ಸೋಮವಾರ, ಮೇ 11, 2026

ಬಳ್ಳಾರಿ: ಜಿಲ್ಲಾಡಳಿತದಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಸರಳ ಆಚರಣೆ

ಬಳ್ಳಾರಿ,ಮೇ 10(ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ 'ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿ'ಯನ್ನು ಭಾನುವಾರ ಅತ್ಯಂತ ಸರಳವಾಗಿ ಆಚರಿಸಲಾಯಿತು. ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಶೋಕ ಆಚರಿಸಲಾಗುತ್ತಿದ್ದು, ಸಚಿವರ ನಿಧನಕ್ಕೆ ಗೌರವ ಸೂಚಿಸುವ ಸಲುವಾಗಿ ಕೇವಲ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸಾಂಕೇತಿಕವಾಗಿ ಜಯಂತಿಯನ್ನು ಆಚರಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ಸಭಾಂಗಣದಲ್ಲಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು ಹಾಗೂ ಇದೇ ಸಂದರ್ಭದಲ್ಲಿ ಎರಡು ನಿಮಿಷಗಳ ಕಾಲ ಮೌನ ಆಚರಿಸಿ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಹಾಗೂ ಇಲಾಖೆಯ ಸಿಬ್ಬಂದಿ ವರ್ಗ ಇದ್ದರು. =====

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ