ಬುಧವಾರ, ಮಾರ್ಚ್ 25, 2026

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಬಳ್ಳಾರಿ,ಮಾ.25(ಕರ್ನಾಟಕ ವಾರ್ತೆ): ನಗರದ ಕೌಲ್ ಬಜಾರ್ ನ ತಿಲಕ್ ನಗರದ ಸಾಯಿಬಾಬಾ ದೇವಸ್ಥಾನದ ಹತ್ತಿರ ನಿವಾಸಿ ಯುವರಾಜ್ ಎನ್ನುವ 26 ವರ್ಷದ ವ್ಯಕ್ತಿ ಮಾ.23 ರಂದು ಮನೆಯಿಂದ ಹೋದವನು ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಕೌಲ್‌ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ಚಹರೆ: ಎತ್ತರ ಅಂದಾಜು 5 ಅಡಿ, ದುಂಡು ಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈ ಬಣ್ಣ ಹೊಂದಿದ್ದು, ಕುರುಚಲು ಗಡ್ಡ ಮತ್ತು ಮೀಸೆ ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬು ತೋಳಿನ ಅಂಗಿ ಮತ್ತು ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್‌ಬಜಾರ್ ಪೊಲೀಸ್ ಠಾಣೆಯ ದೂ.08392240731, 08392244145, ಪಿ.ಐ ಮೊ.9480803047, ಪಿಎಸ್‌ಐ 94808203084, 9480803085 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ