ಬುಧವಾರ, ಜನವರಿ 7, 2026
ಬಳ್ಳಾರಿ ವಲಯ ನೂತನ ಡಿಐಜಿಯಾಗಿ ಡಾ.ಪಿ.ಎಸ್ ಹರ್ಷ ನೇಮಕ
ಬಳ್ಳಾರಿ,ಜ.07(ಕರ್ನಾಟಕ ವಾರ್ತೆ):
ಬಳ್ಳಾರಿ ವಲಯ ನೂತನ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಡಾ.ಪಿ.ಎಸ್ ಹರ್ಷ ಅವರನ್ನು ನೇಮಿಸಿ ಸರ್ಕಾರ ಅದೇಶಿಸಿದ್ದು, ಅವರು ಬುಧವಾರ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.
ಬಳಿಕ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ಕಾನೂನುಬದ್ಧ, ನಿಷ್ಪಕ್ಷಪಾತ ಹಾಗೂ ಕಾನೂನು ಸುವ್ಯವಸ್ಥೆಯನ್ನು ಭದ್ರ-ಬುನಾದಿಯಾಗಿಸಲು ಸರ್ಕಾರ ಮತ್ತು ಹಿರಿಯ ಅಧಿಕಾರಿಗಳ ನಿರ್ದೇಶನ ನೀಡಿದೆ. ಬಳ್ಳಾರಿ ವಲಯದ ಬಳ್ಳಾರಿ, ವಿಜಯನಗರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳು ಪ್ರಮುಖ ಮತ್ತು ಶಾಂತಿಪ್ರಿಯ ಜಿಲ್ಲೆಗಳಾಗಿದ್ದು, ಕಾನೂನು ಸುವ್ಯವಸ್ಥೆಯನ್ನು ಭದ್ರಗೊಳಿಸಲು ಹಾಗೂ ಜನಸ್ನೇಹಿ ಆಡಳಿತ ನೀಡಲು ಪೊಲೀಸ್ ಇಲಾಖೆ ಬದ್ಧವಾಗಿದೆ ಎಂದು ಹೇಳಿದರು.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ