ಮಂಗಳವಾರ, ಫೆಬ್ರವರಿ 10, 2026
ಜೇನು ಕೃಷಿ ತರಬೇತಿ: ನೋಂದಣಿಗೆ ಆಹ್ವಾನ
ಬಳ್ಳಾರಿ,ಫೆ.10(ಕರ್ನಾಟಕ ವಾರ್ತೆ):
ಕಂಪ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ಫೆ.16 ರಿಂದ 21 ರ ವರೆಗೆ 6 ದಿನಗಳ ಜೇನು ಕೃಷಿಯ ಕುರಿತು ಉಚಿತ ತರಬೇತಿಯನ್ನು ಕಂಪ್ಲಿಯ ಕೃಷಿ ತರಬೇತಿ ಕೇಂದ್ರದಲ್ಲಿ ನೀಡಲು ಉದ್ದೇಶಿಸಲಾಗಿದ್ದು, ಆಸಕ್ತ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಎಲ್ಲಾ ವರ್ಗದ ರೈತರು, ರೈತ ಮಹಿಳೆಯರಿಂದ ಹೆಸರು ನೋಂದಣಿಮಾಡಿಕೊಳ್ಳಲು ಆಹ್ವಾನಿಸಲಾಗಿದೆ.
ತರಬೇತಿಯಲ್ಲಿ ಊಟ ಹಾಗೂ ವಸತಿ ಸೌಕರ್ಯ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರಾದ ವಿದ್ಯಾವತಿ ಹೊಸಮನಿ(ಮೊ.7353533138), ಕೃಷಿ ಅಧಿಕಾರಿಗಳಾದ ಯೇಸುಬಾಬು(ಮೊ.6360645255), ನವ್ಯ ಪ್ರಶಾಂತ್(ಮೊ.6360139316) ಗೆ ಸಂಪರ್ಕಿಸಬಹುದು ಎಂದು ಕಂಪ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ