದ್ದಾಪುರ ಗ್ರಾಪಂ- 01, ಸಿರುಗುಪ್ಪ ತಾಲ್ಲೂಕಿನ ಹಚ್ಚೋಳ್ಳಿ, ಕೆಂಚನಗುಡ್ಡ ಗ್ರಾಪಂ- 02 ಸೇರಿ ಒಟ್ಟು 04 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಖಾಲಿಯಿದ್ದು, ಆಯಾ ತಾಲ್ಲೂಕಿನ ತಾಪಂ ಕಾರ್ಯ ನಿರ್ವಹಣಾ ಅಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ನಿಯಮಾನುಸಾರ ನೇಮಕ ಮಾಡಲಾಗುವುದು.
ಈ ಹುದ್ದೆಗಳಿಗೆ ಮಾಸಿಕ ಗೌರವಧನ ರೂ.10,000 ಇರುತ್ತದೆ. ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ ವಿಕಲಚೇತನರು (ಕರ್ತವ್ಯ ನಿರ್ವಹಿಸಲು ಸಮರ್ಥರಿರುವವರು) ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಆಯಾ ತಾಲ್ಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳಿಗೆ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 26 ಕೊನೆಯ ದಿನ.
*ಅರ್ಹತೆ:*
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಸ್ಥಳಿಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು (ಸ್ಥಳಿಯರಾಗಿರಬೇಕು). ವಯೋಮಿತಿ 18-45 ವರ್ಷದ ಆರೋಗ್ಯವಂತರಾಗಿರಬೇಕು. ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಿಕಲಚೇತನರ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ಅಂಗವಿಕಲರಾಗಿರಬೇಕು, ಭಾಗಶ: ಅಂಧರು, ಭಾಗಶ:ಶ್ರವಣ ದೋಷವುಳ್ಳವರು, (ಮೈಲ್ಡ್ ಮತ್ತು ಮಾಡರೇಟ್) ಹಾಗೂ ದೈಹಿಕ ಅಂಗವಿಕಲರಿಗೆ ಅವಕಾಶ ಕಲ್ಪಿಸುವುದು.
ಮೂರು ರೀತಿಯ ಅಂಗವಿಕಲರಿಗೆ ಸಮಾನವಾಗಿ ಆಯ್ಕೆ ಮಾಡಬೇಕು ಒಂದು ವರ್ಗದ ಅಂಗ ವಿಕಲರಿಗೆ ಆಯ್ಕೆಗೆ ಲಭ್ಯವಿಲ್ಲದಿದ್ದಲ್ಲಿ ಇನ್ನೊಂದು ವರ್ಗದಲ್ಲಿರುವ ಅಂಗವಿಕಲ ಅಭ್ಯರ್ಥಿ ಆಯ್ಕೆ ಮಾಡಲು ಕ್ರಮ ಕೈಗೊಳ್ಳಬೇಕು. ಮಹಿಳೆಯರಿಗೆ ಮೊದಲ ಆದ್ಯತೆ ನೀಡಬೇಕು. ಅಂಗವಿಕಲರಿಗೆ ಶೇ.40 ಕ್ಕಿಂತ ಮೇಲ್ಪಟ್ಟಿರಬೇಕು. ಅಂಗವಿಕಲರ ಬಗ್ಗೆ ವೈದ್ಯಕೀಯ ಮಂಡಳಿ ಪ್ರಮಾಣ ಪತ್ರ (ಗುರುತಿನ ಚೀಟಿ ಯುಡಿಐಡಿ ಕಾರ್ಡ್) ಹೊಂದಿರಬೇಕು.
ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ/ಸೌಲಭ್ಯ ಕಲ್ಪಿಸಲು ಸಧೃಡರಾಗಿರಬೇಕು. ಗೌರವಧನ ಅವಧಿ ಮುಂದುವರಿಸುವ ಬಗ್ಗೆ ಒಂದು ವರ್ಷದ ನಂತರ ಅವರ ಕಾರ್ಯ ವೈಖರಿಗೊಳಪಟ್ಟಿದ್ದು ಮುಂದುವರಿಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಆಯ್ಕೆ ಮಾಡುವಾಗ ಸರ್ಕಾರ ನಿಗದಿಪಡಿಸಿರುವ ಕರ್ತವ್ಯಗಳನ್ನು ನಿರ್ವಹಿಸಲು “ಸಮರ್ಥಕ” ಎಂಬ ಬಗ್ಗೆ ಪರಿಶೀಲಿಸಿ ಆಯ್ಕೆ ಮಾಡುವುದು. ಹುದ್ದೆಯು ಗೌರವಧನದ ಆಧಾರದ ಮೇಲೆ ಇರುವುದರಿಂದ ಇವರನ್ನು ಯಾವಾಗ ಬೇಕಾದರು ಕೆಲಸದಿಂದ ತೆಗೆದು ಹಾಕ ಬಹುದಾಗಿ/ಬಿಡುಗಡೆ ಮಾಡಬಹುದಾಗಿದೆ. ಗೌರವಧನದ ಆಧಾರದ ಮೇಲೆ ಕೆಲಸ ನಿರ್ವಹಿಸುವುದರಿಂದ ಖಾಯಂಗೊಳಿಸುವAತೆ ಕೋರಲು ಅವಕಾಶವಿಲ್ಲ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಎಂಆರ್ಡಬ್ಲೂö್ಯ ಗಳಾದ ಸಂಡೂರು (ಕರಿಬಸಜ್ಜ) ಮೊ.9632052270, ಕಂಪ್ಲಿ/ಬಳ್ಳಾರಿ (ರಾಣಿ)ಮೊ.8880875620, ಸಿರುಗುಪ್ಪ (ಸಾಬೇಶ) ಮೊ.9743509698, ಜಿಲ್ಲಾ ಸಂಯೋಜಕ (ಕೆ.ಟೇಕರಾಜ್) ಮೊ.9481320119 ಮತ್ತು ನಗರದ ಕಂಟೋನ್ ಮೆಂಟ್ ಪ್ರದೇಶದ ಶಾಂತಿಧಾಮ ಆವರಣದ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಥವಾ ಕಚೇರಿ ದೂ.08392267886 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ನ.11 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ನ.10(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ ಜಿಲ್ಲಾ ಕೋರ್ಟ್ ಸಂಕೀರ್ಣದ ವಿದ್ಯುತ್ ಲೈನ್ ನ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ನ.11 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ 11 ಕೆ.ವಿ ಫೀಡರ್ನ ಎಫ್-6 ವ್ಯಾಪ್ತಿಯ ನಗರದ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತಿçà ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಅವಂಬಾವಿ, ಜಿಲ್ಲಾ ಕೋರ್ಟ್ ಸಂಕೀರ್ಣ ಪ್ರದೇಶಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಬಾಲಕ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ನ.10(ಕರ್ನಾಟಕ ವಾರ್ತೆ):
ನಗರದ ಹೊಸಪೇಟೆ ರಸ್ತೆಯ ವಿನಾಯಕ ನಗರದ ರಂಗ ಮೆಡಿಕಲ್ ಸ್ಟೋರ್ ಹತ್ತಿರ ನಿವಾಸಿ ಅರುಣ್ ಕುಮಾರ್.ಬಿ ಎನ್ನುವ 14 ವರ್ಷದ ಬಾಲಕ ಚೆಳ್ಳಗುರ್ಕಿಯ ಗಾಂಧಿತತ್ವ ವಸತಿ ಶಾಲೆಯ 08 ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ದಸರಾ ಹಬ್ಬದ ರಜೆಗೆ ಮನೆಗೆ ಬಂದು ಮರಳಿ ನ.03 ರಂದು ಶಾಲೆಗೆ ಹೋಗುವುದಾಗಿ ಹೇಳಿ ಕಾಣೆಯಾಗಿದ್ದು, ಈ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನ ಪತ್ತೆಗೆ ಸಹಕರಿಸಬೇಕು ಎಂದು ಸಬ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.
ಚಹರೆ ಗುರುತು:
ಅಂದಾಜು 4 ವರೆ ಅಡಿ ಎತ್ತರ, ಕೋಲು ಮುಖ, ಬಿಳಿ ಮೈಬಣ್ಣ, ಕಪ್ಪು ಕೂದಲು ಹೊಂದಿರುತ್ತಾನೆ. ಹೊಟ್ಟೆಯ ಬಲಭಾಗದಲ್ಲಿ ಸುಟ್ಟ ಹಳೆಯ ಗಾಯದ ಗುರುತು ಇರುತ್ತದೆ.
ಕಾಣೆಯಾದ ಸಂದರ್ಭದಲ್ಲಿ ಕೆಂಪು ಬಣ್ಣದ ಅರ್ಧ ತೋಳಿನ ಟಿ-ಶರ್ಟ್ ಹಿಂಬದಿ ಅರುಣ್ ಎಂದು ಇಂಗ್ಲೀಷ್ ಅಕ್ಷರದಲ್ಲಿ ಪ್ರಿಂಟ್ ಇದೆ ಹಾಗೂ ನೇವಿ ಬ್ಲೂ ಬಣ್ಣದ ನೈಟ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾನೆ.
ಬಾಲಕನ ಬಗ್ಗೆ ಸುಳಿವು ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ದಾಸರ ಕೀರ್ತನೆಯ ಪ್ರತಿಯೊಂದು ಪದಕ್ಕೂ ಒಂದು ಮೌಲ್ಯವಿದೆ: ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ,ನ.08(ಕರ್ನಾಟಕ ವಾರ್ತೆ):
ಭಕ್ತಶ್ರೇಷ್ಠ ಕನಕದಾಸರ ಕೀರ್ತನೆಗಳಲ್ಲಿ ಪ್ರತಿಯೊಂದು ಪದಕ್ಕೂ ಜೀವನಾಂಶದ ಮೌಲ್ಯವಿದೆ. ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಶನಿವಾರ ಆಯೋಸಿದ್ದ ಭಕ್ತ ಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.
ಹಾಲುಮತ ಸಮಾಜದವರು ಹಾಲಿನಂತೆ ಶುಭ್ರತೆವುಳ್ಳ, ಮೃದು ಸ್ವಭಾವ ಹಾಗೂ ಕನಕ ದಾಸರರಂತೆ ಪವಿತ್ರ ಮನಸ್ಸು ಹೊಂದಿದವರು. ಅದೇರೀತಿಯಾಗಿ ಸಂಗೋಳ್ಳಿ ರಾಯಣ್ಣನವರ ಧೈರ್ಯ, ಶೌರ್ಯ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ನಗರದಲ್ಲಿ ರಾಯಣ್ಣನವರ ಪುತ್ಥಳಿ ಕೆಲವೇ ದಿನಗಳಲ್ಲಿ ಅನಾವರಣಗೊಳ್ಳಲಿದೆ. ನಗರದಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ಹಲವಾರು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಬಳ್ಳಾರಿ ನಗರ ಅಭಿವೃದ್ಧಿಯತ್ತ ಸಾಗಲಿದೆ ಎಂದರು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ ಕನಕದಾಸರು ಭಕ್ತ ಶ್ರೇಷ್ಠರು ಸಾಮಾಜಿಕ ಚಿಂತನೆಗೆ ಒಳ್ಳೆಯ ಸಂದೇಶ ಮೌಲ್ಯಗಳನ್ನು ನೀಡಿದವರು. ಕುಲ, ಗೋತ್ರ, ಜಾತಿ ಧರ್ಮ ಎನ್ನದೇ ಸಮಾನತೆಯನ್ನು ಸಾರಿದವರು. ಯುವಕರು ದಾಸರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಪಿ.ಎಲ್ ಗಾದಿಲಿಂಗನ ಗೌಡ ಮಾತನಾಡಿ ಇಂದು ಕನಕದಾಸರ 538 ನೇ ಜಯಂತಿ. ಕನಕದಾಸರು ವ್ಯಕ್ತಿಯಲ್ಲ ಶೋಷಿತರ ದೊಡ್ಡ ಧ್ವನಿಯಾಗುವ ಮೂಲಕ ಮೂಢನಂಬಿಕೆ ವಿರುದ್ಧ ಹೋರಾಡಿ ಸಮಾನತೆಯನ್ನು ಸಾರಿದವರು. 16 ನೇ ಶತಮಾನದಲ್ಲಿ ಅವರ ಕೀರ್ತನೆಗಳಿಂದ ಸಮಾಜ ಸುಧಾರಣೆಯನ್ನು ಮಾಡಿದವರು ಎಂದು ಹೇಳಿದರು.
ವೀರಶೈವ ಪದವಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ.ನೀಲಮ್ಮ.ಕೆ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ದಾಸಶ್ರೇಷ್ಠ ಕನಕದಾಸ ಎಂದೂ ಕರೆಯಲ್ಪಡುವ ಇವರು, ಭಾರತದ ಕರ್ನಾಟಕದ ಹರಿದಾಸ ಸಂತ ಮತ್ತು ದ್ವೈತ ವೇದಾಂತದ ತತ್ವಜ್ಞಾನಿಯಾಗಿದ್ದರು ಎಂದು ತಿಳಿಸಿದರು.
ಕನಕದಾಸರು ಕ್ರಿ.ಶ. 1509 ರಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ ಬೀರಪ್ಪ ಮತ್ತು ಬಚ್ಚಮ್ಮ ದಂಪತಿಗಳ ಮಗನಾಗಿ ಜನಿಸಿದರು. ಹರಿದಾಸ ಸಂತ, ದಾರ್ಶನಿಕ ಮತ್ತು ಕವಿಯಾದ ಕನಕದಾಸ ಮೂಲ ಹೆಸರು ತಿಮ್ಮಪ್ಪ ನಾಯಕ. ಇವರು ಯುದ್ಧದಲ್ಲಿ ಗಾಯಗೊಂಡ ನಂತರ ಸೈನಿಕ ವೃತ್ತಿಯನ್ನು ತ್ಯಜಿಸಿ ಶ್ರೀಕೃಷ್ಣನ ಭಕ್ತರಾದರು. ನಂತರ 'ಕನಕದಾಸರು' ಎಂಬ ಹೆಸರನ್ನು ಪಡೆದು, ತಮ್ಮ ಕೀರ್ತನೆಗಳ ಮೂಲಕ ಸಿರಿ ಮತ್ತು ಸಂಪತ್ತು ಶ್ರೇಷ್ಠವಲ್ಲ ಎಂದು ಒತ್ತಿ ಹೇಳಿದರು ಎಂದರು.
ಇದೇ ವೇಳೆ ಗಣ್ಯರು ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಭಕ್ತ ಕನಕದಾಸರ ಜಯಂತಿ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕವಿತಾ ಗಂಗೂರು ತಂಡದ ದಾಸರ ಪದಗಳು ಕೇಳುಗರಿಗೆ ಇಂಪು ನೀಡಿತು.
*ಅದ್ದೂರಿ ಮೆರವಣಿಗೆ:*
ಭಕ್ತ ಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆ ಬಳ್ಳಾರಿ ನಗರದಲ್ಲಿ ಅದ್ದೂರಿಯಾಗಿ ನಡೆಯಿತು.
ಕನಕದಾಸರ ಭಾವಚಿತ್ರದೊಂದಿಗೆ ವಿವಿಧ ಕಲಾತಂಡಗಳು ಹಾಗೂ ವಾದ್ಯಗಳೊಂದಿಗೆ ಮುನ್ಸಿಪಲ್ ಕಾಲೇಜು ಮೈದಾನದಿಂದ ಆರಂಭವಾದ ಮೆರವಣಿಗೆಯು-ಗಡಿಗಿ ಚೆನ್ನಪ್ಪ ವೃತ್ತ-ಬೆಂಗಳೂರು ರಸ್ತೆ-ಬ್ರೂಸ್ಪೇಟೆ ಪೊಲೀಸ್ ಠಾಣೆ ಮುಂಭಾಗ ತೇರು ಬೀದಿ-ಹೆಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವೇದಿಕೆವರೆಗೆ ತಲುಪಿ ಸಂಪನ್ನಗೊಂಡಿತು.
ಈ ವೇಳೆ ಡಾ.ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥ ಪಿ.ಎಸ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಡಿಡಿಪಿಐ ಉಮಾದೇವಿ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು, ಸಮಾಜದ ಮುಖಂಡರು, ಸಾರ್ವಜನಿಕರು ಹಾಗು ಇತರರು ಉಪಸ್ಥಿತರಿದ್ದರು.
=========
ಶನಿವಾರ, ನವೆಂಬರ್ 8, 2025
ನ.26, 27 ರಂದು ಜಿಲ್ಲಾಮಟ್ಟದ ಕಲಾ ಪ್ರತಿಭೋತ್ಸವ ಕಾರ್ಯಕ್ರಮ | ಬಾಲ ಪ್ರತಿಭೆ, ಕಿಶೋರ ಪ್ರತಿಭೆ, ಯುವ ಪ್ರತಿಭೆ ಹಾಗೂ ಸಮೂಹ ನಾಟಕ ಸ್ಪರ್ಧೆಗಳು
ಬಳ್ಳಾರಿ,ನ.08(ಕರ್ನಾಟಕ ವಾರ್ತೆ):
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ರಾಜ್ಯದ ಮಕ್ಕಳ, ಯುವಕರ ಕಲಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವ ಹಾಗೂ ಅವರಲ್ಲಿನ ಕಲಾ ಪ್ರತಿಭೆಯನ್ನು ವೃದ್ಧಿಗೊಳಿಸುವ ಉದ್ದೇಶದಿಂದ 2025-26ನೇ ಸಾಲಿನಲ್ಲಿ ಜಿಲ್ಲಾ, ವಲಯ ಹಾಗೂ ರಾಜ್ಯ ಮಟ್ಟದಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ, ಯುವ ಪ್ರತಿಭೆ ಹಾಗೂ ಸಮೂಹ ನಾಟಕ ಸ್ಪರ್ಧೆಗಳನ್ನು ಏರ್ಪಡಿಸಿದೆ.
ಜಿಲ್ಲಾ ಮಟ್ಟದ ಪ್ರತಿ ವಿಭಾಗಗಳಲ್ಲಿ ಪ್ರತಿ ಪ್ರಕಾರಗಳಲ್ಲಿ ನಡೆಸುವ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನಗಳಿಸಿದವರನ್ನು ವಲಯ ಮಟ್ಟಕ್ಕೆ ಕಳುಹಿಸಲಾಗುವುದು. ವಲಯ ಮಟ್ಟದಲ್ಲಿ ಪ್ರಥಮ, ದ್ವಿತೀಯ ಸ್ಥಾನಗಳಿಸಿದವರನ್ನು ರಾಜ್ಯ ಮಟ್ಟಕ್ಕೆ ಕಳುಹಿಸಿಕೊಡಲಾಗುವುದು.
ಬಾಲ ಪ್ರತಿಭೆ, ಕಿಶೋರ ಪ್ರತಿಭೆ, ಯುವ ಪ್ರತಿಭೆ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ (ಪ್ರತಿ ವಿಭಾಗಗಳ) ಪಡೆದವರಿಗೆ ಕ್ರಮವಾಗಿ ರೂ.15,000, ರೂ.10,000, ರೂ.7500 ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಗುವುದು.
ಸಮೂಹ ಸ್ಪರ್ಧೆಗಳಲ್ಲಿ (ನಾಟಕ) ರಾಜ್ಯ ಮಟ್ಟದ ಅಂತಿಮ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿಜೇತರಿಗೆ ಕ್ರಮವಾಗಿ ರೂ.50,000, ರೂ.40,000, ರೂ.30,000 ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಗುವುದು.
*ವಿವಿಧ ಸ್ಪರ್ಧೆಗಳು:*
ನ.26 ರಂದು ಬೆಳಿಗ್ಗೆ 10 ಗಂಟೆಗೆ ಬಾಲ ಮತ್ತು ಕಿಶೋರ ಪ್ರತಿಭೆಗಳಿಗೆ ವಿವಿಧ ಸ್ಥಳಗಳಲ್ಲಿ ಸ್ಪರ್ಧೆ ನಡೆಯಲಿದೆ.
ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಶಾಸ್ತಿçÃಯ ನೃತ್ಯ(10 ನಿಮಿಷ), ಸುಗಮ ಸಂಗೀತ (7 ನಿಮಿಷ), ಜಾನಪದ ಗೀತೆಗಳು(7 ನಿಮಿಷ).
ನಗರದ ಸಾಂಸ್ಕೃತಿಕ ಸಮುಚ್ಛಯ ಆವರಣದ ನಾಡೋಜ ಸುಭದ್ರಮ್ಮ ಮನ್ಸೂರ್ ಬಯಲು ರಂಗಮAದಿರದಲ್ಲಿ ಚಿತ್ರಕಲಾ ಸ್ಪರ್ಧೆ (ಸ್ವಕಲ್ಪಿತ)-120 ನಿಮಿಷ.
ನಗರದ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣ ಸಭಾಂಗಣದಲ್ಲಿ ಹಿಂದೂಸ್ಥಾನಿ/ಕರ್ನಾಟಕ ಶಾಸ್ತಿçÃಯ ವಾದ್ಯ(7 ನಿಮಿಷ), ಹಿಂದೂಸ್ಥಾನಿ/ಕರ್ನಾಟಕ ಶಾಸ್ತಿçÃಯ ಸಂಗೀತ(7 ನಿಮಿಷ) ಸ್ಪರ್ಧೆಗಳು ನಡೆಯಲಿವೆ.
ನ.27 ರಂದು ಬೆಳಿಗ್ಗೆ 10 ಗಂಟೆಗೆ ಯುವಪ್ರತಿಭೆ ಮತ್ತು ಸಮೂಹ ಸ್ಪರ್ಧೆಗಳಿಗೆ ವಿವಿಧ ಸ್ಥಳಗಳಲ್ಲಿ ಸ್ಪರ್ಧೆ ನಡೆಯಲಿದೆ.
ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಶಾಸ್ತಿçÃಯ ನೃತ್ಯ(10 ನಿಮಿಷ), ಸುಗಮ ಸಂಗೀತ (7 ನಿಮಿಷ), ನಾಟಕ(45 ನಿಮಿಷ).
ನಗರದ ಸಾಂಸ್ಕೃತಿಕ ಸಮುಚ್ಛಯ ಆವರಣದ ನಾಡೋಜ ಸುಭದ್ರಮ್ಮ ಮನ್ಸೂರ್ ಬಯಲು ರಂಗಮAದಿರದಲ್ಲಿ ಚಿತ್ರಕಲಾ ಸ್ಪರ್ಧೆ (ಸ್ವಕಲ್ಪಿತ)-120 ನಿಮಿಷ.
ನಗರದ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣ ಸಭಾಂಗಣದಲ್ಲಿ ಹಿಂದೂಸ್ಥಾನಿ/ಕರ್ನಾಟಕ ಶಾಸ್ತಿçÃಯ ವಾದ್ಯ(7 ನಿಮಿಷ), ಹಿಂದೂಸ್ಥಾನಿ/ಕರ್ನಾಟಕ ಶಾಸ್ತಿçÃಯ ಸಂಗೀತ(7 ನಿಮಿಷ), ನನ್ನ ಮೆಚ್ಚಿನ ಸಾಹಿತಿ(ಆಶು ಭಾಷಣ)-7 ನಿಮಿಷ ಸ್ಪರ್ಧೆಗಳು ನಡೆಯಲಿವೆ.
*ಮಾರ್ಗಸೂಚಿ:*
ಬಾಲಪ್ರತಿಭೆ ಸ್ಪರ್ಧೆಗಳಲ್ಲಿ ಭಾಗವಹಿಸುವ ಸ್ಪರ್ಧಾಗಳುಗಳಿಗೆ ಕನಿಷ್ಠ 8 ವರ್ಷ ತುಂಬಿರಬೇಕು. 14 ವರ್ಷಕ್ಕಿಂತ ಕಡಿಮೆ ಇರಬೇಕು. ಕಿಶೋರಪ್ರತಿಭೆ ಸ್ಪರ್ಧೆಗಳಲ್ಲಿ ಭಾಗವಹಿಸುವ ಸ್ಪರ್ಧಾಗಳುಗಳಿಗೆ ಕನಿಷ್ಠ 14 ವರ್ಷ ತುಂಬಿರಬೇಕು ಹಾಗೂ 18 ವರ್ಷಕ್ಕಿಂತ ಕಡಿಮೆ ಇರಬೇಕು.
ಯುವಪ್ರತಿಭೆ ಸ್ಪರ್ಧೆಗಳಲ್ಲಿ ಭಾಗವಹಿಸುವ ಸ್ಪರ್ಧಾಗಳುಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ 30 ವರ್ಷಕ್ಕಿಂತ ಕಡಿಮೆ ಇರಬೇಕು. ಸಮೂಹ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ತಂಡದ ಸದಸ್ಯರ ಸಂಖ್ಯೆ ಕನಿಷ್ಠ 10 ಇರಬೇಕು ಮತ್ತು ಗರಿಷ್ಠ 15 ಇರಬೇಕು. ತಂಡದ ಎಲ್ಲಾ ಕಲಾವಿದರು ವಯಸ್ಸಿನ ದಾಖಲೆ ಸಲ್ಲಿಸಬೇಕು ನಾಟಕವು ಕನಿಷ್ಠ 30 ನಿಮಿಷದಿಂದ ಗರಿಷ್ಠ 45 ನಿಮಿಷಗಳವರೆಗೆ ಇರಬೇಕು.
ವಯಸ್ಸಿನ ದೃಢೀಕರಣಕ್ಕಾಗಿ ಶಾಲಾ/ಕಾಲೇಜಿನಿಂದ ಪಡೆದ ಪ್ರಮಾಣ ಪತ್ರಗಳನ್ನು ನೀಡಬೇಕು. ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡದೇ ಇರುವವರು ಗ್ರಾಮ ಪಂಚಾಯತಿ, ಪುರಸಭೆ, ನಗರಸಭೆ, ಪಾಲಿಕೆ ಕಚೇರಿಯರಿಂದ ದೃಢೀಕರಣ ಪತ್ರ ನೀಡಬೇಕು. ಒಬ್ಬ ಸ್ಪರ್ಧಿ ಒಂದಕ್ಕಿAತ ಹೆಚ್ಚು ಪ್ರಕಾರಗಳ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.
ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಡ್ರಾಯಿಂಗ್ ಹಾಳೆ ಮಾತ್ರ ನೀಡಲಾಗುವುದು. ಉಳಿದ ಪರಿಕರಗಳನ್ನು ಅಭ್ಯರ್ಥಿಗಳೇ ತರಬೇಕು. ತೀರ್ಪುಗಾರರ ಆಯ್ಕೆಯೇ ಅಂತಿಮವಾಗಿರುತ್ತದೆ. ಈ ಹಿಂದೆ ರಾಜ್ಯ ಮಟ್ಟದಲ್ಲಿ ಬಾಲಪ್ರತಿಭೆ, ಕಿಶೋರಪ್ರತಿಭೆ, ಯುವಪ್ರತಿಭೆ/ ನಾಟಕ ಸಮೂಹ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದವರು ಈ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ.
ಈ ಮೇಲಿನ ವಿವಿಧ ವಿಭಾಗಗಳ, ಪ್ರಕಾರಗಳ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವವರು ತಮ್ಮ ಸ್ವಂತ ಖರ್ಚಿನಲ್ಲಿಯೇ ಭಾಗವಹಿಸಬೇಕು. ಸ್ಪರ್ಧಾಳುಗಳಿಗೆ ಲಘು ಉಪಹಾರ ವ್ಯವಸ್ಥೆ ಇದ್ದು, ಅವರಿಗೆ ಪ್ರಮಾಣ ಪತ್ರಗಳನ್ನು ನೀಡಲಾಗುವುದು. ರಾಜ್ಯ ಮಟ್ಟದ/ವಲಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಅರ್ಹರಾದವರಿಗೆ ವಾಸ್ತವ ಪ್ರಯಾಣ ವೆಚ್ಚ ಹಾಗೂ ವಸತಿ ಊಟದ ವ್ಯವಸ್ಥೆಯನ್ನು ಮಾಡಲಾಗುವುದು.
ಚಿತ್ರಕಲಾ ಸ್ಪರ್ಧಾಳುಗಳಿಗೆ ಡ್ರಾಯಿಂಗ್ ಹಾಳೆಗಳನ್ನು ಮಾತ್ರ ನೀಡಲಾಗುವುದು, ಕುಂಚ, ಬ್ರಷ್ ಮತ್ತು ಬಣ್ಣಗಳನ್ನು ಅಭ್ಯರ್ಥಿಗಳೇ ತರಬೇಕು. ಸ್ಪರ್ಧಾಳುಗಳಿಗೆ ಬೇಕಾಗುವ ವಾದ್ಯ ಪರಿಕರಗಳನ್ನು ಸ್ಪರ್ಧಿಗಳೇ ತರಬೇಕು. ಪಕ್ಕವಾದ್ಯ ಇಲ್ಲದೆಯೂ ಭಾಗವಹಿಸಬಹುದು.
ಈ ಮೇಲ್ಕಂಡ ಯಾವುದೇ ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಛಿಸುವವರು ಸಂಪೂರ್ಣ ವಿವರಗಳೊಂದಿಗೆ ಹಾಗೂ ವಯಸ್ಸಿನ ದಾಖಲೆಗಳು ಹಾಗೂ ಭಾಗವಹಿಸುವ ಪ್ರಕಾರಗಳ ಬಗ್ಗೆ ಸ್ಪಷ್ಟವಾಗಿ ನಮೂದಿಸಿದ ಅರ್ಜಿಗಳನ್ನು ನವೆಂಬರ್ 20 ರೊಳಗೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾಂಸ್ಕೃತಿಕ ಸಮುಚ್ಚಯ, ಡಾ.ರಾಜ್ಕುಮಾರ್ ರಸ್ತೆ, ಬಳ್ಳಾರಿ ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.08392-275182 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------------
ದಾಸ ಸಾಹಿತ್ಯ ಇಂದಿಗೂ ಪ್ರಸ್ತುತ: ಡಾ.ತಿಪ್ಪೇರುದ್ರ
ಬಳ್ಳಾರಿ,ನ.08(ಕರ್ನಾಟಕ ವಾರ್ತೆ):
ಕನಕದಾಸರ ಕಾವ್ಯ ಹಾಗೂ ತತ್ವಪದಗಳು ಮಾನವಿ ಮೌಲ್ಯಗಳಿಂದ ಇಂದಿಗೂ ಪ್ರಸ್ತುತವಾಗಿವೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಸಾರಾಂಗ (ಪ್ರ) ನಿರ್ದೇಶಕರಾದ ಡಾ. ತಿಪ್ಪೇರುದ್ರ ಹೇಳಿದರು.
ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಘಟಕದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಕನಕದಾಸರ ಜಯಂತಿಯನ್ನು ಕನಕದಾಸರ ಭಾವಚಿತ್ರಕ್ಕೆ ಗಣ್ಯರು ಪುಪ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕನ್ನಡ ಕಾವ್ಯ ಪರಂಪರೆಯಲ್ಲಿ ಕನಕದಾಸರನ್ನು ಉನ್ನತ ಸ್ಥಾನದಲ್ಲಿರಿಸಿದ್ದೇವೆ. ನಮ್ಮ ಕನ್ನಡ ಸಾಹಿತ್ಯದ ಎರಡು ಕಣ್ಣುಗಳೆಂದರೆ ವಚನ ಸಾಹಿತ್ಯ ಮತ್ತು ಕೀರ್ತನಾ ಸಾಹಿತ್ಯಗಳಾಗಿವೆ. ಕನಕದಾಸರ ಕೊಡುಗೆಯನ್ನು ಅವರವರ ದೃಷ್ಟಿಕೋನಕ್ಕೆ, ಆಲೋಚನೆ, ಜ್ಞಾನದ ಮಿತಿಯಲ್ಲಿ ಅವರನ್ನು ಅರ್ಥೈಸುವಲ್ಲಿ ಅನೇಕ ಸಂಶೋಧನೆ ಇಂದಿಗೂ ನಡೆಯುತ್ತಿವೆ. ದಾಸರ ಕೀರ್ತನೆಗಳು ಮಾನವ ಕುಲಕ್ಕೆ ಮಾದರಿಯಾಗಿದೆ. ಜನರ ಸಾಮಾಜಿಕ ಬದುಕಿನ ವಾಸ್ತವಾಂಶಗಳನ್ನು ಒಳಗೊಂಡಿದೆ ಎಂದರು.
ವಿಶ್ವವಿದ್ಯಾಲಯದ ಕುಲಸಚಿವರಾದ ನಾಗರಾಜು ಸಿ ಮಾತನಾಡಿ, ಕನಕದಾಸರು ಸಮಾಜ ಸುಧಾರಣೆ, ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಸಮಾನತೆ, ಶಾಂತಿ. ಸಹಬಾಳ್ವೆಯ ಸಮಾಜದಲ್ಲಿ ಸರ್ವಕಾಲಿಕವಾದದ್ದು. ದಾಸರ ಅನುಭವದ ಚಿಂತನೆಗಳನ್ನು ಅಳವಡಿಸಿ ಮುನ್ನಡೆಯಬೇಕು ಎಂದು ಹೇಳಿದರು.
ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಶಿವಕುಮಾರ್ ಕೆ ಮಾತನಾಡಿ, ಕೀರ್ತನೆಗಳು ಕಾವ್ಯಗಳ ಮೂಲಕ ದಾಸ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ದಾಸರ ಚಿಂತನೆಗಳು ಅವರ ವಚನಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಘಟಕದ ಸಂಯೋಜಕರಾದ ಡಾ ಕೆ ಸಿ ಪ್ರಶಾಂತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಶಶಿಧರ್ ಕೆಲ್ಲೂರ್ ನಿರೂಪಿಸಿ, ವಂದಿಸಿದರು. ಎಲ್ಲ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.
------------
ನ.09 ರಂದು ಮುಖ್ಯಮಂತ್ರಿಯವರ ಕಾರ್ಯಕ್ರಮ; ದೈನಂದಿನ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯ
ಬಳ್ಳಾರಿ,ನ.08(ಕರ್ನಾಟಕ ವಾರ್ತೆ):
ಇದೇ ನ.09 ರಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತು ವಿತರಣಾ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರಲು ಬಳ್ಳಾರಿ ವಿಭಾಗದಿಂದ ಒಟ್ಟು 165 ಬಸ್ಸುಗಳನ್ನು ವಿಜಯನಗರ ಜಿಲ್ಲೆಗೆ ಸಾಂಧರ್ಬಿಕ ಒಪ್ಪಂದದ ಮೇಲೆ ಒದಗಿಸಲಾಗುತ್ತಿದ್ದು, ನ.08 ರಂದು ಸಂಜೆ ಮತ್ತು ನ.09 ರಂದು ಬಳ್ಳಾರಿ, ಸಿರುಗುಪ್ಪ, ತೆಕ್ಕಲಕೋಟೆ, ಕುರುಗೋಡು, ಕುಡತಿನಿ, ಕಂಪ್ಲಿ, ಸಂಡೂರು ಭಾಗದಿಂದ ವಿವಿಧ ಸ್ಥಳಗಳಿಗೆ ತೆರಳುವ ದೈನಂದಿನ ಬಸ್ ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ.
ಹಾಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ಪ್ರಯಾಣಿಕರು ಸಹಕರಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆಗೆ ಜಿಲ್ಲೆಯಲ್ಲಿ ಅರಿವು ಮೂಡಿಸಿ: ಡಿಸಿ ನಾಗೇಂದ್ರ ಪ್ರಸಾದ್.ಕೆ
ಬಳ್ಳಾರಿ,ನ.08(ಕರ್ನಾಟಕ ವಾರ್ತೆ):
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ, ಶಿಕ್ಷೆ ಕುರಿತು ಜಿಲ್ಲೆಯಲ್ಲಿ ಎಲ್ಲ ಸಮುದಾಯಗಳ ಜನರಿಗೆ ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯಲ್ಲಿ ದೌರ್ಜನ್ಯ ತಡೆಗೆ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೌರ್ಜನ್ಯ ಪ್ರಕರಣಗಳ ಕುರಿತು ಜಿಲ್ಲೆಯಲ್ಲಿ ದಲಿತ ಮುಖಂಡರ ಸಭೆ ಆಯೋಜಿಸಿ, ದೌರ್ಜನ್ಯ ಪ್ರಕರಣ ತಡೆ ಕುರಿತು ಅರಿವು ಮೂಡಿಸಬೇಕು. ಈ ಮೂಲಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡಲು ಸಹಾಯವಾಗುತ್ತದೆ ಎಂದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆಯು ಸಾಕಷ್ಟು ದುರುಪಯೋಗವಾಗುತ್ತಿದೆ. ಇದರಿಂದ ನಿಜ ಪ್ರಕರಣಗಳಿಗೆ ಮೌಲ್ಯತೆ ಕಳೆದುಕೊಳ್ಳುತ್ತಿವೆ. ಹಾಗಾಗಿ ದೌರ್ಜನ್ಯ ಪ್ರಕರಣದ ನಿಖರ ಮಾಹಿತಿ ತಿಳಿದುಕೊಳ್ಳಬೇಕು. ಬಿ-ರಿಪೋರ್ಟ್ ಮಾಡುವುದಕ್ಕೂ ಮುನ್ನ ಸೂಕ್ತ ತನಿಖೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.
ಭೂಮಿಗೆ ಸಂಬAಧಿಸಿದAತೆ ಜಾಸ್ತಿ ಪ್ರಕರಣ ಕಂಡುಬರುತ್ತಿವೆ. ದೌರ್ಜನ್ಯಕ್ಕೊಳಗಾದವರಿಗೆ ದೈಹಿಕ, ಮಾನಸಿಕವಾಗಿ ಆತ್ಮಸ್ಥೆöÊರ್ಯ ತುಂಬಬೇಕು. ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಯೋಜನೆಗೆ ಮೀಸಲಾದ ಅನುದಾನ ಆಯಾ ಸಾಲಿನಲ್ಲಿಯೇ ವೆಚ್ಚವಾಗಬೇಕು ಹಾಗೂ ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯ ತಲುಪಬೇಕು ಎಂದರು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಿದಾನಂದಪ್ಪ ಅವರು ಮಾತನಾಡಿ, ಜನವರಿ-2025 ರಿಂದ ಆಗಸ್ಟ್ 31 ರ ವರೆಗೆ 18 ಪ್ರಕರಣಗಳಲ್ಲಿ 26 ಸಂತ್ರಸ್ಥರಿಗೆ ಒಟ್ಟು ರೂ.22,75,000 ಪರಿಹಾರ ಮಂಜೂರು ಮಾಡಲಾಗಿದೆ. ಕಳೆದ ಮೂರು ತಿಂಗಳಲ್ಲಿ ಯಾವುದೇ ವಿಧದ ‘ಬಿ’ ರಿಪೋರ್ಟ್ ಪ್ರಕರಣ ದಾಖಲಾಗಿಲ್ಲ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ, ಜಿಲ್ಲಾ ಸರ್ಕಾರಿ ಅಭಿಯೋಜಕರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
-------------
ಬಳ್ಳಾರಿ: ಕೃಷಿಕ ಸಮಾಜದ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಸಚಿವ ಎನ್.ಚಲುವರಾಯ ಸ್ವಾಮಿ ಅಭಿಮತ | ಕೃಷಿಕ ಸಮಾಜ ರೈತರ ಸಮಸ್ಯೆ ಬಿಂಬಿಸುವ ಸಂಪರ್ಕ ಕೊಂಡಿ
ಬಳ್ಳಾರಿ,ನ.08(ಕರ್ನಾಟಕ ವಾರ್ತೆ):
ರೈತರ ಸಮಸ್ಯೆಗಳನ್ನು ಕೃಷಿ ಇಲಾಖೆಯ ಮೂಲಕ ಸರ್ಕಾರದ ಗಮನ ಸೆಳೆಯುವ ಸಂಪರ್ಕ ಕೊಂಡಿಯಾಗಿ ಕೃಷಿಕ ಸಮಾಜವು ಕೆಲಸ ನಿರ್ವಹಿಸುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಹೇಳಿದರು.
ಜಿಲ್ಲಾ ಕೃಷಿ ಇಲಾಖೆ ಮತ್ತು ಕೃಷಿಕ ಸಮಾಜ ಇವರ ಸಹಯೋಗದಲ್ಲಿ ನಗರದ ಹಳೇ ತಾಲ್ಲೂಕು ಕಚೇರಿ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಬಳ್ಳಾರಿ ಘಟಕ ಕೃಷಿಕ ಸಮಾಜದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಸ್ವತಂತ್ರ ಪೂರ್ವದಲ್ಲೇ ಪ್ರಾರಂಭವಾದ ಕೃಷಿಕ ಸಮಾಜವು ತನ್ನದೇ ಆದ ಇತಿಹಾಸ ಹೊಂದಿದೆ. ರೈತರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅವರಿಗಾಗಿ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿಯೂ ಕೃಷಿಕ ಸಮಾಜ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.
ಎಲ್ಲಾ ಇಲಾಖೆಗಳಿಗಿಂತಲೂ ಕೃಷಿ ಇಲಾಖೆಯು ವಿಶಿಷ್ಟವಾಗಿದೆ. ಲೆಸ್ಲಿ ಚಾರ್ಲ್ಸ್ ಕೋಲ್ಮನ್ ಎಂಬುವವರು ಸ್ವತಂತ್ರ ಪೂರ್ವದಲ್ಲಿ ರಾಜ್ಯದ ಕೃಷಿ ಇಲಾಖೆಯ ಮೊದಲ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಕೃಷಿಕ ಸಮಾಜ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯದ 36 ತಾಲ್ಲೂಕುಗಳಲ್ಲಿ ಕೃಷಿಕ ಸಮಾಜದ ಕಟ್ಟಡ ನಿರ್ಮಾಣಕ್ಕೆ ನಿವೇಶನವಿದ್ದು, 32 ತಾಲ್ಲೂಕುಗಳಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ತಾಲ್ಲೂಕು ಮಟ್ಟದಲ್ಲಿ ಕಟ್ಟಡ ನಿರ್ಮಾಣಕ್ಕೆ 27 ಲಕ್ಷ ಮತ್ತು ಜಿಲ್ಲಾ ಮಟ್ಟದಲ್ಲಿ 50 ಲಕ್ಷ ರೂ. ನೀಡಲು ನಿರ್ಧರಿಸಲಾಗಿದೆ ಎಂದರು.
ಕೃಷಿಕ ಸಮಾಜವು ರಾಷ್ಟçಮಟ್ಟದಲ್ಲಿ ಎಲ್ಲಾ ರಾಜ್ಯದಲ್ಲಿಯೂ ಒಳಗೊಂಡಿದ್ದು, ನಮ್ಮ ರಾಜ್ಯದಲ್ಲಿ ಸರ್ಕಾರದೊಂದಿಗೆ ಸದಾ ಸಂಪರ್ಕದಲ್ಲಿದ್ದುಕೊAಡು ಅತ್ಯಂತ ಚುರುಕಾಗಿ, ಉತ್ಸಾಹಿಯಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ತಿಳಿಸಿದ ಸಚಿವರು, ಮಾಜಿ ಲೋಕಸಭಾ ಸದಸ್ಯರಾದ ಬಸವರಾಜೇಶ್ವರಿ ಅವರು, ಕಟ್ಟಡ ನಿರ್ಮಾಣಕ್ಕಾಗಿ ಸಾಕಷ್ಟು ಶ್ರಮಿಸಿದ್ದಾರೆ. ಹಾಗಾಗಿ ರಾಜ್ಯ ಮಟ್ಟದ ಕೃಷಿಕ ಸಮಾಜಕ್ಕೆ ಅವರ ಹೆಸರಿನ್ನಿಡಲಾಗಿದೆ ಎಂದು ತಿಳಿಸಿದರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದಲ್ಲಿ ರೈತರನ್ನು ತಾರತಮ್ಯ ಮಾಡುತ್ತಿಲ್ಲ; ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರವು ರೈತರ ಪರ ಕಾಳಜಿ ಹೊಂದಿದೆ. ಕೊಟ್ಟ ಮಾತಿನಂತೆ ಎಲ್ಲಾ ಸಚಿವರು, ಶಾಸಕರ ಸಹಕಾರದಲ್ಲಿ ಶೀಘ್ರದಲ್ಲಿ ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲಾಗುವುದು. ಇದರಿಂದ ಹೊಸಪೇಟೆ, ಬಳ್ಳಾರಿ, ಕಂಪ್ಲಿ ಮತ್ತು ಹಗರಿ ಬೊಮ್ಮನಹಳ್ಳಿ ಭಾಗದ ರೈತರಿಗೆ ಅನುಕೂಲವಾಗಲಿದೆ. ರೈತರನ್ನು ಸಮಾನ ದೃಷ್ಠಿಯಿಂದ ಕಾಣುವ ಏಕೈಕ ಸರ್ಕಾರ ನಮ್ಮದಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಳ್ಳಾರಿ ಲೋಕಸಭಾ ಸಂಸದ ಈ.ತುಕಾರಾಂ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಅಖಂಡ ಬಳ್ಳಾರಿ ಜಿಲ್ಲೆಯ 08 ತಾಲ್ಲೂಕುಗಳಲ್ಲಿ ಸಂಸದರ ಅನುದಾನದಲ್ಲಿ ಪ್ರತಿ ತಾಲ್ಲೂಕಿಗೆ 02 ಲಕ್ಷ ರೂ. ಮೌಲ್ಯದ ಅತ್ಯಾಧುನಿಕ ಕಂಪ್ಯೂಟರ್, ಪ್ರೊಜೆಕ್ಟರ್ ಗಳನ್ನು ರೈತ ಸಂಪರ್ಕ ಕೇಂದ್ರಗಳಿಗೆ ನೀಡಲಾಗಿದೆ. ಇದರಿಂದ ವೈಜ್ಞಾನಿಕ ಬೆಳೆ ಪದ್ಧತಿ, ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳುವುದರ ಕುರಿತು ರೈತರಿಗೆ ತರಬೇತಿ ನೀಡಲು ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ನಮ್ಮಲ್ಲಿ ಲಭ್ಯವಿರುವ ಅನುದಾನವನ್ನು ಬಳಸಿಕೊಂಡು ರೈತರನ್ನು ಮುನ್ನೆಲೆಗೆ ತರಲು ಹಾಗೂ ನಾಡನ್ನು ಕಟ್ಟುವ ಕೆಲಸ ಮಾಡೋಣ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದಾಗಿ ಕಂಪ್ಲಿ, ಕುರುಗೋಡು, ಸಿರುಗುಪ್ಪ ಭಾಗಗಳಲ್ಲಿ ಭತ್ತದ ಬೆಳೆಯು ಹಾನಿಯಾಗಿದ್ದು, ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡುವಂತೆ ಮತ್ತು ಜಿಲ್ಲೆಯಲ್ಲಿ ಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಸಚಿವರಿಗೆ ಮನವಿ ಮಾಡಿದರು.
ಬಳ್ಳಾರಿ ಜಿಲ್ಲೆಯು 2,81,522 ಎಕರೆ ಕೃಷಿ ಭೂಮಿ ಹೊಂದಿದ್ದು, 1,05,517 ಎಕರೆ ಮಳೆಯಾಧಾರಿತ ಪ್ರದೇಶ, 1,76,005 ಎಕರೆ ನೀರಾವರಿ ಪ್ರದೇಶವಿದ್ದು, ಈ ಬಾರಿಯಂತೆ ಮುಂದಿನ ವರ್ಷದಲ್ಲಿಯೂ ಸಹ ಉತ್ತಮ ಮಳೆ, ಬೆಳೆಯಾಗಿ ನಾಡು, ನಮ್ಮ ಜಿಲ್ಲೆ ಸಮೃದ್ಧಿಯಾಗಬೇಕು ಎಂದು ಆಶಿಸಿದರು.
ಜಂಟಿ ಕೃಷಿ ನಿದೇರ್ಶಕ ಸೋಮಸುಂದರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಕಂಡುಬರುವ ಕೃಷಿಗೆ ಸಂಬAಧಿಸಿದAತೆ ರೈತರ ಸಮಸ್ಯೆಗಳನ್ನು ರಾಜ್ಯ ಮಟ್ಟದ ಕಾರ್ಯಕಾರಿಣಿ ಸಮಿತಿಯ ಸಭೆಯಲ್ಲಿ ಚರ್ಚಿಸಿ ಸರ್ಕಾರದ ಗಮನ ಸೆಳೆಯುವ ಕಾರ್ಯವು ಕೃಷಿಕ ಸಮಾಜದ್ದಾಗಿದೆ ಎಂದು ಹೇಳಿದರು.
ಜಿಲ್ಲಾ ಕೃಷಿಕ ಸಮಾಜದಲ್ಲಿ 10 ಜನ ನಿರ್ದೇಶಕ ಮಂಡಳಿಯ ಸದಸ್ಯರಿದ್ದು, ಎಲ್ಲರ ಪ್ರಯತ್ನದಿಂದ 1984 ರಲ್ಲಿ ಜಿಲ್ಲಾಧಿಕಾರಿಯವರಿಂದ 10,368 ಚದರ ಅಡಿ ನಿವೇಶನ ಪಡೆದುಕೊಂಡು 2020 ರಲ್ಲಿ ಕಟ್ಟಡ ನಿರ್ಮಾಣಕ್ಕೆ ಸಭೆಯಲ್ಲಿ ತೀರ್ಮಾನಿಸಿ, 2022ರಲ್ಲಿ ಕೃಷಿಕ ಸಮಾಜದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಬಳಿಕ 2025 ರಲ್ಲಿ ರೂ.1 ಕೋಟಿ ರೂ. ಅಧಿಕ ವೆಚ್ಚದ ಕಟ್ಟಡ ನಿರ್ಮಾಣಗೊಂಡು ಉದ್ಘಾಟನೆಗೊಂಡಿದೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಡಾ.ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಬಳ್ಳಾರಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಗಾದೆಪ್ಪ, ಉಪಾಧ್ಯಕ್ಷರಾದ ಎಸ್.ಕೆ ವಿಶಾಲಾಕ್ಷಿ ಕುಮಾರಸ್ವಾಮಿ, ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಸುರೇಶ್ ನಂದಿ.ಪಿ., ಉಪ ಕೃಷಿ ನಿರ್ದೇಶಕ ಮಂಜುನಾಥ್ ಎಸ್.ಎನ್ ಸೇರಿದಂತೆ ಪಾಲಿಕೆ ಸದಸ್ಯರು, ಕೃಷಿ ಸಮಾಜದ ವಿವಿಧ ತಾಲ್ಲೂಕುಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಎಲ್ಲಾ ರೈತ ಮತ್ತು ಸಂಘ-ಸAಸ್ಥೆಗಳು, ಪ್ರಗತಿಪರ ರೈತರು ಮತ್ತು ರೈತ ಮಹಿಳೆಯರು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮ ಆರಂಭಕ್ಕೂ ಮುನ್ನ ಕೃಷಿ ಸಚಿವರು, ಆಧುನಿಕ ಕೃಷಿ ಯಂತ್ರೋಪಕರಣಗಳು, ಸಾವಯವ ರಸ-ಗೊಬ್ಬರ, ಕೃಷಿ ಪರಿಕರಗಳು, ಪಿಎಂಎಫ್ಎAಇ ಯೋಜನೆಯಡಿ ಅನುಷ್ಠಾನಗೊಂಡ ಆಹಾರಾ ಸಂಸ್ಕರಣಾ ಘಟಕಗಳ ಆಹಾರ ಉತ್ಪನ್ನ ಮಳಿಗೆ ಹಾಗೂ ವಿವಿಧ ಯೋಜನೆಗಳ ಮಾಹಿತಿಗಳನ್ನೊಳಗೊಂಡ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಕೃಷಿ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಕಾರ್ಯಾಗಾರ ಹಾಗೂ ವಿನೂತನ ತಾಂತ್ರಿಕತೆಗಳ ಕುರಿತು ವಿಜ್ಞಾನಿಗಳು, ಕೃಷಿ ಅಧಿಕಾರಿಗಳು ರೈತರೊಂದಿಗೆ ಚರ್ಚೆ-ಸಂವಾದ ಚಲುವರಾಯಸ್ವಾಮಿ
----------------
ಶುಕ್ರವಾರ, ನವೆಂಬರ್ 7, 2025
ಮ್ಯಾನ್ಯುವಲ್ ಸ್ಕ್ಯಾವೆಂಜರ್ ಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆ ನಡೆಸಿ ಡಿಸಿ ನಾಗೇಂದ್ರ ಪ್ರಸಾದ್.ಕೆ ಸೂಚನೆ | ಸಫಾಯಿ ಕರ್ಮಚಾರಿಗಳಿಗೆ ಕಾನೂನಾತ್ಮಕವಾಗಿ ಎಲ್ಲ ಸೌಲಭ್ಯ ಸಿಗಬೇಕು
ಬಳ್ಳಾರಿ,ನ.07(ಕರ್ನಾಟಕ ವಾರ್ತೆ):
ಸಫಾಯಿ ಕರ್ಮಚಾರಿಗಳಾಗಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೆ ಸರ್ಕಾರದಿಂದ ಕಾನೂನಾತ್ಮಕವಾಗಿ ಸಿಗಬೇಕಾದ ಎಲ್ಲ ಸೌಕರ್ಯ, ಸೌಲಭ್ಯಗಳನ್ನು ಪೂರೈಸುವುದು ಆಯಾ ನಗರ ಸ್ಥಳೀಯ-ಸಂಸ್ಥೆಗಳ ಮುಖ್ಯಾಧಿಕಾರಿಗಳ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.
ಶುಕ್ರವಾರ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮ್ಯಾನ್ಯುಯಲ್ ಸ್ಕಾö್ಯವೆಂಜರ್ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮದಡಿ ರಚಿತವಾದ ಮ್ಯಾನ್ಯುಯಲ್ ಸ್ಕಾö್ಯವೆಂಜರ್ಗಳ/ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ವಸತಿ ಮತ್ತು ಪುನರ್ವಸತಿ ಹಾಗೂ ಪೌರ ಕಾರ್ಮಿಕರಿಗೆ ವಿವಿಧ ಸೌಲಭ್ಯ ಒದಗಿಸಲು ಕ್ರಮವಹಿಸಬೇಕು. ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ನಿಗದಿಪಡಿಸಿದ ವೇತನ ಪಾವತಿಸುವುದು ಹಾಗೂ ವಿವಿಧ ಸೌಲಭ್ಯಗಳನ್ನು ದೊರಕಿಸಿಕೊಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಮ್ಯಾನ್ಯುವೆಲ್ ಸ್ಯಾವೆಂಜರ್ಸ್ ಕುಟುಂಬಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತಹ ಪ್ರವೇಶ ಶುಲ್ಕ, ವಿದ್ಯಾರ್ಥಿ ವೇತನ, ಲ್ಯಾಪ್ ಟಾಪ್ ವಿತರಣೆ ಹಾಗೂ ಇತರೆ ಸೌಲಭ್ಯ ಒದಗಿಸಲು ಮುತುವರ್ಜಿ ವಹಿಸಬೇಕು ಎಂದರು.
*ಸುರಕ್ಷಾ ಪರಿಕರ ಧರಿಸಿ ಕಾರ್ಯ ನಿರ್ವಹಿಸಲು ಅರಿವು ಮೂಡಿಸಿ:*
ಜಿಲ್ಲಾ ವ್ಯಾಪ್ತಿಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗು ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಸಿಬ್ಬಂದಿ, ಕಾರ್ಮಿಕರು, ಪೌರಕಾರ್ಮಿಕರು ತಪ್ಪದೇ ಸುರಕ್ಷಾ ಪರಿಕರಗಳನ್ನು ಧರಿಸಿ ಕಾರ್ಯನಿರ್ವಹಿಸಲು ಸೂಚಿಸಬೇಕು. ಸುರಕ್ಷತೆಗಾಗಿ ಮತ್ತು ಆರೋಗ್ಯ ಹಿತದೃಷ್ಟಿಯಿಂದ ತಪ್ಪದೇ ಸುರಕ್ಷತಾ ಪರಿಕರಗಳನ್ನು ಧರಿಸಲು ತಿಳಿಸಬೇಕು. ಈ ಕುರಿತು ಪರಿಸರ ಅಭಿಯಂತರರು ಮೇಲ್ವಿಚಾರಣೆ ನಡೆಸಬೇಕು ಎಂದು ಸೂಚಿಸಿದರು.
ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸದಸ್ಯರಾದ ಕಂದಕೂರ ರಾಮುಡು ಅವರು ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ರಹಿತ ಪೌರಕಾರ್ಮಿಕರಿಗೆ ಕಳೆದ 10 ವರ್ಷಗಳಿಂದ ಯಾವುದೇ ನಿವೇಶನ, ವಸತಿ ಸೌಲಭ್ಯ ನೀಡಿಲ್ಲ. ಆದರೆ ಅದೇ ಸ್ಥಾನದಲ್ಲಿರುವ ಅಧಿಕಾರಿಗಳು ಮಾತ್ರ ಮುಂಬಡ್ತಿ ಹೊಂದುತ್ತಿದ್ದಾರೆಯೇ ವಿನಃ ಪೌರಕಾರ್ಮಿಕರಿಗೆ ಮಾತ್ರ ಸೌಲಭ್ಯ ನೀಡಲಾಗುತ್ತಿಲ್ಲ ಎಂದು ಸಭೆಗೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರತಿಕ್ರಿಯಿಸಿ, ನಗರದಲ್ಲಿ ಪಾಲಿಕೆ ಒಡೆತನದ ಎಲ್ಲಾ ಜಾಗಗಳನ್ನು ಒತ್ತುವರಿ ಮಾಡಲಾಗುತ್ತಿದೆ. ಆದರೂ ಅವರಿಗೆ ನಿವೇಶನ ಸೌಲಭ್ಯ ಒದಗಿಸಲಾಗುತ್ತಿಲ್ಲ. ಈ ಕೂಡಲೇ ನಗರದಲ್ಲಿ ಖಾಲಿ ಜಾಗವಿರುವ ಸ್ಥಳಗಳ ಮಾಹಿತಿ ನೀಡಬೇಕು. ಜಿಲ್ಲೆಯ ವಿವಿಧ ನಗರ ಸ್ಥಳೀಯ-ಸಂಸ್ಥೆಗಳಲ್ಲಿನ ಪೌರಕಾರ್ಮಿಕರಿಗೆ ಸೂರು ಕಲ್ಪಿಸುವ ಆದ್ಯತೆ ಅಧಿಕಾರಿಗಳದ್ದಾಗಬೇಕು ಎಂದು ತಿಳಿಸಿದರು.
ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ 04 ಪೌರಕಾರ್ಮಿಕರಿಂದ ಕೆಲಸ ಮಾಡಿಸಿಕೊಂಡು ಕಳೆದ 10 ತಿಂಗಳುಗಳಿAದ ವೇತನ ಪಾವತಿ ಮಾಡಿಲ್ಲ, ಬೆಳಗಿನ ಉಪಹಾರ ಸಹ ನೀಡಿಲ್ಲ ಮತ್ತು ಅವರಿಂದ ಹಣ ವಸೂಲಿ ಮಾಡಲಾಗಿದೆ ಎಂದು ಮನವಿ ಪತ್ರ ಸಲ್ಲಿಸಿದ್ದಾರೆ ಎಂದು ಕಂದಕೂರು ರಾಮುಡು ಅವರು ಸಭೆಯ ಗಮನಕ್ಕೆ ತಂದರು.
ಜಿಲ್ಲಾಧಿಕಾರಿಯವರು ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದ ಅವರು, ಪೌರಕಾರ್ಮಿಕರು, ಸಫಾಯಿ ಕರ್ಮಚಾರಿಗಳು, ಲೋಡರ್ಸ್, ಕ್ಲೀನರ್ಸ್, ವಾಹನಚಾಲಕರಿಗೆ ನಿಗದಿತ ವೇಳೆಯೊಳಗೆ ವೇತನ ಪಾವತಿಸಿ, ವೇತನ ಸ್ಲಿಪ್ ನೀಡಬೇಕು. ಪಿಎಫ್ ಮತ್ತು ಇಎಸ್ಐ ವಂತಿಕೆ ಸರಿಯಾಗಿ ಪಾವತಿಯಾಗುತ್ತಿರುವ ಕುರಿತು ಖಾತ್ರಿಪಡಿಸಿಕೊಳ್ಳಬೇಕು. ಮಾಸ್ಟರ್ ಆರೋಗ್ಯ ತಪಾಸಣೆ ಕಾಲ ಕಾಲಕ್ಕೆ ಮಾಡಿಸಬೇಕು ಎಂದು ತಿಳಿಸಿದರು.
ಮುಂದಿನ ಸಭೆಯಲ್ಲಿ ಸಮಿತಿಯ ಸದಸ್ಯರಾದ ವಿವಿಧ ಇಲಾಖೆಗಳ ಮುಖ್ಯಸ್ಥರೇ ಸಭೆಗೆ ಹಾಜರಾಗಬೇಕು. ಇಲ್ಲದಿದ್ದಲ್ಲಿ ಅಂತವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಖಡಕ್ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್, ಸಮಿತಿ ಸದಸ್ಯರಾದ ಅರುಣ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ನಗರ ಸ್ಥಳೀಯ-ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.
---------------
ವಿವಿಧೆಡೆ ದಾಳಿ: 06 ಬಾಲಕಾರ್ಮಿಕ, ಕಿಶೋರ ಕಾರ್ಮಿಕ ಮಕ್ಕಳ ರಕ್ಷಣೆ
ಬಳ್ಳಾರಿ,ನ.07(ಕರ್ನಾಟಕ ವಾರ್ತೆ):
ಸಿರುಗುಪ್ಪ ಹಾಗೂ ಕಂಪ್ಲಿ ಪಟ್ಟಣದ ವಿವಿಧ ಸ್ಥಳಗಳಲ್ಲಿನ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಕಟ್ಟಡ ನಿರ್ಮಾಣ ಕೆಲಸ, ಬೇಕರಿ ಇತ್ಯಾದಿ ಉದ್ದಿಮೆಗಳ ಮೇಲೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ ಫೋರ್ಸ್ ಸಮಿತಿಯು ದಾಳಿ ನಡೆಸಿ 06 ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ.
ಮಕ್ಕಳ ಹೇಳಿಕೆಗಳನ್ನು ಸ್ಥಳದಲ್ಲಿ ಪಡೆದುಕೊಂಡು ಎಲ್ಲಾ ಮಕ್ಕಳನ್ನು ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ. ಎಲ್ಲಾ ಉದ್ದಿಮೆಗಳ ಮಾಲೀಕರಿಗೆ ಕರಪತ್ರ ಹಾಗೂ ಪೋಸ್ಟರ್ಗಳನ್ನು ನೀಡಿ ಜಾಗೃತಿ ಮೂಡಿಸಲಾಯಿತು.
ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರಾದ ತಹಶೀಲ್ದಾರರ ನೇತೃತ್ವದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ಪೋರ್ಸ್ ಸಮಿತಿ ಸಭೆ ನಡೆಸಿ ಈ ದಾಳಿ ಕೈಗೊಳ್ಳಲಾಗಿದೆ.
ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಕಾರ್ಮಿಕ ನಿರೀಕ್ಷಕರಾದ ತಿರುಮಲೇಶ್, ಶಿವಶಂಕರ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್, ಗ್ರೇಡ್-2 ತಹಶೀಲ್ದಾರ ಬಸವರಾಜ್, ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಬಸವರಾಜ್, ಪೋಲಿಸ್ ಸಬ್ ಇನ್ಸ್ಪೆಕ್ಟ್ರ್ ಅವಿನಾಶ್ ಕಾಬ್ಳೆ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲನ ಗೌಡ, ಮಕ್ಕಳ ಸಹಾಯವಾಣಿ ಸಿಬ್ಬಂದಿಯಾದ ಚಂದ್ರಕಲಾ, ಕಿರಣ್ ಕುಮಾರ್, ರೀಚ್ ಸಂಸ್ಥೆಯ ಸಂಯೋಜಿಕಿಯಾದ ಲಕ್ಷಿö್ಮÃದೇವಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
--------------
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ: ಅರಿವು (ನವೀಕರಣ) ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಅಹ್ವಾನ
ಬಳ್ಳಾರಿ,ನ.07(ಕರ್ನಾಟಕ ವಾರ್ತೆ):
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಅರಿವು (ನವೀಕರಣ) ಶೈಕ್ಷಣಿಕ ಸಾಲ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಮತೀಯ ಅಲ್ಪಸಂಖ್ಯಾತ ಮುಸ್ಲಿಂ, ಜೈನ್, ಸಿಖ್ಖ್, ಪಾರ್ಸಿ ಸಮುದಾಯದಲ್ಲಿ ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ, ನೀಟ್, ಡಿ-ಸಿಇಟಿ, ಪಿಜಿ-ಸಿಇಟಿ ನಲ್ಲಿ ಆಯ್ಕೆಯಾದ ಪದವಿ, ಸ್ನಾತಕೋತ್ತರ ಕೋರ್ಸ್ಗಳಾದ ವೈದ್ಯಕೀಯ (ಎಂಬಿಬಿಎಸ್, ಎಂಡಿ, ಎಂಎಸ್) ಹಾಗೂ ದಂತ ವೈದ್ಯಕೀಯ (ಬಿಡಿಎಸ್, ಎಂಡಿಎಸ್) ಹಾಗೂ ಬಿಇ, ಬಿಟೆಕ್, ಬ್ಯಾಚುಲರ್ ಆಫ್ ಆರ್ಕಿಟೇಕ್ಚರ್, ಎಂ.ಆರ್ಕಿಟೇಕ್ಚರ್ ಮತ್ತು ಆಯುಷ್ (ಬಿ.ಆಯುಷ್, ಎಂ.ಆಯುಷ್), ತೋಟಗಾರಿಕೆ, ಕೃಷಿ ಎಂಜಿನಿಯರಿAಗ್, ಡೈರಿ ತಂತ್ರಜ್ಞಾನ, ಅರಣ್ಯ, ಪಶುವೈದ್ಯಕೀಯ ಮತ್ತು ಪ್ರಾಣಿ ತಂತ್ರಜ್ಞಾನ, ಮೀನುಗಾರಿಕೆ, ರೇಷ್ಮೆ ಕೃಷಿ, ಗೃಹ/ಸಮುದಾಯ ವಿಜ್ಞಾನ, ಎಂಬಿಎ, ಎಂಸಿಎ, ಎಲ್ಎಲ್ಬಿ, ಬಿಎಸ್ಸಿ, ಆಹಾರ ಪೋಷಣೆ ಮತ್ತು ಆಹಾರ ಪದ್ಧತಿ, ಬಿ.ಫಾರ್ಮಾ, ಎಂ.ಫಾರ್ಮಾ, ಫಾರ್ಮಾ ಡಿ ಮತ್ತು ಡಿ.ಫಾರ್ಮಾ.ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು (ನವೀಕರಣ) ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸುವಾಗ ನಿಗಮದಿಂದ ಈ ಹಿಂದಿನ ವರ್ಷದಲ್ಲಿ ಪಡೆದಿರುವ ಒಟ್ಟು ಸಾಲದ ಬಾಕಿಯ ಮೊತ್ತದ ಶೇ.12 ರಷ್ಟು ಮೊತ್ತವನ್ನು ಆನ್ಲೈನ್ ಮೂಲಕ ಪಾವತಿಸಬಹುದು ಅಥವಾ ಜಿಲ್ಲಾ ಕಚೇರಿಯಲ್ಲಿ ಪಾವತಿಸಬೇಕು.
ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು, ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ರಿನ್ಯೂವಲ್ ಮೊತ್ತವನ್ನು ಪಾವತಿಸುವುದು ಆಗತ್ಯವಿರುವುದಿಲ್ಲ. ವಿಧ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು.
ಅರ್ಜಿ ಸಲ್ಲಿಸಲು ಆನ್ಲೈನ್ ವೆಬ್ಸೈಟ್ https://kmdconline.karnataka.gov.in/ ಗೆ ಭೇಟಿ ನೀಡಿ ಸಲ್ಲಿಸಬಹುದು. ಡಿಸೆಂಬರ್ 03 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಆಜಾದ್ ಭವನದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.08392-294370 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಕ್ರಿಶ್ಚಿಯನ್ ಸಮುದಾಯದ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಬಳ್ಳಾರಿ,ನ.07(ಕರ್ನಾಟಕ ವಾರ್ತೆ):
ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ದಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಕ್ರಿಶ್ಚಿಯನ್ ಸಮುದಾಯದಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
*ವಿವಿಧ ಯೋಜನೆಗಳು:*
ಶ್ರಮಶಕ್ತಿ ಸಾಲದ ಯೋಜನೆ: ಈ ಯೋಜನೆಯಡಿ ರೂ.50 ಸಾವಿರಗಳೊಳಗೆ ಶೇ.4 ರಷ್ಟು ಬಡ್ಡಿ ದರದಲ್ಲಿ ಶೇ.50 ಸಾಲ ಹಾಗೂ ಶೇ.50 ಸಹಾಯಧನ ನೀಡಲಾಗುವುದು.
ಸ್ವಾವಲಂಬಿ ಸಾರಥಿ ಯೋಜನೆ: ಈ ಯೋಜನೆಯಡಿ ಟ್ಯಾಕ್ಸಿ, ಗೂಡ್ಸ್ ವಾಹನ, ಪ್ಯಾಸೆಂಜರ್ ಆಟೋರಿಕ್ಷಾ ಖರೀದಿಸಲು ಫಲಾನುಭವಿಗಳಿಗೆ ಬ್ಯಾಂಕ್, ಫೈನಾನ್ಸ್, ಸೊಸೈಟಿಯಿಂದ ಸಾಲ ಮಂಜೂರಾತಿಯಾಗಿದ್ದಲ್ಲಿ ನಿಗಮದಿಂದ ವಾಹನದ ಮೌಲ್ಯದ ಶೇ.50 ರಷ್ಟು ಸಹಾಯಧನ, ಗರಿಷ್ಠ ರೂ.03 ಲಕ್ಷ ನೀಡಲಾಗುವುದು.
ವಿದೇಶ ವ್ಯಾಸಂಗಕ್ಕೆ ಸಾಲ ಯೋಜನೆ: ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ವಿಧ್ಯಾಭ್ಯಾಸ ಪಡೆಯಲು ರೂ.20 ಲಕ್ಷಗಳವರೆಗೆ ಸಾಲವನ್ನು ನಿಗಮಕ್ಕೆ ಆಸ್ತಿಯ (ಕಟ್ಟಡ/ಜಮೀನು) ಅಡಮಾನದ ಮೇಲೆ ಮಾತ್ರ ಒದಗಿಸಲಾಗುವುದು.
ವೃತ್ತಿ ಪ್ರೋತ್ಸಾಹ ಯೋಜನೆ: ಅಲ್ಪಸಂಖ್ಯಾತರ ಸಮುದಾಯದ ಜನರಿಗೆ, ಹಣ್ಣು, ಹಂಪಲು, ಕೋಳಿ ಮತ್ತು ಮೀನು ಮಾರಾಟ, ಏಳನೀರು, ಕಬ್ಬಿನ ಹಾಲು, ತಂಪು ಪಾನೀಯ ಮಾರಾಟ, ಬೇಕರಿ, ಲ್ಯಾಂಡರಿ, ಡ್ರೆöÊ-ಕ್ಲೀನಿಂಗ್, ಆಟಿಕೆ ಗೊಂಬೆ ತಯಾರಿಕೆ ಇತ್ಯಾದಿ ಚಟುವಟಿಕೆಗಳನ್ನು ಪ್ರಾರಂಭಿಸಲು ಅಥವಾ ಅಭಿವೃದ್ಧಿ ಪಡಿಸಲು ನಿಗಮದಿಂದ ಶೇ.50ರಷ್ಟು ಸಹಾಯಧನದೊಂದಿಗೆ ರೂ.1 ಲಕ್ಷ ಸಾಲ ನೀಡಲಾಗುವುದು.
ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ: ಅಲ್ಪಸಂಖ್ಯಾತರ ಸಮುದಾಯದ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಸಿ ಅವರನ್ನು ಆರ್ಥಿಕ ಸ್ವಾವಲಂಭಿಯನ್ನಾಗಿ ಮಾಡುವ ಸಲುವಾಗಿ ರಾಷ್ಟಿçÃಕೃತ, ಶೆಡ್ಯೂಲ್ ಬ್ಯಾಂಕ್, ಆರ್ಬಿಐ ನಿಂದ ಮಾನ್ಯತೆ ಪಡೆದ ವಿವಿಧ ಆರ್ಥಿಕ ಸಂಸ್ಥೆಗಳಿAದ ಪಡೆಯುವ ಸಾಲಕ್ಕೆ ಘಟಕ ವೆಚ್ಚದ ಶೇ.50 ಅಥವಾ ಗರಿಷ್ಠ ರೂ.2 ಲಕ್ಷ ಸಹಾಯಧನವನ್ನು ನಿಗಮದಿಂದ ಒದಗಿಸಲಾಗುವುದು. ಸಹಾಯಧನವು ಬ್ಯಾಕ್ ಎಂಡ್ ಸಬ್ಸಿಡಿಯಾಗಿದ್ದು, ಸ್ವ-ಸಹಾಯ ಸಂಘಗಳ ಆರ್ಥಿಕ ಬ್ಯಾಂಕ್ ಗಳಿಂದ ಪಡೆದ ಸಾಲದ ಮರುಪಾವತಿಗೆ ಹೊಂದಾಣಿಕೆ ಮಾಡಲಾಗುವುದು.
ಅರಿವು ಯೋಜನೆ: ಈ ಯೋಜನೆಯಡಿ ವೃತ್ತಿಪರ ಕೋರ್ಸ್ ಮಾಡಬಯಸುವ ಅಲ್ಪಸಂಖ್ಯಾತ ವಿಧ್ಯಾರ್ಥಿಗಳಿಗೆ ವ್ಯಾಸಂಗ ಪೂರ್ಣಗೊಳಿಸುವವರೆಗೆ ಪ್ರತಿ ವರ್ಷ ರೂ.50 ಸಾವಿರದಿಂದ ರೂ.5 ಲಕ್ಷದವರೆಗೆ ಸಾಲ ವ್ಯಾಸಂಗ ಪೂರ್ಣಗೊಳಿಸಿದ 6 ತಿಂಗಳ ನಂತರ ಶೇ.2ರ ಸೇವಾ ಶುಲ್ಕದೊಂದಿಗೆ ಸಾಲ ಮರುಪಾವತಿ ಮಾಡಲು ಅವಕಾಶ.
ವ್ಯಾಪಾರ/ಉದ್ದಿಮೆ ನೇರಸಾಲ ಯೋಜನೆ: ಅಲ್ಪಸಂಖ್ಯಾತ ವರ್ಗದ ಜನರಿಗೆ ವ್ಯಾಪಾರ, ಉದ್ದಿಮೆ ಪ್ರಾರಂಭಿಸಲು ಅಥವಾ ಅಭಿವೃದ್ಧಿಪಡಿಸಿಕೊಳ್ಳುವ ಸಲುವಾಗಿ ಸಾಲ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ವ್ಯಾಪಾರ, ಆರ್ಥಿಕ, ಸೇವಾಕ್ಷೇತ್ರ, ಕೃಷಿ ಆಧಾರಿತ ಚಟುವಟಿಕೆ ಕೈಗೊಳ್ಳಲು ರೂ.5 ಲಕ್ಷದಿಂದ ರೂ.20 ಲಕ್ಷಗಳವರೆಗೆ ಸಾಲ ಸೌಲಭ್ಯ ನೀಡಲಾಗುವುದು.
ಗಂಗಾಕಲ್ಯಾಣ ಯೋಜನೆ: ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಹಾಗೂ ಅತೀ ಸಣ್ಣ ರೈತರಿಗೆ ಕೊಳವೆಬಾವಿ ಕೊರೆಯಲು, ಪಂಪು ಅಳವಡಿಕೆ ಹಾಗೂ ನೀರಾವರಿ ವಿದುದ್ಧೀಕರಣಕ್ಕೆ ಸಂಪೂರ್ಣ ಸಹಾಯಧನ ಒದಗಿಸಲಾಗುವುದು.
ಶ್ರಮಶಕ್ತಿ (ವಿಶೇಷ ಮಹಿಳಾ) ಯೋಜನೆ: ಈ ಯೋಜನೆಯಡಿ ಸಮುದಾಯದ ವಿಧವೆ, ವಿಚ್ಛೇದಿತೆ, ಅವಿವಾಹಿತ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲು ರೂ.50 ಸಾವಿರಗಳೊಳಗೆ ಶೇ.4 ರ ಬಡ್ಡಿ ದರದಲ್ಲಿ ಶೇ.50 ಸಾಲ ಹಾಗೂ ಶೇ.50 ಸಹಾಯಧನ ನೀಡಲಾಗುವುದು.
ತರಬೇತಿ ಯೋಜನೆ: ಸಮುದಾಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವ-ಉದ್ಯೋಗ/ಕಚೇರಿ, ಕಂಪನಿ, ಉದ್ದಿಮೆಗಳಲ್ಲಿ ಉದ್ಯೋಗ ದೊರಕಿಸುವ ಸಲುವಾಗಿ ಭಾರಿ ವಾಹನ ಚಾಲನೆ, ಶಾರ್ಟ್ ಹ್ಯಾಂಡ್, ಸೆಕ್ಯುರಿಟಿ ಸರ್ವಿಸ್, ಬ್ಯೂಟಿ ಪಾರ್ಲರ್ (ಪುರುಷರಿಗೆ ಮತ್ತು ಮಹಿಳೆಯರಿಗೆ) ಕೋರ್ಸ್ಗಳಿಗೆ ನಿಗಮದ ವತಿಯಿಂದ ತರಬೇತಿ ನೀಡಲಾಗುವುದು.
ಚರ್ಚ್ಗಳ ದುರಸ್ಥಿ/ನವೀಕರಣ/ಜೀರ್ಣೋದ್ದಾರ/ಮೇಲ್ದರ್ಜೆಗಾಗಿ ಸಹಾಯಧನ: 10 ವರ್ಷಗಳ ಮೇಲ್ಪಟ್ಟ ಚರ್ಚ್ಗಳ ದುರಸ್ಥಿ, ನವೀಕರಣ, ಜೀರ್ಣೋದ್ಧಾರ, ಮೇಲ್ದರ್ಜೆಗಾಗಿ ಕಾಮಗಾರಿಯ ಅಂದಾಜು ವೆಚ್ಚದ ಶೇ.50 ರಷ್ಟು ಅಥವಾ ಗರಿಷ್ಟ ರೂ.50 ಲಕ್ಷಗಳು ಯಾವುದು ಕಡಿಮೆಯೋ ಅಷ್ಟು ಅನುದಾನವÀನ್ನು ಒದಗಿಸಲು ಅವಕಾಶ ಕಲ್ಪಿಸಲಾಗಿದೆ.
ಸ್ಮಶಾನಗಳಿಗೆ ಆವರಣ ಗೋಡೆ ನಿರ್ಮಾಣ ಮತ್ತು ಸ್ಮಶಾನಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಸಹಾಯಧನ: ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಕ್ರಿಶ್ಚಿಯನ್ ಸಮುದಾಯದ ಸ್ಮಶಾನಗಳಿಗೆ ಆವರಣಗೋಡೆ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳ ಕಲ್ಪನೆಗಾಗಿ ಸಹಾಯಧನವನ್ನು ನೀಡಲಾಗುತ್ತದೆ. ಈ ಯೋಜನೆಯ ಉದ್ದೇಶವು ಸ್ಮಶಾನಗಳಿಗೆ ಸಮರ್ಪಕ ರಕ್ಷಣಾ ವ್ಯವಸ್ಥೆ, ನಿರ್ವಹಣೆ ಮತ್ತು ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಸಮುದಾಯದ ದೀರ್ಘಕಾಲದ ಅಗತ್ಯಗಳನ್ನು ಪೂರೈಸುವುದಾಗಿದೆ.
*ಅರ್ಹತೆ:*
ಅರ್ಜಿದಾರರು ಜಿಲ್ಲೆಯ ಕನಿಷ್ಠ 15 ವರ್ಷದಿಂದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ.6,00,000 ಲಕ್ಷ ಮೀರಬಾರದು. ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷಗಳ ವಯಸ್ಸು ಹೊಂದಿರಬೇಕು. ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಹಾಗೂ ಶೇ.03 ರಷ್ಟು ಅಂಗವಿಕಲರಿಗೆ ಮೀಸಲಾತಿ ಇದೆ.
ಅರ್ಜಿದಾರರು ಆನ್ಲೈನ್ನಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಐಎಫ್ಎಸ್ಸಿ ಕೋಡ್ ಇರುವ ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಯೋಜನಾ ವರದಿ ಹಾಗೂ ಅರ್ಜಿದಾರರ ಹಾಗೂ ಜಾಮೀನುದಾರರ ಭಾವಚಿತ್ರಗಳು ಅಪ್ಲೋಡ್ ಮಾಡಬೇಕು.
ಈ ಹಿಂದೆ ನಿಗಮದ ಸೌಲಭ್ಯವನ್ನು ಪಡೆದವರು ಮತ್ತೆ ಸೌಲಭ್ಯವನ್ನು ಪಡೆಯಲು ಅರ್ಹರಿರುವುದಿಲ್ಲ. ಅರ್ಜಿ ಸಲ್ಲಿಸಲು ಆನ್ಲೈನ್ ವೆಬ್ಸೈಟ್ https://kccdconline.karnataka.gov.in/ ಗೆ ಭೇಟಿ ನೀಡಿ ಸಲ್ಲಿಸಬಹುದು. ನವೆಂಬರ್ 30 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಆಜಾದ್ ಭವನದ ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮ (ನಿ) ದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.08392-294370 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------------
ನ.09 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ನ.07(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11 ಕೆವಿಯ ಅಲ್ಲಿಪುರ ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2ರ ಫೀಡರ್ ಎಫ್-34 ರಲ್ಲಿ ಲಿಂಕ್ ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿAದ ನ.09 ರಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ನಗರದ ರೈಲ್ವೆ ಫಸ್ಟ್ ಗೇಟ್, ಕೊರಚ ಸ್ಟಿçÃಟ್, ಉರ್ದು ಟ್ರೆöÊನಿಂಗ್ ಸ್ಕೂಲ್, ಕಡಪಗೆರೆ, ಟೈಲರ್ ಸ್ಟಿçÃಟ್, ವಡ್ಡೆ ನಾಗಪ್ಪ ಕಾಲೋನಿ, ತಿಲಕ್ ನಗರ್, ವಿನಾಯಕ ನಗರ, ಐಶ್ವರ್ಯ ಕಾಲೋನಿ, ಐಟಿಐ ಕಾಲೇಜ್, ರೇಡಿಯೋ ಪಾರ್ಕ್, ಕೌಲ್ ಬಜಾರ್ ಮೇನ್ ರೋಡ್ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ನ.08 ರಂದು ಬಳ್ಳಾರಿ ಘಟಕದ ಕೃಷಿ ಸಮಾಜದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ
ಬಳ್ಳಾರಿ,ನ.07(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಬೆಂಗಳೂರು, ಕೃಷಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಘಟಕದ ಕೃಷಿ ಸಮಾಜದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ನ.08 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹಳೇ ತಾಲ್ಲೂಕು ಕಚೇರಿ ಆವರಣದಲ್ಲಿ ನಡೆಯಲಿದೆ.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕಟ್ಟಡದ ಉದ್ಘಾಟನೆ ನೆರವೇರಿಸುವರು.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಘನ ಉಪಸ್ಥಿತರಿರುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ಮಂಜುನಾಥ್ ಗೌಡ ಎಸ್.ಆರ್., ಬಳ್ಳಾರಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಗಾದೆಪ್ಪ, ಕೃಷಿ ಸಮಾಜದ ಉಪಾಧ್ಯಕ್ಷ ಎಸ್.ಕೆ ವಿಶಾಲಾಕ್ಷಿ ಕುಮಾರಸ್ವಾಮಿ, ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಸುರೇಶ್ ನಂದಿ.ಪಿ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್ ಸೆಲ್ವಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ತ್ರಿಲೋಕಚಂದ್ರ ಕೆ.ವಿ., ಕೃಷಿ ಇಲಾಖೆಯ ಕೃಷಿ ಆಯುಕ್ತ ಯಲಗೌಡ ಶಿವನಗೌಡ ಪಾಟೀಲ್, ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತ ಉಪೇಂದ್ರ ಪ್ರತಾಪ್ ಸಿಂಗ್, ಕೃಷಿ ಇಲಾಖೆಯ ಕೃಷಿ ನಿರ್ದೇಶಕ ಡಾ.ಜಿ.ಟಿ ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಹಮ್ಮದ್ ಫರ್ವೇಜ್ ಬಂಟನಾಳ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಂಟಿ ಕೃಷಿ ನಿರ್ದೇಶಕ ಸೋಮಸುಂದರ ಕೆ.ಎಂ., ಉಪ ಕೃಷಿ ನಿರ್ದೇಶಕ ಮಂಜುನಾಥ್ ಎಸ್.ಎನ್ ಸೇರಿದಂತೆ ರಾಜ್ಯದ ನಿರ್ದೇಶಕರು, ಎಲ್ಲಾ ಜಿಲ್ಲಾ ಪ್ರತಿನಿಧಿಗಳು ಮತ್ತು ನಿರ್ದೇಶಕರು, ತಾಲ್ಲೂಕು ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮತ್ತು ನಿರ್ದೇಶಕರು, ಜಿಲ್ಲಾ ಮತ್ತು ತಾಲ್ಲೂಕು ಖಜಾಂಚಿ ಮತ್ತು ಕಾರ್ಯದರ್ಶಿಗಳು, ಕೃಷಿ ಸಮಾಜದವರು, ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳು, ಎಲ್ಲಾ ರೈತ ಮತ್ತು ಸಂಘ-ಸAಸ್ಥೆಗಳು, ಪ್ರತಿಪರ ರೈತರು ಮತ್ತು ರೈತ ಮಹಿಳೆಯರು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
-----------------
ತೋಟಗಾರಿಕೆ ಇಲಾಖೆ: ತರಕಾರಿ ಬೀಜದ ಕಿಟ್ ಪಡೆಯಲು ಅರ್ಜಿ ಆಹ್ವಾನ
ಬಳ್ಳಾರಿ,ನ.07(ಕರ್ನಾಟಕ ವಾರ್ತೆ):
ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕೆ.ಕೆ.ಆರ್.ಡಿ.ಬಿ ಯೋಜನೆಯಡಿ ಬಳ್ಳಾರಿ, ಕುರುಗೋಡು ಹಾಗೂ ಕಂಪ್ಲಿ ತಾಲ್ಲೂಕು ವ್ಯಾಪ್ತಿಗೆ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದವರಿಗೆ ತರಕಾರಿ ಬೀಜದ ಕಿಟ್ ವಿತರಣೆ ಮಾಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯ ಭೌತಿಕ 600 ಫಲಾನುಭವಿಗಳಿಗೆ ಆರ್ಥಿಕ ರೂ.30 ಲಕ್ಷ ಮತ್ತು ಪರಿಶಿಷ್ಟ್ಟ ಪಂಗಡದ ಭೌತಿಕ 2,400 ಫಲಾನುಭವಿಗಳಿಗೆ ಆರ್ಥಿಕ ರೂ.120 ಲಕ್ಷ ಇದೆ.
ಆಸಕ್ತ ರೈತರು ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಖಾತೆಯ ಪುಸ್ತಕ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ಗಳೊಂದಿಗೆ ನವೆಂಬರ್ 25 ರೊಳಗಾಗಿ ಆಯಾ ಹೋಬಳಿಯ ಅಧಿಕಾರಿಗಳಿಗೆ ಅಥವಾ ಬಳ್ಳಾರಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಬಳ್ಳಾರಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಗುರುವಾರ, ನವೆಂಬರ್ 6, 2025
ಎಸ್ಸಿಎಸ್ಪಿ, ಟಿಎಸ್ಪಿ ಅನುದಾನ ಬಳಕೆ ಮಾಡದ ಅಧಿಕಾರಿಗಳ ಮೇಲೆ ಡಿಸಿ ಗರಂ ಜಿಲ್ಲಾ ಮಟ್ಟದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಪ್ರಗತಿ ಸಭೆ ನಡೆಸಿ ನಿರ್ದೇಶನ | ಪರಿಶಿಷ್ಟರ ಅಭಿವೃದ್ಧಿಗಾಗಿಯೇ ಎಸ್ಸಿಎಸ್ಪಿ, ಟಿಎಸ್ಪಿ ಅನುದಾನ ಮೀಸಲಿದ್ದು, ಪೂರ್ಣ ಪ್ರಮಾಣದಲ್ಲಿ ವ್ಯಯಿಸಿ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ
ಬಳ್ಳಾರಿ,ನ.06(ಕರ್ನಾಟಕ ವಾರ್ತೆ):
ಪರಿಶಿಷ್ಟರ ಆರ್ಥಿಕ ಸ್ಥಿತಿ ಸುಧಾರಣೆಯಾಗಲು, ಅವರ ಪ್ರಮಾಣಕ್ಕನುಸಾರವಾಗಿ ರಾಜ್ಯ ಸರ್ಕಾರವು ಆಯವ್ಯಯದಲ್ಲಿ ವಿಶೇಷ ಅನುದಾನ ಮೀಸಲಿಡಲಾಗುತ್ತಿದ್ದು, ಅಧಿಕಾರಿಗಳು ಅವರಿಗಾಗಿಯೇ ಪೂರ್ಣ ಪ್ರಮಾಣದಲ್ಲಿ ವ್ಯಯಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.
ಜಿಲ್ಲೆಯಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆ ಕಾರ್ಯಕ್ರಮಗಳ ಅನುಷ್ಠಾನ ಕುರಿತು ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಪ್ರಗತಿ ಪರಿಶೀಲನೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ವೈಯಕ್ತಿಕ ಅಭಿವೃದ್ಧಿಗಾಗಿ ಅನುಷ್ಠಾನ ಮಾಡುವ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ ಮಾಡಲಾಗುತ್ತದೆ. ಅವರನ್ನು ಮುನ್ನಲೆಗೆ ತರಲು ಅಧಿಕಾರಿಗಳು ಪ್ರಾಮಾಣಿಕವಾಗಿ ಸೌಲಭ್ಯ ವಿತರಿಸಿ ಅನುದಾನ ವೆಚ್ಚ ಮಾಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿನ ಪರಿಶಿಷ್ಟ ರೈತರ ಮಾಹಿತಿ ನೀಡಬೇಕು. ಕೃಷಿ, ತೋಟಗಾರಿಕೆ ಇಲಾಖೆ ವತಿಯಿಂದ ಎಸ್ಸಿಎಸ್ಪಿ, ಟಿಎಸ್ಪಿ ಅನುದಾನದಡಿ ಅನುಷ್ಠಾನಗೊಳ್ಳುವ ವಿವಿಧ ಸೌಲಭ್ಯ ಮತ್ತು ಉಪಕರಣಗಳನ್ನು ಯುವ ರೈತರಿಗೆ ವಿತರಿಸಬೇಕು. ಅವರಿಗೆ ಪ್ರೋತ್ಸಾಹ ನೆರವು ನೀಡಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿ ಎಸ್ಸಿಎಸ್ಪಿ, ಟಿಎಸ್ಪಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ಇದರ ಮೇಲ್ವಿಚಾರಣೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮೇಲ್ವಿಚಾರಣಾ ಸಮಿತಿ ರಚಿಸಿ, ಪ್ರಗತಿ ನಡೆಸಲಾಗುವುದು. ಕೊನೆಯಲ್ಲಿ ರಾಜ್ಯಮಟ್ಟದ ಎಸ್ಸಿಎಸ್ಪಿ ಟಿಎಸ್ಪಿ ಅನುದಾನ ಕುರಿತು ಪರಿಶೀಲನೆಯಾಗಲಿದೆ. ಹಾಗಾಗಿ ಪೂರಕ ಮಾಹಿತಿ ಇಟ್ಟುಕೊಳ್ಳಬೇಕು ಎಂದು ನೋಡಲ್ ಅಧಿಕಾರಿ ಆದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.
*ಬಳಕೆಯಾಗದ ಅನುದಾನದ ಮರುಹಂಚಿಕೆ:*
ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಹಂಚಿಕೆ ಮಾಡಿರುವ ಮೊತ್ತವು ಖರ್ಚಾಗದೇ ಉಳಿದ ಸಂದರ್ಭದಲ್ಲಿ ಮಾರ್ಚ್ ಅಂತ್ಯದೊಳಗೆ ಅನುದಾನ ಖರ್ಚು ಮಾಡಬೇಕು. ಇಲ್ಲವಾದಲ್ಲಿ ಲೆಕ್ಕ ಪರಿಶೋಧನೆಯಾದ ಬಳಿಕ ಅದರ ಮುಂದಿನ ಹಣಕಾಸು ವರ್ಷಕ್ಕೆ ರಾಜ್ಯ ಸರ್ಕಾರದಿಂದ ಸೇರ್ಪಡೆಯಾಗುತ್ತದೆ. ಆದರೆ ಕೇಂದ್ರದ ಹಣ ಮರಳುವುದಿಲ್ಲ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧಿಕಾರಿಗಳಿಗೆ ಸ್ಪಷ್ಟಪಡಿಸಿದರು.
ಅಧಿಕಾರಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಅನುಷ್ಠಾನವಾಗುವ ಕಾರ್ಯಕ್ರಮಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದಲ್ಲಿ ಶಿಸ್ತುಕ್ರಮ ಕ್ರಮಕ್ಕೆ ಒಳಪಡುತ್ತಾರೆ ಎಂದು ಅವರು ತಿಳಿಸಿದರು.
ಮುಖ್ಯವಾಗಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಒದಗಿಸಿದ ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಾತ್ರ ವಿನಿಯೋಗಿಸಬೇಕು. ಅಧಿಕಾರಿಗಳು ತಮ್ಮ ಇಲಾಖೆಗಳಿಗೆ ಒದಗಿಸಿದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುದಾನವನ್ನು ಪರಿಶಿಷ್ಟರ ಏಳಿಗೆಗಾಗಿ ತಲುಪಿಸುವಲ್ಲಿ ತೊಂದರೆಗಳಿದ್ದಲ್ಲಿ ತಿಳಿಸಬೇಕು. ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.
*ಅಧಿಕಾರಿಗಳ ವಿರುದ್ಧ ಗರಂ:*
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಯವರು, ಅನುದಾನ ಬಳಕೆ ಮಾಡದ ಅಧಿಕಾರಿಗಳ ವಿರುದ್ಧ ಗರಂ ಆದರು.
ಜಿಲ್ಲೆಯಲ್ಲಿ ಜೆಜೆಎಂ ಕಾಮಗಾರಿ ಪ್ರಗತಿ ಪರಿಶೀಲಿಸಿದ ಅವರು, ರಾಜ್ಯ ಸರ್ಕಾರದಿಂದ ಎರಡು ಬಾರಿ ಅನುದಾನ ಬಿಡುಗಡೆಯಾಗಿದ್ದರೂ, ಯಾವುದೇ ರೀತಿಯ ಹಣ ಬಳಕೆಯಾಗಿಲ್ಲ ಮತ್ತು ಕಾಮಗಾರಿ ಪ್ರಗತಿಯಾಗಿಲ್ಲ. ಯೋಜನೆಯ ಮೇಲೆ ಉದಾಸೀನತೆ ತೋರುತ್ತಿದ್ದೀರಿ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ವಿವಿಧ ಇಲಾಖಾವಾರು ನೀಡುವ ಸೌಲಭ್ಯಗಳು ಮತ್ತು ಉಪಕರಣಗಳ ಬಗ್ಗೆ ವಿಚಾರಿಸಿ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
--------------
ಕುರುಗೋಡು ಪುರಸಭೆ: ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ
ಬಳ್ಳಾರಿ,ನ.06(ಕರ್ನಾಟಕ ವಾರ್ತೆ):
ಕುರುಗೋಡು ಪಟ್ಟಣದ ಮುಖ್ಯ ವೃತ್ತದಲ್ಲಿನ ಈಶ್ವರ ಪಾರ್ಕ್ ಕುರುಗೋಡು ಪುರಸಭೆ ಖಾತೆಯ ಕೆಎಮ್ಎಫ್-24 ಡಿಮ್ಯಾಂಡ್ ಪುಸ್ತಕದಲ್ಲಿ ನೋಂದಣಿ ಇರುವುದನ್ನು ತಿದ್ದುಪಡಿ ಮಾಡು ಪುರಸಭೆಯ ಖಾಲಿ ನಿವೇಶನ ಎಂದು ನಮೂದಿಸಿ ಈಶ್ವರ ಪಾರ್ಕ್ ಅನ್ನು ಬಸ್ ತಂಗುದಾಣವಾಗಿ ನಿರ್ಮಿಸಲು ಮತ್ತು ಈ ಜಾಗವನ್ನು ಕೆಕೆಆರ್ಟಿಸಿ ಇಲಾಖೆಗೆ ಹಸ್ತಾಂತರಿಸಲಾಗುತ್ತಿದ್ದು, ಈ ಆಸ್ತಿಯ ಕುರಿತು ಕುರುಗೋಡು ಪಟ್ಟಣದ ಸಾರ್ವಜನಿಕರಿಂದ ಯಾವುದೇ ರೀತಿಯ ತಂಟೆ-ತಕರಾರು ಇದ್ದಲ್ಲಿ ನ.10 ರೊಳಗಾಗಿ ಕುರುಗೋಡು ಪುರಸಭೆ ಕಚೇರಿಗೆ ಅರ್ಜಿಯ ಮೂಲಕ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಬಹುದು ಎಂದು ಕುರುಗೋಡು ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ನ.08 ರಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಬಳ್ಳಾರಿಗೆ
ಬಳ್ಳಾರಿ,ನ.06(ಕರ್ನಾಟಕ ವಾರ್ತೆ):
ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ನವೆಂಬರ್ 08 ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 09 ಗಂಟೆಗೆ ಬೆಂಗಳೂರಿನಿAದ ವಿಶೇಷ ವಿಮಾನದ ಮೂಲಕ 10 ಗಂಟೆಗೆ ತೋರಣಗಲ್ಲಿನ ಜಿಂದಾಲ್ ಏರ್ಸ್ಟಿçಪ್ ಗೆ ಆಗಮಿಸುವರು.
ಅಲ್ಲಿಂದ ಬೆಳಿಗ್ಗೆ 10.15 ಕ್ಕೆ ಹೊರಟು, ಬೆಳಿಗ್ಗೆ 11 ಗಂಟೆಗೆ ಕೃಷಿ ಇಲಾಖೆ ವತಿಯಿಂದ ಬಳ್ಳಾರಿ ನಗರದ ಹಳೆಯ ತಾಲ್ಲೂಕು ಕಚೇರಿಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಕೃಷಿಕ ಸಮಾಜ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಮಧ್ಯಾಹ್ನ 12 ಗಂಟೆಗೆ ಬಳ್ಳಾರಿಯಿಂದ ತೋರಣಗಲ್ಲಿನ ಜಿಂದಾಲ್ ಏರ್ಸ್ಟಿçಪ್ ಗೆ ಆಗಮಿಸಿ, ನಂತರ ಮಧ್ಯಾಹ್ನ 01 ಗಂಟೆಗೆ ವಿಶೇಷ ವಿಮಾನದ ಮೂಲಕ ಕಲಬುರಗಿ ಜಿಲ್ಲೆಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
------------
ಇಂಡಿಯಾ ಮೆರಿಟೈಮ್ ವೀಕ್ 2025ರಲ್ಲಿ ಕರ್ನಾಟಕ ಜಲಸಾರಿಗೆ ಮಂಡಳಿಯಿAದ ವಿವಿಧ ಒಪ್ಪಂದ
ಬಳ್ಳಾರಿ,ನ.06(ಕರ್ನಾಟಕ ವಾರ್ತೆ):
ಇಂಡಿಯಾ ಮೇರಿಟೈಮ್ ವೀಕ್-2025ರ ಸಂದರ್ಭದಲ್ಲಿ ಮುಂಬೈನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಅಧಿವೇಶನವನ್ನು ಕರ್ನಾಟಕ ಯಶಸ್ವಿಯಾಗಿ ಪೂರ್ಣಗೊಳಿಸಿ ಕರ್ನಾಟಕ ರಾಜ್ಯ ಜಲಸಾರಿಗೆ ಮಂಡಳಿಯು ವಿವಿಧ ಒಪ್ಪಂದ ಮಾಡಿಕೊಂಡಿದೆ.
ಇAಡಿಯಾ ಮೇರಿಟೈಮ್ ವೀಕ್ ದೇಶದ ಅಗ್ರಮಟ್ಟದ ಜಾಗತಿಕ ವೇದಿಕೆ ಆಗಿದ್ದು, ಭಾರತವನ್ನು ಜಾಗತಿಕ ಸಾಗರ ಜಲಸಾರಿಗೆಯ ಕೇಂದ್ರವಾಗಿ ಮತ್ತು ಬ್ಲೂ ಎಕಾನಮಿ ಕ್ಷೇತ್ರದಲ್ಲಿ ಮುಂಚೂಣಿಯ ರಾಷ್ಟçವನ್ನಾಗಿ ರೂಪಿಸುವ ದಿಶೆಯ ಮುನ್ನೋಟವನ್ನು ಅಧಿವೇಶನದಲ್ಲಿ ಪ್ರದರ್ಶಿಸಲಾಯಿತು.
ರಾಜ್ಯ ಸರ್ಕಾರದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್.ವೈದ್ಯ ಅವರು ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕದ ರಾಜ್ಯ ಅಧಿವೇಶನವು 'ಸುಸ್ಥಿರ ನೀಲಿ ಆರ್ಥಿಕತೆಗಾಗಿ ಪಿಪಿಪಿ ಸಿನರ್ಜಿಗಳನ್ನು ಅನ್ವೇಷಿಸುವುದು' (Exploring PPP Synergies for a Sustainable Blue Economy) ಎಂಬ ವಿಷಯದ ಮೇಲೆ ಕೇಂದ್ರೀಕೃತವಾಗಿತ್ತು. ಈ ಅಧಿವೇಶನವು ಸುಮಾರು 4,500 ಕೋಟಿ ಮೌಲ್ಯದ ಪ್ರಮುಖ ಒಪ್ಪಂದ ಪತ್ರಗಳ ವಿನಿಮಯದೊಂದಿಗೆ ಯಶಸ್ವಿಯಾಗಿ ಮುಕ್ತಾಯವಾಯಿತು.
ಸಂಪರ್ಕತೆ ವೃದ್ಧಿ, ಮೂಲಸೌಕರ್ಯ ಅಭಿವೃದ್ಧಿ, ಮತ್ತು ನವೀಕೃತ ಮಾನವ ಸಂಪನ್ಮೂಲ ನಿರ್ಮಾಣಕ್ಕೆ ಕೇಂದ್ರೀಕೃತ ಒಪ್ಪಂದಗಳ ವಿನಿಮಯದ ಪ್ರಮುಖ ಅಂಶಗಳಾಗಿದ್ದವು.
ಅದರಲ್ಲಿ ಜೆಎಸ್ಡಬ್ಲ್ಯೂ ಇನ್ಫ್ರಾ-ಸ್ಟçಕ್ಚರ್ ಲಿಮಿಟೆಡ್ ಕಂಪನಿಯೊAದಿಗೆ ಕೆನಿಯಲ್ಲಿ ಪಿಪಿಪಿ ಆಧಾರದ ಮೇಲೆ ನಿರ್ಮಿಸಲ್ಪಡುವ ಸರ್ವಋತು ಡೀಪ್ ವಾಟರ್ ಗ್ರೀನ್ಫೀಲ್ಡ್ ಬಂದರು ಅಭಿವೃದ್ಧಿಗೆ ಸಂಬAಧಿಸಿದAತೆ ರೂ.4,118 ಕೋಟಿ ಮೌಲ್ಯದ ಕನ್ಸೆಶನ್ ಒಪ್ಪಂದ ಮಾಡಿಕೊಳ್ಳಲಾಯಿತು.
ಕೊಂಕಣ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್ ಸಂಸ್ಥೆಯೊAದಿಗೆ ಅಮದಳ್ಳಿ ರೈಲು ಸೈಡಿಂಗ್ ಅಭಿವೃದ್ಧಿಗೆ ಸಂಬAಧಿಸಿದAತೆ ರೂ.45.88 ಕೋಟಿ ಮೌಲ್ಯದ
ಒಪ್ಪಂದ, ಭಾರತ ಆಂತರಿಕ ಜಲಮಾರ್ಗ ಪ್ರಾಧಿಕಾರ ದೊಂದಿಗೆ ರಾಜ್ಯದ ರಾಷ್ಟಿçÃಯ ಜಲಮಾರ್ಗಗಳ ಅಭಿವೃದ್ಧಿಗೆ ಸಂಬAಧಿಸಿದAತೆ ರೂ.300 ಕೋಟಿ ಮೌಲ್ಯದ ಒಪ್ಪಂದ ಮಾಡಿಕೊಳ್ಳಲಾಯಿತು.
ನ್ಯಾಷನಲ್ ಇನ್ಲ್ಯಾಂಡ್ ನ್ಯಾವಿಗೇಶನ್ ಇನ್ಸಿ÷್ಟಟ್ಯೂಟ್, ಪಾಟ್ನಾ ದೊಂದಿಗೆ ಮಂಗಳೂರು ನಗರದಲ್ಲಿ ಇನ್ಲ್ಯಾಂಡ್ ವಾಟರ್ ಟ್ರಾನ್ಸ್ಪೋರ್ಟ್ ಮತ್ತು ನ್ಯಾವಿಗೇಶನ್ನಲ್ಲಿ ಶ್ರೇಷ್ಠತೆ ಕೇಂದ್ರ ಸ್ಥಾಪನೆಗೆ ರೂ.50 ಕೋಟಿ ಮೌಲ್ಯದ ಒಪ್ಪಂದ, ಕರ್ನಾಟಕ ಸರ್ಕಾರದ ಮೀನುಗಾರಿಕೆ ಇಲಾಖೆಯೊಂದಿಗೆ ಬಳ್ಳಾರಿ ಜಿಲ್ಲೆಯಲ್ಲಿ ತಂಪು ಸಂಗ್ರಹಣೆ, ಸಂಸ್ಕರಣಾ ಘಟಕಗಳು ಮತ್ತು ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ ಸೇರಿದಂತೆ ವಿವಿಧ ಯೋಜನೆಗಳಿಗಾಗಿ ರೂ.12 ಕೋಟಿ ಮೌಲ್ಯದ ಒಪ್ಪಂದ ಮಾಡಿಕೊಂಡು ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯ ಸಮುದ್ರ ಮತ್ತು ಜಲಮಾರ್ಗ ಮಾಸ್ಟರ್ ಪ್ಲಾನ್ ಕುರಿತಾಗಿ ಸುದೀರ್ಘವಾಗಿ ಚರ್ಚಿಸಲಾಯಿತು.
ಈ ಯೋಜನೆ ಒಟ್ಟು ರೂ.23,000 ಕೋಟಿ ಮೌಲ್ಯದ 126 ಯೋಜನೆಗಳನ್ನು ಒಳಗೊಂಡಿದ್ದು, ರಾಜ್ಯದ ಸಮುದ್ರ ಮತ್ತು ಜಲಮಾರ್ಗ ಅಭಿವೃದ್ಧಿಗೆ ಸಮಗ್ರ ದೃಷ್ಟಿಕೋನ ನೀಡಲಿದೆ.
ಈ ಪೈಕಿ ರೂ.7,500 ಕೋಟಿಗೂ ಹೆಚ್ಚು ಮೌಲ್ಯದ 10 ಪ್ರಮುಖ ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಯೋಜನೆಗಳು ತಕ್ಷಣದ ಪ್ರಾರಂಭಕ್ಕೆ ಸಿದ್ಧವಾಗಿವೆ. ಇವುಗಳಲ್ಲಿ ಮಂಗಳೂರು ವಾಟರ್ ಮೆಟ್ರೋ ಮತ್ತು ರಾಜ್ಯದ ಮೊದಲ ಸಮುದ್ರ ಸಂಗ್ರಹಾಲಯವು ಮಂಗಳೂರು ನಗರದಲ್ಲಿ ಸ್ಥಾಪನೆಯಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ.
ಈ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರದ ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡುಜಲಸಾರಿಗೆ ಇಲಾಖೆಯ ಕಾರ್ಯದರ್ಶಿ ಡಾ.ಮಂಜುಳ ಎನ್., ನ್ಯೂ ಮಂಗಳೂರು ಪೋರ್ಟ್ ಅಥಾರಿಟಿಯ ಅಧ್ಯಕ್ಷ ಡಾ. ಎ.ವಿ.ರಮಣ, ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಾಲಚಂದ್ರ ಹೆಚ್.ಸಿ., ಕರ್ನಾಟಕ ಜಲಸಾರಿಗೆ ಮಂಡಳಿಯ ನಿರ್ದೇಶಕ ದಿವಾಕರ್ ನಾಯಕ್ ಹಾಜರಿದ್ದರು.
-----------------
ಇಪಿಎಫ್ಓ: ನ.13 ರಂದು ಪಿಂಚಣಿ ಅದಾಲತ್
ಬಳ್ಳಾರಿ,ನ.06(ಕರ್ನಾಟಕ ವಾರ್ತೆ):
ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ನವೆಂಬರ್ 13 ರಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಕೆ.ವಿ ಪ್ರವೀಣ್ ಅವರು ತಿಳಿಸಿದ್ದಾರೆ.
ಬಳ್ಳಾರಿ, ವಿಜಯನಗರ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳಿದ್ದಲ್ಲಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ಪಿ.ಪಿ.ಒ ಸಂಖ್ಯೆ, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ ಮತ್ತು ಕುಂದು ಕೊರತೆಯ ಸ್ವರೂಪ ಹಾಗೂ ಇತ್ಯಾದಿಗಳನ್ನು ಅಂಚೆ ಪತ್ರದ ಮೂಲಕ ನವೆಂಬರ್ 10 ರೊಳಗಾಗಿ ತಿಳಿಸಬಹುದು. ಪತ್ರ ಲಕೋಟೆ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.08392-268943 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
ಬಳ್ಳಾರಿ,ನ.06(ಕರ್ನಾಟಕ ವಾರ್ತೆ):
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕಾನೂನು ಪದವೀಧರರ ವೃತ್ತಿ ತರಬೇತಿ ಶಿಷ್ಯವೇತನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ನವೆಂಬರ್ 21 ರವರೆಗೆ ವಿಸ್ತರಿಸಲಾಗಿದೆ.
ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನಾ ಆಜಾದ್ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು.
ಸೂಚನೆ:
ಅಭ್ಯರ್ಥಿಗಳು ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ಮೀರಿರಬಾರದು. ಬಾರ್ ಕೌನ್ಸಿಲ್ನಲ್ಲಿ ಅಭ್ಯರ್ಥಿಗಳ ಹೆಸರು ನೋಂದಾಯಿಸಿರಬೇಕು.
ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆÀಯ ದಿನಾಂಕಕ್ಕೆ 2 ವಷÀðಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯನ್ನು ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷಗಳೊಳಗೆ ಇರಬೇಕು.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ದೂ.08392-200215, ಮೊ.8310321101, ಸಿರುಗುಪ್ಪ-9148889975, ಸಂಡೂರು-9036925966 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಬುಧವಾರ, ನವೆಂಬರ್ 5, 2025
ಬಳ್ಳಾರಿ: ನ.13 ರಿಂದ 18 ರವರೆಗೆ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿ
ಬಳ್ಳಾರಿ,ನ.05(ಕರ್ನಾಟಕ ವಾರ್ತೆ):
ಬೆಂಗಳೂರು ಪ್ರಧಾನ ಕಚೇರಿ ನೇಮಕಾತಿ ವಲಯದಿಂದ ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್ 13 ರಿಂದ 18 ರವರೆಗೆ ಅಗ್ನಿವೀರ್ ನೇಮಕಾತಿ ರ್ಯಾಲಿ ನಡೆಯಲಿದೆ ಎಂದು ಸೇನಾ ನೇಮಕಾತಿಯ ಅಧಿಕಾರಿ ಕರ್ನಲ್ ವಿವೇಕ್ ಜಮಿಂದಾರ್ ಅವರು ತಿಳಿಸಿದ್ದಾರೆ.
ಕರ್ನಾಟಕದ ಅಗ್ನಿವೀರ್ ವಿಭಾಗಗಳ ಅರ್ಜಿದಾರರು 30 ಜೂನ್ 2025 ರಿಂದ 10 ಜುಲೈ 2025 ರವರೆಗೆ ನಡೆಸಲಾದ ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಿ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಕ್ಲರ್ಕ್/ಸ್ಟೋರ್ ಕೀಪರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್ಮನ್ (10 ನೇ ಪಾಸ್), ಅಗ್ನಿವೀರ್ ಟ್ರೇಡ್ಸ್ಮನ್ (8 ನೇ ಪಾಸ್) ಮತ್ತು ಬಹು ವಿಭಾಗಗಳಲ್ಲಿ ಅರ್ಜಿ ಸಲ್ಲಿಸಿ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಕರ್ನಾಟಕ ರಾಜ್ಯದ ಬೆಂಗಳೂರು ಗ್ರಾಮೀಣ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಸೇನೆಯಲ್ಲಿ ನಿರ್ದಿಷ್ಟಪಡಿಸಿದ ಅಗ್ನಿವೀರ್ ವಿಭಾಗಗಳಿಗೆ ಅಭ್ಯರ್ಥಿಗಳ ದಾಖಲಾತಿಗಾಗಿ ದಾಖಲಾತಿಗಾಗಿ ವಯಸ್ಸು, ಶಿಕ್ಷಣ ಅರ್ಹತೆ ಇತರ ಮಾನದಂಡಗಳ ವಿವರಗಳನ್ನು ಆನ್ಲೈನ್ ಜೆಐಎ ವೆಬ್ಸೈಟ್ನಲ್ಲಿ 2025 ರ ಮಾ.12 ರಂದು ಪ್ರಕಟಿಸಲಾಗಿದೆ.
ಸೇನಾ ನೇಮಕಾತಿಯ ಆನ್ಲೈನ್ ವೆಬ್ಸೈಟ್ www.joinindianarmy.nic.in ನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಮತ್ತು ಪ್ರವೇಶ ಕಾರ್ಡ್ಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.
ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಈಗಾಗಲೇ ಅವರ ಇಮೇಲ್ ಗೆ ರವಾನಿಸಲಾಗಿದೆ. ಅಭ್ಯರ್ಥಿಗಳು ವೈಯಕ್ತಿಕ ಖಾತೆ ಮತ್ತು ನೋಂದಾಯಿತ ಇಮೇಲ್ ಐಡಿಯನ್ನು ಲಾಗಿನ್ ಮಾಡುವ ಮೂಲಕ ಪಡೆದುಕೊಳ್ಳಬಹುದು. ಈ ಹಿಂದೆ ಪ್ರಕಟಿಸಲಾದ ಪ್ರಕಟಣೆಗಳು ರದ್ದಾಗಿದ್ದು, ಈ ಪ್ರಕಟಣೆಯು ಅಧಿಕೃತವಾಗಿದೆ.
ನ.05 ರಂದು ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಹೊಸ ಪ್ರವೇಶ ಕಾರ್ಡ್ಗಳನ್ನು ನೀಡಲಾಗಿದೆ. ಅಭ್ಯರ್ಥಿಗಳು ತಮ್ಮ ಇಮೇಲ್ಗಳಲ್ಲಿ ಲಭ್ಯವಿರುವ ಹೊಸ ಪ್ರವೇಶ ಕಾರ್ಡ್ಗಳಲ್ಲಿ ಮುದ್ರಿಸಲಾದ ನಿರ್ದಿಷ್ಠ ದಿನಾಂಕಗಳAದು ನಡೆಯುವ ರ್ಯಾಲಿಯಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ವಿಜಯಪುರ, ಬಾಗಲಕೋಟೆ, ಗದಗ, ಧಾರವಾಡ, ಉತ್ತರ ಕನ್ನಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸೇರಿದ ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ನೇಮಕಾತಿ ರ್ಯಾಲಿಯನ್ನು ಪ್ರತ್ಯೇಕವಾಗಿ ನಡೆಸಲಾಗುವುದು. ದಿನಾಂಕಗಳನ್ನು ನಂತರ ತಿಳಿಸಲಾಗುವುದು.
ಹಾಗಾಗಿ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳಿಗೆ ಕಿವಿಗೊಡಬಾರದು. ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ, ಅಭ್ಯರ್ಥಿಗಳ ಕಾರ್ಯಕ್ಷಮತೆ, ನೇಮಕಾತಿ ರ್ಯಾಲಿಯ ಸಮಯದಲ್ಲಿ ನಡೆಸಿದ ಶಾರೀರಿಕ, ವೈದ್ಯಕೀಯ ಪರೀಕ್ಷೆಗಳು ಮತ್ತು ಅಂತಿಮ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಮಾಹಿತಿಗಾಗಿ ಬೆಂಗಳೂರು ಪ್ರಧಾನ ಕಚೇರಿಯ ನೇಮಕಾತಿ ಅಧಿಕಾರಿಗಳ ಕಚೇರಿಯ ದೂ.080-29516517, ಮೊ.9596605198, 9675299174 ಮತ್ತು ಮಂಗಳೂರು ಎಆರ್ಓ ಕಚೇರಿಯ ದೂ.0824-2951276 ಗೆ ಸಂಪರ್ಕಿಸಬಹುದು ಎಂದು ಸೇನಾ ನೇಮಕಾತಿಯ ಅಧಿಕಾರಿ ಕರ್ನಲ್ ವಿವೇಕ್ ಜಮಿಂದಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)
















































