ಶುಕ್ರವಾರ, ಫೆಬ್ರವರಿ 27, 2026
ಕುರೇಕುಪ್ಪ: ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಫೆ.27(ಕರ್ನಾಟಕ ವಾರ್ತೆ):
ಕುರೇಕುಪ್ಪ ಪುರಸಭೆ ವತಿಯಿಂದ 2019-20ನೇ ಸಾಲಿನ ಎಸ್ಸಿಎಸ್ಪಿ ಯೋಜನೆಯಡಿ ಬಾಕಿ ಉಳಿದ ಮೊತ್ತಕ್ಕೆ ಅರ್ಹ ಫಲಾನುಭವಿಗಳಿಂದ ಶೌಚಾಲಯ ನಿರ್ಮಾಣಕ್ಕಾಗಿ ಸಹಾಯಧನ ಪಡೆಯಲು ಪುನಃ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾ.07 ಕೊನೆಯ ದಿನವಾಗಿದೆ.
*ಬೇಕಾದ ದಾಖಲೆ:*
ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ಜಾತಿ ಮತ್ತು ಆಧಾಯ ಪ್ರಮಾಣ ಪತ್ರ, ಇತ್ತೀಚಿನ ಭಾವ ಚಿತ್ರ ಹಾಗೂ ಮನೆಗೆ ಸಂಬAಧಿಸಿದ ತೆರಿಗೆ ರಶೀದಿ, ನಮೂನೆ-03, ಜೆರಾಕ್ಸ್ ಪ್ರತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕುರೇಕುಪ್ಪ ಪುರಸಭೆ ಕಚೇರಿಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ