ಮಂಗಳವಾರ, ಡಿಸೆಂಬರ್ 30, 2025

‘ರಾಷ್ಟçಕ್ಕಾಗಿ ಮಧ್ಯಸ್ಥಿಕೆ’ 90 ದಿನಗಳ ವಿಶೇಷ ಅಭಿಯಾನ 2.0

ಬಳ್ಳಾರಿ,ಡಿ.30(ಕರ್ನಾಟಕ ವಾರ್ತೆ): ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಎಲ್ಲಾ ತಾಲ್ಲೂಕು ನ್ಯಾಯಾಲಯಗಳು ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸಲು ಜನವರಿ 02 ರಿಂದ ‘ರಾಷ್ಟçಕ್ಕಾಗಿ ಮಧ್ಯಸ್ಥಿಕೆ’ 90 ದಿನಗಳ ವಿಶೇಷ ಅಭಿಯಾನ 2.0 ಹಮ್ಮಿಕೊಳ್ಳಲಾಗಿದೆ. ಸುಪ್ರೀಂ ಕೋರ್ಟ್ ನ ಮಧ್ಯಸ್ಥಿಕೆ ಮತ್ತು ಸಂಧಾನ ಯೋಜನಾ ಸಮಿತಿಯ ಸಹಯೋಗದೊಂದಿಗೆ ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರವು “ರಾಷ್ಟçಕ್ಕಾಗಿ ಮಧ್ಯಸ್ಥಿಕೆ 2.0” ಅಭಿಯಾನವನ್ನು ರೂಪಿಸಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಮತ್ತು ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಧ್ಯಸ್ಥಿಕೆ ಸಂಧಾನ ಯೋಜನಾ ಸಮಿತಿಯಿಂದ “ರಾಷ್ಟçಕ್ಕಾಗಿ ಮಧ್ಯಸ್ಥಿಕೆ ಅಭಿಯಾನ 2.0” (ಭಾರತದ ಎಲ್ಲಾ ತಾಲ್ಲೂಕು ನ್ಯಾಯಾಲಯಗಳು, ಜಿಲ್ಲಾ ನ್ಯಾಯಾಲಯಗಳು ಮತ್ತು ಹೈಕೋರ್ಟ್ ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು 90 ದಿನಗಳ ಮಧ್ಯಸ್ಥಿಕೆ ಅಭಿಯಾನ) ಕುರಿತು ಸಮಯವನ್ನು ಜನವರಿ 02 ರಿಂದ ನಿಗದಿಪಡಿಸಲಾಗಿದೆ. ಹಾಗಾಗಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜನವರಿ 02 ರಿಂದ 90 ದಿನಗಳ ವರೆಗೆ ‘ರಾಷ್ಟçಕ್ಕಾಗಿ ಮಧ್ಯಸ್ಥಿಕೆ' ಅಭಿಯಾನದಂತೆ ಮಧ್ಯಸ್ಥಿಕೆ ಮುಖಾಂತರ ರಾಜಿಯಾಗಬಹುದಾದ ಕ್ರಿಮಿನಲ್ ಮತ್ತು ಸಿವಿಲ್ ಪ್ರಕರಣಗಳನ್ನು ಮಧ್ಯಸ್ಥಿಕೆ ಮುಖಾಂತರ ಇತ್ಯರ್ಥಪಡಿಸಲಿದ್ದು, ಈ ಅಭಿಯಾನಕ್ಕೆ ಎರಡೂ ಜಿಲ್ಲೆಯ ವಕೀಲರು ಮತ್ತು ಕಕ್ಷಿದಾರರು ಸಹ ಸಹಕಾರ ನೀಡಲಿರುವರು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ.ಶಾಂತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ