ಬುಧವಾರ, ನವೆಂಬರ್ 26, 2025

ಕಾನೂನು ಅರಿವು ಕಾರ್ಯಕ್ರಮದಲ್ಲಿ ನ್ಯಾಯಾಧೀಶೆ ಕೆ.ಜಿ.ಶಾಂತಿ ಹೇಳಿಕೆ | ಮಹಿಳೆಯರು ಕೆಲಸದ ಸ್ಥಳದಲ್ಲಿ ಉತ್ತಮ ಭಾಂದವ್ಯ ಹೊಂದಿರಬೇಕು

ಬಳ್ಳಾರಿ,ನ.26(ಕರ್ನಾಟಕ ವಾರ್ತೆ): ಮಹಿಳೆಯರು ತಾವು ಕೆಲಸ ಮಾಡುವ ಸ್ಥಳ, ಕಚೇರಿ ಮತ್ತು ಮನೆಯಲ್ಲೂ ಉತ್ತಮ ಭಾಂದವ್ಯ ಹೊಂದಿರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು ಹೇಳಿದರು. ಜಿಲ್ಲಾ ನ್ಯಾಯಾಂಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯದ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ‘ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆಗೆ ಅಂತರಾಷ್ಟಿçÃಯ ದಿನ’ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಮತ್ತು ಪುರುಷರು ಪರಸ್ಪರ ಗೌರವ ಮನೋಭಾವನೆಯಿಂದ ಕಾಣಬೇಕು. ಮಹಿಳೆಗೆ ಸಮಸ್ಯೆ ಉಂಟಾದಲ್ಲಿ ಅವರ ರಕ್ಷಣೆಗಾಗಿ ಮಹಿಳಾ ದೌರ್ಜನ್ಯ ನಿರ್ಮೂಲನಾ ಕಾಯ್ದೆ ಇದ್ದು, ಇದರ ಅರಿವು ಹೊಂದಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ವಕೀಲರ ಸಂಘದ ವಕೀಲರಾದ ಶಿವಲೀಲ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿ, 10 ಜನಕ್ಕಿಂತ ಹೆಚ್ಚು ಮಹಿಳೆಯರು ಕೆಲಸ ಮಾಡುವ ಸ್ಥಳದಲ್ಲಿ ಮಹಿಳಾ ಆಂತರಿಕ ದೂರು ಸಮಿತಿ ಇರಬೇಕು. ಮಹಿಳೆ ತನ್ನ ಮೇಲೆ ದೈಹಿಕ, ಮಾನಸಿಕ ಸೇರಿದಂತೆ ಯಾವುದೇ ರೀತಿ ದೌರ್ಜನ್ಯವಾದಲ್ಲಿ ಮೂರು ತಿಂಗಳೊಳಗೆ ಆಂತರಿಕ ದೂರು ಸಮಿತಿಗೆ ದೂರು ಸಲ್ಲಿಸಬೇಕು. ಬಳಿಕ ಸಮಿತಿ ಪರಿಶೀಲನಾ ಕ್ರಮ ಕೈಗೊಳ್ಳಲಾಗುತ್ತದೆ. ಇಲ್ಲಿ ಸೌಹಾರ್ದಕ್ಕೆ ರಾಜಿ ಆಗಬಹುದು ಆದರೆ ಹಣಕ್ಕಾಗಿ ಅಲ್ಲ, ಪರಸ್ಪರ ಗೌರವದಿಂದ ಹೊಂದಿಕೊAಡು ಕೆಲಸ ಮಾಡಬೇಕು ಎಂದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಬಡ ಜನತೆಗೆ ಇರುವ ಕಾನೂನು ಸೇವೆಗಳ ಮಾಹಿತಿ ಕುರಿತ ವೀಡಿಯೋ ಚಿತ್ರಣ ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಸೇರಿದಂತೆ ಜಿಲ್ಲಾ ನ್ಯಾಯಾಲಯದ ಎಲ್ಲಾ ನ್ಯಾಯಾಧೀಶರು ಹಾಗೂ ನ್ಯಾಯಾಲಯದ ಅಧಿಕಾರಿ-ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ