ಶುಕ್ರವಾರ, ಮೇ 8, 2026
ಕಡಲೆಕಾಳು ಖರೀದಿ ಅವಧಿ ಮೇ 28 ರವರೆಗೆ ವಿಸ್ತರಣೆ
ಬಳ್ಳಾರಿ,ಮೇ 08(ಕರ್ನಾಟಕ ವಾರ್ತೆ):
2025-26ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿಯ ನಿಗದಿತ ಕಾಲಾವಧಿಯನ್ನು ಮೇ 28 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಡಲೆಕಾಳು ಖರೀದಿಯ ಪ್ರಕ್ರಿಯೆಯು ಮೇ 28 ರವರೆಗೆ ಮುಂದುವರಿಯಲಿದೆ. ಈ ಯೋಜನೆಯಡಿ ಕೇವಲ ಈಗಾಗಲೇ ನೋಂದಾಯಿತರಾಗಿರುವ ರೈತರಿಂದ ಮಾತ್ರ ಉತ್ಪನ್ನವನ್ನು ಖರೀದಿಸಲಾಗುತ್ತದೆ. ಖರೀದಿ ಪ್ರಕ್ರಿಯೆಯ ಉಳಿದ ನಿಯಮ ಹಾಗೂ ನಿಬಂಧನೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಅಥವಾ ಗೊಂದಲಗಳಿದ್ದಲ್ಲಿ ರೈತರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬಳ್ಳಾರಿ ಶಾಖೆಯನ್ನು ಅಥವಾ ಮೊ.9449864453 ಅನ್ನು ಸಂಪರ್ಕಿಸಬಹುದಾಗಿದೆ.
ರೈತರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೊರೆ ಹೋಗಬಾರದು. ಸರ್ಕಾರದ ಈ ಸೌಲಭ್ಯವನ್ನು ರೈತರು ನೇರವಾಗಿ ಪಡೆದುಕೊಳ್ಳಬೇಕು ಮತ್ತು ಯಾವುದೇ ವಂಚನೆಗೆ ಒಳಗಾಗಬಾರದು. ಜಿಲ್ಲೆಯ ಎಲ್ಲಾ ಅರ್ಹ ರೈತರು ನಿಗದಿತ ಅವಧಿಯೊಳಗೆ ತಮ್ಮ ಕಡಲೆಕಾಳು ಉತ್ಪನ್ನವನ್ನು ಮಾರಾಟ ಮಾಡಿ ಬೆಂಬಲ ಬೆಲೆಯ ಪ್ರಯೋಜನ ಪಡೆಯಬೇಕು ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ